Homeಮುಖಪುಟಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

ಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

- Advertisement -
- Advertisement -

ಕೊಯಮತ್ತೂರಿನ ಕೊಟ್ಟೈಮೇಡುವಿನಲ್ಲಿ ಶಂಕಿತ ಭಯೋತ್ಪಾದಕ ಕೃತ್ಯ ಸಂಭವಿಸಿದ ಎರಡು ವಾರಗಳ ನಂತರ, ಮುಸ್ಲಿಂ ಮುಖಂಡರ ನಿಯೋಗವು ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ವಿಸ್ತರಿಸಲು ಸಂಗಮೇಶ್ವರರ್ ದೇವಾಲಯದ ಅರ್ಚಕರನ್ನು ಭೇಟಿ ಮಾಡಿತು.

ಅಕ್ಟೋಬರ್ 23ರಂದು ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಸಾವನ್ನಪ್ಪಿದ ಜಮೇಶಾ ಮುಬಿನ್ (29) ಎಂಬಾತ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕೊಯಮತ್ತೂರು ಪೊಲೀಸರು, “ಸ್ಫೋಟವು ನಿರೀಕ್ಷಿತ ಪರಿಣಾಮವನ್ನು ಉಂಟುಮಾಡದಿದ್ದರೂ ಸಹ ದೇವಾಲಯವನ್ನು ಗುರಿಯಾಗಿಸಲು ಉದ್ದೇಶಿಸಲಾಗಿತ್ತು. 31 ಅಕ್ಟೋಬರ್ 2022ರಂದು ತನಿಖೆಯನ್ನು ವಹಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಸ್ತುತ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ” ಎಂದಿದ್ದಾರೆ.

‘ದಿ ಕ್ವಿಂಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಜಮಾತೆ ಇಸ್ಲಾಮಿ ಹಿಂದ್‌ನ ಅಬ್ದುಲ್ ಹಕ್ಕಿಮ್, “ಈ ಸಮಯದಲ್ಲಿ ನಗರದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಸಮುದಾಯಗಳ ನಡುವೆ ಸಹೋದರತ್ವವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರು ಮಾಧ್ಯಮದವರಿಗೆ ಪ್ರತಿಕ್ರಿಯೆಯನ್ನು ನೀಡಿಲ್ಲ.

ಕೊಟ್ಟೈ ಈಶ್ವರನ್ ದೇವಾಲಯ ಎಂದೂ ಕರೆಯಲ್ಪಡುವ ಸಂಗಮೇಶ್ವರ ದೇವಾಲಯದ ಮೂವರು ಅರ್ಚಕರು ಮುಸ್ಲಿಂ ನಿಯೋಗವನ್ನು ನವೆಂಬರ್ 3ರಂದು ಸ್ವಾಗತಿಸಿದರು. 1998ರ ಭಯೋತ್ಪಾದನಾ ಬಾಂಬ್ ದಾಳಿಯ ನಂತರ ಶಾಂತಿಯುತವಾಗಿದ್ದ ನಗರದಲ್ಲಿ ಈ ಸ್ಫೋಟದಿಂದಾಗಿ ಹಿನ್ನಡೆಯಾಗಿದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಎರಡೂ ಸಮುದಾಯಗಳ ಮುಖಂಡರು ಪರಸ್ಪರ ಸಂತಸ ವಿನಿಮಯ ಮಾಡಿಕೊಂಡಿದ್ದಾರೆ.

ಕೊಯಮತ್ತೂರಿನ ನಿವಾಸಿಗಳು ಶಾಂತಿಯ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಂಕಿತ ಭಯೋತ್ಪಾದನೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ಭಯದಿಂದ ಬದುಕುತ್ತಿರುವ ಕೊಯಮತ್ತೂರಿನ ನಿವಾಸಿಗಳು, ವಿವಿಧ ಸಮುದಾಯಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ.

“ಜೀವನವು ಸುಗಮವಾಗಿ ಸಾಗಬೇಕೆಂದು ನಾವು ಬಯಸುತ್ತೇವೆ. ಸಮುದಾಯದ ಮುಖಂಡರು ಒಗ್ಗೂಡುವ ಪ್ರಯತ್ನವು ಶಾಂತಿಯುತ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಸ್ಥಳೀಯ ನಿವಾಸಿ ಎಸ್‌.ತಿರುಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಕೊಯಮತ್ತೂರು ಪೊಲೀಸರು ಸಹ ಶಾಂತಿ ಕಾಪಾಡಲು ನಗರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. “ನಾವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ. ಸ್ಫೋಟ ಸಂಭವಿಸಿದ ನಂತರದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಸಭೆ ನಡೆಯಿತು” ಎಂದು ಕೊಯಮತ್ತೂರಿನ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಕೊಯಮತ್ತೂರಿನ ನಿವಾಸಿ ವಿ.ಎಸ್.ಸೆಂಥಿಲ್, “ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಮಾಜವಿರೋಧಿ ಚಟುವಟಿಕೆಗಳನ್ನು ತಡೆಯಲು ಎಲ್ಲಾ ಪ್ರಯತ್ನಗಳು ಆಗುತ್ತಿರುವುದರಿಂದ ನಾವು ನಿರಾಳರಾಗಿದ್ದೇವೆ. ವಿವಿಧ ಸಮುದಾಯಗಳು ಕೂಡ ಒಂದಾಗಿರುವುದು ನಮಗೆ ಸಂತೋಷವಾಗಿದೆ” ಎಂದು ತಿಳಿಸಿದ್ದಾರೆ.

ಅಹಿತಕರ ಘಟನೆಗಳನ್ನು ತಡೆಯಲು ಹಿಂಸಾತ್ಮಕ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಗುಪ್ತಚರ ಘಟಕವು ವಿಚಾರಣೆ ನಡೆಸುತ್ತಿದೆ ಎಂದು ಕೊಯಮತ್ತೂರು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...