Homeಮುಖಪುಟಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

ಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

- Advertisement -
- Advertisement -

ಕೊಯಮತ್ತೂರಿನ ಕೊಟ್ಟೈಮೇಡುವಿನಲ್ಲಿ ಶಂಕಿತ ಭಯೋತ್ಪಾದಕ ಕೃತ್ಯ ಸಂಭವಿಸಿದ ಎರಡು ವಾರಗಳ ನಂತರ, ಮುಸ್ಲಿಂ ಮುಖಂಡರ ನಿಯೋಗವು ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ವಿಸ್ತರಿಸಲು ಸಂಗಮೇಶ್ವರರ್ ದೇವಾಲಯದ ಅರ್ಚಕರನ್ನು ಭೇಟಿ ಮಾಡಿತು.

ಅಕ್ಟೋಬರ್ 23ರಂದು ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಸಾವನ್ನಪ್ಪಿದ ಜಮೇಶಾ ಮುಬಿನ್ (29) ಎಂಬಾತ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕೊಯಮತ್ತೂರು ಪೊಲೀಸರು, “ಸ್ಫೋಟವು ನಿರೀಕ್ಷಿತ ಪರಿಣಾಮವನ್ನು ಉಂಟುಮಾಡದಿದ್ದರೂ ಸಹ ದೇವಾಲಯವನ್ನು ಗುರಿಯಾಗಿಸಲು ಉದ್ದೇಶಿಸಲಾಗಿತ್ತು. 31 ಅಕ್ಟೋಬರ್ 2022ರಂದು ತನಿಖೆಯನ್ನು ವಹಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಸ್ತುತ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ” ಎಂದಿದ್ದಾರೆ.

‘ದಿ ಕ್ವಿಂಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಜಮಾತೆ ಇಸ್ಲಾಮಿ ಹಿಂದ್‌ನ ಅಬ್ದುಲ್ ಹಕ್ಕಿಮ್, “ಈ ಸಮಯದಲ್ಲಿ ನಗರದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಸಮುದಾಯಗಳ ನಡುವೆ ಸಹೋದರತ್ವವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರು ಮಾಧ್ಯಮದವರಿಗೆ ಪ್ರತಿಕ್ರಿಯೆಯನ್ನು ನೀಡಿಲ್ಲ.

ಕೊಟ್ಟೈ ಈಶ್ವರನ್ ದೇವಾಲಯ ಎಂದೂ ಕರೆಯಲ್ಪಡುವ ಸಂಗಮೇಶ್ವರ ದೇವಾಲಯದ ಮೂವರು ಅರ್ಚಕರು ಮುಸ್ಲಿಂ ನಿಯೋಗವನ್ನು ನವೆಂಬರ್ 3ರಂದು ಸ್ವಾಗತಿಸಿದರು. 1998ರ ಭಯೋತ್ಪಾದನಾ ಬಾಂಬ್ ದಾಳಿಯ ನಂತರ ಶಾಂತಿಯುತವಾಗಿದ್ದ ನಗರದಲ್ಲಿ ಈ ಸ್ಫೋಟದಿಂದಾಗಿ ಹಿನ್ನಡೆಯಾಗಿದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಎರಡೂ ಸಮುದಾಯಗಳ ಮುಖಂಡರು ಪರಸ್ಪರ ಸಂತಸ ವಿನಿಮಯ ಮಾಡಿಕೊಂಡಿದ್ದಾರೆ.

ಕೊಯಮತ್ತೂರಿನ ನಿವಾಸಿಗಳು ಶಾಂತಿಯ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಂಕಿತ ಭಯೋತ್ಪಾದನೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ಭಯದಿಂದ ಬದುಕುತ್ತಿರುವ ಕೊಯಮತ್ತೂರಿನ ನಿವಾಸಿಗಳು, ವಿವಿಧ ಸಮುದಾಯಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ.

“ಜೀವನವು ಸುಗಮವಾಗಿ ಸಾಗಬೇಕೆಂದು ನಾವು ಬಯಸುತ್ತೇವೆ. ಸಮುದಾಯದ ಮುಖಂಡರು ಒಗ್ಗೂಡುವ ಪ್ರಯತ್ನವು ಶಾಂತಿಯುತ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಸ್ಥಳೀಯ ನಿವಾಸಿ ಎಸ್‌.ತಿರುಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಕೊಯಮತ್ತೂರು ಪೊಲೀಸರು ಸಹ ಶಾಂತಿ ಕಾಪಾಡಲು ನಗರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. “ನಾವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ. ಸ್ಫೋಟ ಸಂಭವಿಸಿದ ನಂತರದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಸಭೆ ನಡೆಯಿತು” ಎಂದು ಕೊಯಮತ್ತೂರಿನ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಕೊಯಮತ್ತೂರಿನ ನಿವಾಸಿ ವಿ.ಎಸ್.ಸೆಂಥಿಲ್, “ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಮಾಜವಿರೋಧಿ ಚಟುವಟಿಕೆಗಳನ್ನು ತಡೆಯಲು ಎಲ್ಲಾ ಪ್ರಯತ್ನಗಳು ಆಗುತ್ತಿರುವುದರಿಂದ ನಾವು ನಿರಾಳರಾಗಿದ್ದೇವೆ. ವಿವಿಧ ಸಮುದಾಯಗಳು ಕೂಡ ಒಂದಾಗಿರುವುದು ನಮಗೆ ಸಂತೋಷವಾಗಿದೆ” ಎಂದು ತಿಳಿಸಿದ್ದಾರೆ.

ಅಹಿತಕರ ಘಟನೆಗಳನ್ನು ತಡೆಯಲು ಹಿಂಸಾತ್ಮಕ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಗುಪ್ತಚರ ಘಟಕವು ವಿಚಾರಣೆ ನಡೆಸುತ್ತಿದೆ ಎಂದು ಕೊಯಮತ್ತೂರು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...