Homeಮುಖಪುಟಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

ಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

- Advertisement -
- Advertisement -

ಕೊಯಮತ್ತೂರಿನ ಕೊಟ್ಟೈಮೇಡುವಿನಲ್ಲಿ ಶಂಕಿತ ಭಯೋತ್ಪಾದಕ ಕೃತ್ಯ ಸಂಭವಿಸಿದ ಎರಡು ವಾರಗಳ ನಂತರ, ಮುಸ್ಲಿಂ ಮುಖಂಡರ ನಿಯೋಗವು ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ವಿಸ್ತರಿಸಲು ಸಂಗಮೇಶ್ವರರ್ ದೇವಾಲಯದ ಅರ್ಚಕರನ್ನು ಭೇಟಿ ಮಾಡಿತು.

ಅಕ್ಟೋಬರ್ 23ರಂದು ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಸಾವನ್ನಪ್ಪಿದ ಜಮೇಶಾ ಮುಬಿನ್ (29) ಎಂಬಾತ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕೊಯಮತ್ತೂರು ಪೊಲೀಸರು, “ಸ್ಫೋಟವು ನಿರೀಕ್ಷಿತ ಪರಿಣಾಮವನ್ನು ಉಂಟುಮಾಡದಿದ್ದರೂ ಸಹ ದೇವಾಲಯವನ್ನು ಗುರಿಯಾಗಿಸಲು ಉದ್ದೇಶಿಸಲಾಗಿತ್ತು. 31 ಅಕ್ಟೋಬರ್ 2022ರಂದು ತನಿಖೆಯನ್ನು ವಹಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಸ್ತುತ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ” ಎಂದಿದ್ದಾರೆ.

‘ದಿ ಕ್ವಿಂಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಜಮಾತೆ ಇಸ್ಲಾಮಿ ಹಿಂದ್‌ನ ಅಬ್ದುಲ್ ಹಕ್ಕಿಮ್, “ಈ ಸಮಯದಲ್ಲಿ ನಗರದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಸಮುದಾಯಗಳ ನಡುವೆ ಸಹೋದರತ್ವವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರು ಮಾಧ್ಯಮದವರಿಗೆ ಪ್ರತಿಕ್ರಿಯೆಯನ್ನು ನೀಡಿಲ್ಲ.

ಕೊಟ್ಟೈ ಈಶ್ವರನ್ ದೇವಾಲಯ ಎಂದೂ ಕರೆಯಲ್ಪಡುವ ಸಂಗಮೇಶ್ವರ ದೇವಾಲಯದ ಮೂವರು ಅರ್ಚಕರು ಮುಸ್ಲಿಂ ನಿಯೋಗವನ್ನು ನವೆಂಬರ್ 3ರಂದು ಸ್ವಾಗತಿಸಿದರು. 1998ರ ಭಯೋತ್ಪಾದನಾ ಬಾಂಬ್ ದಾಳಿಯ ನಂತರ ಶಾಂತಿಯುತವಾಗಿದ್ದ ನಗರದಲ್ಲಿ ಈ ಸ್ಫೋಟದಿಂದಾಗಿ ಹಿನ್ನಡೆಯಾಗಿದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಎರಡೂ ಸಮುದಾಯಗಳ ಮುಖಂಡರು ಪರಸ್ಪರ ಸಂತಸ ವಿನಿಮಯ ಮಾಡಿಕೊಂಡಿದ್ದಾರೆ.

ಕೊಯಮತ್ತೂರಿನ ನಿವಾಸಿಗಳು ಶಾಂತಿಯ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಂಕಿತ ಭಯೋತ್ಪಾದನೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ಭಯದಿಂದ ಬದುಕುತ್ತಿರುವ ಕೊಯಮತ್ತೂರಿನ ನಿವಾಸಿಗಳು, ವಿವಿಧ ಸಮುದಾಯಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ.

“ಜೀವನವು ಸುಗಮವಾಗಿ ಸಾಗಬೇಕೆಂದು ನಾವು ಬಯಸುತ್ತೇವೆ. ಸಮುದಾಯದ ಮುಖಂಡರು ಒಗ್ಗೂಡುವ ಪ್ರಯತ್ನವು ಶಾಂತಿಯುತ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಸ್ಥಳೀಯ ನಿವಾಸಿ ಎಸ್‌.ತಿರುಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಕೊಯಮತ್ತೂರು ಪೊಲೀಸರು ಸಹ ಶಾಂತಿ ಕಾಪಾಡಲು ನಗರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. “ನಾವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ. ಸ್ಫೋಟ ಸಂಭವಿಸಿದ ನಂತರದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಸಭೆ ನಡೆಯಿತು” ಎಂದು ಕೊಯಮತ್ತೂರಿನ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಕೊಯಮತ್ತೂರಿನ ನಿವಾಸಿ ವಿ.ಎಸ್.ಸೆಂಥಿಲ್, “ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಮಾಜವಿರೋಧಿ ಚಟುವಟಿಕೆಗಳನ್ನು ತಡೆಯಲು ಎಲ್ಲಾ ಪ್ರಯತ್ನಗಳು ಆಗುತ್ತಿರುವುದರಿಂದ ನಾವು ನಿರಾಳರಾಗಿದ್ದೇವೆ. ವಿವಿಧ ಸಮುದಾಯಗಳು ಕೂಡ ಒಂದಾಗಿರುವುದು ನಮಗೆ ಸಂತೋಷವಾಗಿದೆ” ಎಂದು ತಿಳಿಸಿದ್ದಾರೆ.

ಅಹಿತಕರ ಘಟನೆಗಳನ್ನು ತಡೆಯಲು ಹಿಂಸಾತ್ಮಕ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಗುಪ್ತಚರ ಘಟಕವು ವಿಚಾರಣೆ ನಡೆಸುತ್ತಿದೆ ಎಂದು ಕೊಯಮತ್ತೂರು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...