Homeಕರ್ನಾಟಕಖಚಿತವಾದ ಆತ್ಮಹತ್ಯೆ: ನೇತ್ರಾವತಿ ಹಿನ್ನೀರಿನಲ್ಲಿ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥ ಮೃತದೇಹ ಪತ್ತೆ

ಖಚಿತವಾದ ಆತ್ಮಹತ್ಯೆ: ನೇತ್ರಾವತಿ ಹಿನ್ನೀರಿನಲ್ಲಿ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥ ಮೃತದೇಹ ಪತ್ತೆ

- Advertisement -
- Advertisement -

ತೀವ್ರ ಆತಂಕ ಮೂಡಿಸಿದ್ದ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥರವರ ನಾಪತ್ತೆ ಪ್ರಕರಣಕ್ಕೆ ತೆರೆಬಿದ್ದಿದ್ದು ಅದು ಆತ್ಮಹತ್ಯೆ ಎಂಬುದು ಬಹುತೇಕ ಖಚಿತವಾಗಿದೆ. ತೀವ್ರ ಶೋಧದ ನಂತರ ಅವರ ಮೃತದೇಹ ಆಕಸ್ಮಿಕವಾಗಿ ಪತ್ತೆಯಾಗಿದ್ದು ಅವರು ಕುಟುಂಬದವರು ಅವರದೇ ದೇಹ ಎಂದು ಖಚಿತಪಡಿಸಿದ್ದಾರೆ.

ಸೋಮವಾರ ರಾತ್ರಿ ಕಣ್ಮರೆಯಾಗಿದ್ದ ಸಿದ್ಧಾರ್ಥ್ ರವರು ಜಪ್ಪಿನಮೊಗರು ಬಳಿ ಆತ್ಮಹತ್ಯೆಗೆ ಪ್ರಯತ್ನಿಸಿರಬಹುದು ಎಂಬ ದಟ್ಟ ಅನುಮಾನಗಳು ನಿಜವಾಗಿದೆ. 36 ಗಂಟೆಗಳ ತೀವ್ರ ಶೋಧ ನಡೆಯುತ್ತಿರುವಾಗಲೇ ಸ್ಥಳೀಯ ಮೀನುಗಾರರು ಮೀನುಗಾರಿಕೆಗೆಂದು ತೆರಳಿದ್ದಾಗ, ಹೊಯ್ಗೆ ಬಜಾರ್ ನ ಅಳಿವೆ ಬಾಗಿಲ ಬಳಿ ಬುಧವಾರ ಬೆಳಿಗ್ಗೆ 6.30ಕ್ಕೆ ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೃತದೇಹವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಸಾಗಿಸಿದ್ದು ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಿದೆ. ನಂತರ ಮುಂದಿನ ವಿಧಿ ವಿಧಾನಗಳ ಬಗ್ಗೆ ಕುಟುಂಬದವರು ನಿರ್ಧಾರ ಮಾಡಲಿದ್ದಾರೆ. ಸಿದ್ಧಾರ್ಥ್ ರವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಚಟ್ನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಕಳಚದ ಶೂ: ಜೇಬಿನಲ್ಲಿದ್ದ ಮೊಬೈಲ್

ಸಿದ್ಧಾರ್ಥ್ ರವರು ನಾಪತ್ತೆಯಾದಾಗಿನಿಂದಲೂ ಹಲವಾರು ಉಹಾಪೋಹಗಳು ಸೃಷ್ಟಿಯಾಗಿದ್ದವು. ಇದು ಅಪಹರಣವಿರಬಹುದೇ? ಬೇಕಂತಲೇ ತಪ್ಪಿಸಿಕೊಂಡಿದ್ದಾರೆಯೇ? ಅವರಿಗೆ ಈಜು ಬರುತ್ತಿರಲಿಲ್ಲವೇ? ನೀರಿನ ಸೆಳೆತ ತುಂಬಾ ಜೋರಿರುವುದರಿಂದ ಮೃತದೇಹ ಸಿಗಲಾರದು, ಶಾರ್ಕ್ ಮೀನುಗಳು ಉಳಿಸುವುದಿಲ್ಲ ಎಂದೆಲ್ಲಾ ಮಾತುಗಳು ಕೇಳಿಬಂದಿದ್ದವು.

ಸಿದ್ಧಾರ್ಥ್ ರವರ ಮೃತದೇಹ ಆ ಎಲ್ಲಾ ಹೇಳಿಕೆಗಳನ್ನು ತಲೆಕೆಳಗು ಮಾಡಿದೆ. ಮೇಲ್ನೋಟಕ್ಕೆ ಕಾಣುವಂತೆ ಮೃತದೇಹಕ್ಕೆ ದೊಡ್ಡ ಅಪಾಯಗಳು ಆಗಿಲ್ಲ. ಸುಲಭವಾಗಿ ಗುರುತಿಸಬಹುದಾಗಿದೆ. ಅವರು ಹಾಕಿದ್ದ ಶೂಗಳು ಕಳಚದೇ ಹಾಗೆ ಇವೆ. ಜೇಬಿನಲ್ಲಿ ಹಳೆಯ ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ: ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...