Homeಕರ್ನಾಟಕಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಉನ್ನತ ಶಿಕ್ಷಣ ಸಚಿವರು ಸೋಮವಾರ ಹೇಳಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಕಾರಣ 11 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ.

ಸೋಮವಾರವಷ್ಟೇ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ಅವರು ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಚಾಮರಾಜನಗರದಲ್ಲಿ ಮಾತನಾಡುತ್ತಾ ಹೇಳಿದ್ದರು. ಅಲ್ಲದೆ, ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆ ನೀಡಿದ್ದ ಮಧ್ಯಂತರ ಆದೇಶ, “ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ವಕೀಲರಾದ ಎಸ್‌. ಬಾಲನ್‌ ಅವರು ಹೇಳಿದ್ದಾರೆ. (ವಿಡಿಯೊ ನೋಡಿ)

 

ಈ ಮಧ್ಯೆ ಹಲವಾರು ಶಾಲಾ-ಕಾಲೇಜುಗಳು ಕೋರ್ಟ್‌ನ ಮಧ್ಯಂತರ ಆದೇಶವನ್ನು ತಪ್ಪಾಗಿ ತಿಳಿದುಕೊಂಡು, ತಮ್ಮ ವಿದ್ಯಾರ್ಥಿಗಳನ್ನು ಮಾಧ್ಯಮಗಳ ಕೈಗೆ ಬಿಟ್ಟುಕೊಡುತ್ತಿವೆ. ಇದರ ವಿರುದ್ದ ಕೂಡಾ ದೇಶದಾದ್ಯಂತ ಗಣ್ಯರು ಧ್ವನಿ ಎತ್ತಿದ್ದು, ಇಂತಹ ಜನರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರಾದ ಶ್ರೀಜಾ ಅವರು ಹಿಜಾಬ್ ಧರಿಸಿ, ತರಗತಿ ಒಳಗಡೆ ಪ್ರವೇಶಿಸಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ ಎಂದಿದ್ದಾರೆ ಎಂದು ಸ್ಥಳೀಯ ವೆಬ್‌ಸೈಟ್‌‌ ವರದಿ ಮಾಡಿದೆ. ಪ್ರಾಂಶುಪಾಲರು ತರಗತಿಗೆ ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ನೇರವಾಗಿ ಮನೆಗೆ ತೆರಳಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಒಳಪಟ್ಟಿದೆಯಾದ್ದರಿಂದ ನಾನುಗೌರಿ.ಕಾಂ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಕಿಶೋರ್‌ ಕುಮಾರ್‌‌ ಸಿ.ಕೆ. ಅವರನ್ನು ಸಂರ್ಪಕಿಸಿ, ವಿಟ್ಲ ಕಾಲೇಜಿನ ಬಗ್ಗೆ ಕೇಳಿದಾಗ, “ಕೋರ್ಟ್‌‌ನ ಮಧ್ಯಂತರ ಆದೇಶ ಎಲ್ಲಾ ಕಾಲೇಜಿಗೆ ಅನ್ವಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. ನಂತರ ನಾನುಗೌರಿ.ಕಾಂ ಸಮವಸ್ತ್ರದ ಬಗ್ಗೆ ಸಚಿವ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಮತ್ತು ಕೋರ್ಟ್‌ನ ಮಧ್ಯಂತರ ಆದೇಶದ ಅಂಶವನ್ನು ಅವರ ಗಮನಕ್ಕೆ ತಂದಿತು. ನಂತರ ಮಾತನಾಡಿದ ಅವರು, “ಈ ಬಗ್ಗೆ ನಾನು ಕಾಲೇಜಿನ ಪ್ರಾಂಶುಪಾಲರಿಗೆ ಮಾತನಾಡಿ, ಈ ಬಗ್ಗೆ ಅವರಲ್ಲಿ ವಿಚಾರಿಸುತ್ತೇನೆ ಮತ್ತು ಮಾಹಿತಿ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಜಾ ಅವರನ್ನು ಮಾತನಾಡಿಸಿ ಸಚಿವರ ಹೇಳಿಕೆ ಮತ್ತು ನ್ಯಾಯಾಲಯದ ಮಧ್ಯಂತರ ಆದೇಶದ ಅಂಶಗಳನ್ನು ಗಮನಕ್ಕೆ ತಂದಿದ್ದೇವೆ. ನಂತರ ಯಾವ ಆಧಾರದಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರನ್ನು ಪ್ರಶ್ನಿಸಿದಾಗ, “ಈ ಬಗ್ಗೆ ನಾನು ನನ್ನ ಮೇಲಾಧಿಕಾರಿಗೆ ಹೇಳುತ್ತೇನೆ” ಎಂದಷ್ಟೇ ಹೇಳಿ, ಮುಂದುವರೆದು ಮಾತನಾಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮುಂಡಗೋಡ ಪದವಿ ಕಾಲೇಜಿನಲ್ಲಿ ಕೂಡ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಿಲ್ಲ ಅವರನ್ನು ಗೇಟಿನ ಹೊರಗಡೆ ನಿಲ್ಲಿಸಲಾಯಿತು

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...