Homeಮುಖಪುಟಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

ಕೊಯಮತ್ತೂರು ಸ್ಫೋಟ ಹಿನ್ನೆಲೆ: ಶಾಂತಿ ಕಾಪಾಡಲು ಒಗ್ಗೂಡಿದ ಹಿಂದೂ- ಮುಸ್ಲಿಂ ಮುಖಂಡರು

- Advertisement -
- Advertisement -

ಕೊಯಮತ್ತೂರಿನ ಕೊಟ್ಟೈಮೇಡುವಿನಲ್ಲಿ ಶಂಕಿತ ಭಯೋತ್ಪಾದಕ ಕೃತ್ಯ ಸಂಭವಿಸಿದ ಎರಡು ವಾರಗಳ ನಂತರ, ಮುಸ್ಲಿಂ ಮುಖಂಡರ ನಿಯೋಗವು ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ವಿಸ್ತರಿಸಲು ಸಂಗಮೇಶ್ವರರ್ ದೇವಾಲಯದ ಅರ್ಚಕರನ್ನು ಭೇಟಿ ಮಾಡಿತು.

ಅಕ್ಟೋಬರ್ 23ರಂದು ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಸಾವನ್ನಪ್ಪಿದ ಜಮೇಶಾ ಮುಬಿನ್ (29) ಎಂಬಾತ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕೊಯಮತ್ತೂರು ಪೊಲೀಸರು, “ಸ್ಫೋಟವು ನಿರೀಕ್ಷಿತ ಪರಿಣಾಮವನ್ನು ಉಂಟುಮಾಡದಿದ್ದರೂ ಸಹ ದೇವಾಲಯವನ್ನು ಗುರಿಯಾಗಿಸಲು ಉದ್ದೇಶಿಸಲಾಗಿತ್ತು. 31 ಅಕ್ಟೋಬರ್ 2022ರಂದು ತನಿಖೆಯನ್ನು ವಹಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಸ್ತುತ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ” ಎಂದಿದ್ದಾರೆ.

‘ದಿ ಕ್ವಿಂಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಜಮಾತೆ ಇಸ್ಲಾಮಿ ಹಿಂದ್‌ನ ಅಬ್ದುಲ್ ಹಕ್ಕಿಮ್, “ಈ ಸಮಯದಲ್ಲಿ ನಗರದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಸಮುದಾಯಗಳ ನಡುವೆ ಸಹೋದರತ್ವವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರು ಮಾಧ್ಯಮದವರಿಗೆ ಪ್ರತಿಕ್ರಿಯೆಯನ್ನು ನೀಡಿಲ್ಲ.

ಕೊಟ್ಟೈ ಈಶ್ವರನ್ ದೇವಾಲಯ ಎಂದೂ ಕರೆಯಲ್ಪಡುವ ಸಂಗಮೇಶ್ವರ ದೇವಾಲಯದ ಮೂವರು ಅರ್ಚಕರು ಮುಸ್ಲಿಂ ನಿಯೋಗವನ್ನು ನವೆಂಬರ್ 3ರಂದು ಸ್ವಾಗತಿಸಿದರು. 1998ರ ಭಯೋತ್ಪಾದನಾ ಬಾಂಬ್ ದಾಳಿಯ ನಂತರ ಶಾಂತಿಯುತವಾಗಿದ್ದ ನಗರದಲ್ಲಿ ಈ ಸ್ಫೋಟದಿಂದಾಗಿ ಹಿನ್ನಡೆಯಾಗಿದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ಎರಡೂ ಸಮುದಾಯಗಳ ಮುಖಂಡರು ಪರಸ್ಪರ ಸಂತಸ ವಿನಿಮಯ ಮಾಡಿಕೊಂಡಿದ್ದಾರೆ.

ಕೊಯಮತ್ತೂರಿನ ನಿವಾಸಿಗಳು ಶಾಂತಿಯ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಂಕಿತ ಭಯೋತ್ಪಾದನೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ಭಯದಿಂದ ಬದುಕುತ್ತಿರುವ ಕೊಯಮತ್ತೂರಿನ ನಿವಾಸಿಗಳು, ವಿವಿಧ ಸಮುದಾಯಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ.

“ಜೀವನವು ಸುಗಮವಾಗಿ ಸಾಗಬೇಕೆಂದು ನಾವು ಬಯಸುತ್ತೇವೆ. ಸಮುದಾಯದ ಮುಖಂಡರು ಒಗ್ಗೂಡುವ ಪ್ರಯತ್ನವು ಶಾಂತಿಯುತ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಸ್ಥಳೀಯ ನಿವಾಸಿ ಎಸ್‌.ತಿರುಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಕೊಯಮತ್ತೂರು ಪೊಲೀಸರು ಸಹ ಶಾಂತಿ ಕಾಪಾಡಲು ನಗರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. “ನಾವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಶಾಂತಿ ಸಭೆಗಳನ್ನು ನಡೆಸುತ್ತಿದ್ದೇವೆ. ಸ್ಫೋಟ ಸಂಭವಿಸಿದ ನಂತರದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಸಭೆ ನಡೆಯಿತು” ಎಂದು ಕೊಯಮತ್ತೂರಿನ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಕೊಯಮತ್ತೂರಿನ ನಿವಾಸಿ ವಿ.ಎಸ್.ಸೆಂಥಿಲ್, “ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಮಾಜವಿರೋಧಿ ಚಟುವಟಿಕೆಗಳನ್ನು ತಡೆಯಲು ಎಲ್ಲಾ ಪ್ರಯತ್ನಗಳು ಆಗುತ್ತಿರುವುದರಿಂದ ನಾವು ನಿರಾಳರಾಗಿದ್ದೇವೆ. ವಿವಿಧ ಸಮುದಾಯಗಳು ಕೂಡ ಒಂದಾಗಿರುವುದು ನಮಗೆ ಸಂತೋಷವಾಗಿದೆ” ಎಂದು ತಿಳಿಸಿದ್ದಾರೆ.

ಅಹಿತಕರ ಘಟನೆಗಳನ್ನು ತಡೆಯಲು ಹಿಂಸಾತ್ಮಕ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಗುಪ್ತಚರ ಘಟಕವು ವಿಚಾರಣೆ ನಡೆಸುತ್ತಿದೆ ಎಂದು ಕೊಯಮತ್ತೂರು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...