Homeಕರ್ನಾಟಕಬಳ್ಳಾರಿ ವಿವಿ: ಶುಲ್ಕ ಪಾವತಿಸಿದರೂ ಸುಲಿಗೆ- ವಿದ್ಯಾರ್ಥಿಗಳ ಆರೋಪ

ಬಳ್ಳಾರಿ ವಿವಿ: ಶುಲ್ಕ ಪಾವತಿಸಿದರೂ ಸುಲಿಗೆ- ವಿದ್ಯಾರ್ಥಿಗಳ ಆರೋಪ

- Advertisement -
- Advertisement -

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಗಳನ್ನು ವಿತರಿಸಲು ಬಳ್ಳಾರಿ ವಿವಿ ವ್ಯಾಪ್ತಿಯ ಕಾಲೇಜುಗಳು ತೊಂದರೆ ನೀಡುತ್ತಿವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆರೋಪಿಸಿದೆ.

ಬಳ್ಳಾರಿ ವಿವಿ ವ್ಯಾಪ್ತಿಯ ಕಾಲೇಜುಗಳ 2020-21ನೇ ಸಾಲಿನ ಪದವಿ, ಸ್ನಾತಕೋತ್ತರ  ವಿದ್ಯಾರ್ಥಿಗಳಿಗೆ 6 ತಿಂಗಳಾದರೂ ಅಂಕಪಟ್ಟಿ ನೀಡಿರುವುದಿಲ್ಲ. ದಾಖಲಾತಿ ಸಂದರ್ಭದಲ್ಲಿ ಶುಲ್ಕ ಪೂರ್ತಿಯಾಗಿ ಭರಿಸಿಲ್ಲ ಎನ್ನುವ ನೆಪ ಹೇಳಲಾಗುತ್ತಿದೆ. ಸರ್ಕಾರದಿಂದ ಯಾವುದೇ ರೀತಿಯ ದುಡ್ಡು ಬಂದಿಲ್ಲ ಎಂದು ಅಂಕಪಟ್ಟಿಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಅಸಲಿಗೆ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಸಂದರ್ಭದಲ್ಲಿ ವಿವಿ/ಕಾಲೇಜುಗಳು ಹೊರಡಿಸಿದ ಆದೇಶದಂತೆಯೇ ಶುಲ್ಕ ಪಾವತಿ ಮಾಡಿದ್ದಾರೆ. ಇದೀಗ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಪಡೆಯಲು ಅಂಕಪಟ್ಟಿ ಇಲ್ಲದೆ ತೊಂದರೆ ಆಗುತ್ತಿದೆ‌. ಅಲ್ಲದೇ ಪದವಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪ್ರವೇಶಾತಿಗೂ ಅಡಚಣೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿವಿ ಅಥವಾ ಕಾಲೇಜಿನ ಹಣದ ಕೊರತೆಯನ್ನು ಬಡ ವಿದ್ಯಾರ್ಥಿಗಳ ಮೇಲೆ, ಪೋಷಕರ ಮೇಲೆ ಹಾಕುತ್ತಿರುವುದು ಅತ್ಯಂತ ಅಮಾನವೀಯ ನಡೆ. ಪ್ರವೇಶ ಸಂದರ್ಭದಲ್ಲಿ ಒಂದು ರೀತಿ, ಅಂಕ ಪಟ್ಟಿ ನೀಡುವಾಗ ಮತ್ತೊಂದು ನೀತಿ ವರ್ತಿಸುತ್ತಿರುವುದು ವಿದ್ಯಾರ್ಥಿಗಳಿಗೆ ಮಾಡುವ ಮೋಸವಾಗಿದೆ‌ ಎಂದು ಕೆವಿಎಸ್‌ ಆಕ್ರೋಶ ಹೊರಹಾಕಿದೆ.

ಪ್ರೊತ್ಸಾಹ ಧನ ಮತ್ತು ಶೈಕ್ಷಣಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಈ ಕೂಡಲೇ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನೀಡಿ ವಿದ್ಯಾರ್ಥಿ ಹಿತ ಕಾಯಬೇಕು. ಒಂದು ವೇಳೆ ಅಂಕಪಟ್ಟಿಗಳನ್ನು ಕೊಡದಿದ್ದರೆ ಮುಂದೆ ಎಲ್ಲಾ ವಿದ್ಯಾರ್ಥಿಗಳು ಸೇರಿ ಕಾಲೇಜು ಮತ್ತು ವಿಶ್ವವಿದ್ಯಾಲಯದ ಮುಂದೆ ದೊಡ್ಡ ಹೋರಾಟ ನಡೆಸುತ್ತೇವೆ ಎಂದು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಪತ್ರ ಕೊಡಲಾಯಿತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತ ದುರುಗೇಶ್ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಯ ಕುಲಪತಿಯವರಿಗೆ ಮನವಿ ಮಾಡಲಾಗುವುದು. ಪ್ರಾಂಶುಪಾಲರು ವಿದ್ಯಾರ್ಥಿಗಳ ಹಿತ ಕಾಯದಿದ್ದರೆ ಹೋರಾಟ ರೂಪಿಸಲಾಗುವುದು. ಶುಲ್ಕ ಪಾವತಿಸುವಂತೆ ಪೀಡಿಸುತ್ತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವುದು ಅಕ್ಷಮ್ಯ” ಎಂದರು.

ವಿದ್ಯಾರ್ಥಿ ಮುಖಂಡರಾದ ಶರಣಪ್ಪ, ಪಂಪಾಪತಿ, ಕಾಳಿಂಗರಾಜು, ಹನುಮರೆಡ್ಡಿ, ಭೀಮಪ್ಪ, ಯಮನೂರು ಮತ್ತಿತರು ಹಾಜರಿದ್ದರು.


ಇದನ್ನೂ ಓದಿರಿ: ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿ.ವಿ. ಯಲ್ಲೂ ಇದೇ ಮಾದರಿಯಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳಿಂದ ಹಣ ಪೀಕುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...