Homeಕರ್ನಾಟಕಖಚಿತವಾದ ಆತ್ಮಹತ್ಯೆ: ನೇತ್ರಾವತಿ ಹಿನ್ನೀರಿನಲ್ಲಿ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥ ಮೃತದೇಹ ಪತ್ತೆ

ಖಚಿತವಾದ ಆತ್ಮಹತ್ಯೆ: ನೇತ್ರಾವತಿ ಹಿನ್ನೀರಿನಲ್ಲಿ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥ ಮೃತದೇಹ ಪತ್ತೆ

- Advertisement -
- Advertisement -

ತೀವ್ರ ಆತಂಕ ಮೂಡಿಸಿದ್ದ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥರವರ ನಾಪತ್ತೆ ಪ್ರಕರಣಕ್ಕೆ ತೆರೆಬಿದ್ದಿದ್ದು ಅದು ಆತ್ಮಹತ್ಯೆ ಎಂಬುದು ಬಹುತೇಕ ಖಚಿತವಾಗಿದೆ. ತೀವ್ರ ಶೋಧದ ನಂತರ ಅವರ ಮೃತದೇಹ ಆಕಸ್ಮಿಕವಾಗಿ ಪತ್ತೆಯಾಗಿದ್ದು ಅವರು ಕುಟುಂಬದವರು ಅವರದೇ ದೇಹ ಎಂದು ಖಚಿತಪಡಿಸಿದ್ದಾರೆ.

ಸೋಮವಾರ ರಾತ್ರಿ ಕಣ್ಮರೆಯಾಗಿದ್ದ ಸಿದ್ಧಾರ್ಥ್ ರವರು ಜಪ್ಪಿನಮೊಗರು ಬಳಿ ಆತ್ಮಹತ್ಯೆಗೆ ಪ್ರಯತ್ನಿಸಿರಬಹುದು ಎಂಬ ದಟ್ಟ ಅನುಮಾನಗಳು ನಿಜವಾಗಿದೆ. 36 ಗಂಟೆಗಳ ತೀವ್ರ ಶೋಧ ನಡೆಯುತ್ತಿರುವಾಗಲೇ ಸ್ಥಳೀಯ ಮೀನುಗಾರರು ಮೀನುಗಾರಿಕೆಗೆಂದು ತೆರಳಿದ್ದಾಗ, ಹೊಯ್ಗೆ ಬಜಾರ್ ನ ಅಳಿವೆ ಬಾಗಿಲ ಬಳಿ ಬುಧವಾರ ಬೆಳಿಗ್ಗೆ 6.30ಕ್ಕೆ ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೃತದೇಹವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಸಾಗಿಸಿದ್ದು ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಿದೆ. ನಂತರ ಮುಂದಿನ ವಿಧಿ ವಿಧಾನಗಳ ಬಗ್ಗೆ ಕುಟುಂಬದವರು ನಿರ್ಧಾರ ಮಾಡಲಿದ್ದಾರೆ. ಸಿದ್ಧಾರ್ಥ್ ರವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಚಟ್ನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಕಳಚದ ಶೂ: ಜೇಬಿನಲ್ಲಿದ್ದ ಮೊಬೈಲ್

ಸಿದ್ಧಾರ್ಥ್ ರವರು ನಾಪತ್ತೆಯಾದಾಗಿನಿಂದಲೂ ಹಲವಾರು ಉಹಾಪೋಹಗಳು ಸೃಷ್ಟಿಯಾಗಿದ್ದವು. ಇದು ಅಪಹರಣವಿರಬಹುದೇ? ಬೇಕಂತಲೇ ತಪ್ಪಿಸಿಕೊಂಡಿದ್ದಾರೆಯೇ? ಅವರಿಗೆ ಈಜು ಬರುತ್ತಿರಲಿಲ್ಲವೇ? ನೀರಿನ ಸೆಳೆತ ತುಂಬಾ ಜೋರಿರುವುದರಿಂದ ಮೃತದೇಹ ಸಿಗಲಾರದು, ಶಾರ್ಕ್ ಮೀನುಗಳು ಉಳಿಸುವುದಿಲ್ಲ ಎಂದೆಲ್ಲಾ ಮಾತುಗಳು ಕೇಳಿಬಂದಿದ್ದವು.

ಸಿದ್ಧಾರ್ಥ್ ರವರ ಮೃತದೇಹ ಆ ಎಲ್ಲಾ ಹೇಳಿಕೆಗಳನ್ನು ತಲೆಕೆಳಗು ಮಾಡಿದೆ. ಮೇಲ್ನೋಟಕ್ಕೆ ಕಾಣುವಂತೆ ಮೃತದೇಹಕ್ಕೆ ದೊಡ್ಡ ಅಪಾಯಗಳು ಆಗಿಲ್ಲ. ಸುಲಭವಾಗಿ ಗುರುತಿಸಬಹುದಾಗಿದೆ. ಅವರು ಹಾಕಿದ್ದ ಶೂಗಳು ಕಳಚದೇ ಹಾಗೆ ಇವೆ. ಜೇಬಿನಲ್ಲಿ ಹಳೆಯ ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ: ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...