Homeಕರ್ನಾಟಕಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಉನ್ನತ ಶಿಕ್ಷಣ ಸಚಿವರು ಸೋಮವಾರ ಹೇಳಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಕಾರಣ 11 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ.

ಸೋಮವಾರವಷ್ಟೇ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ಅವರು ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಚಾಮರಾಜನಗರದಲ್ಲಿ ಮಾತನಾಡುತ್ತಾ ಹೇಳಿದ್ದರು. ಅಲ್ಲದೆ, ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆ ನೀಡಿದ್ದ ಮಧ್ಯಂತರ ಆದೇಶ, “ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ವಕೀಲರಾದ ಎಸ್‌. ಬಾಲನ್‌ ಅವರು ಹೇಳಿದ್ದಾರೆ. (ವಿಡಿಯೊ ನೋಡಿ)

 

ಈ ಮಧ್ಯೆ ಹಲವಾರು ಶಾಲಾ-ಕಾಲೇಜುಗಳು ಕೋರ್ಟ್‌ನ ಮಧ್ಯಂತರ ಆದೇಶವನ್ನು ತಪ್ಪಾಗಿ ತಿಳಿದುಕೊಂಡು, ತಮ್ಮ ವಿದ್ಯಾರ್ಥಿಗಳನ್ನು ಮಾಧ್ಯಮಗಳ ಕೈಗೆ ಬಿಟ್ಟುಕೊಡುತ್ತಿವೆ. ಇದರ ವಿರುದ್ದ ಕೂಡಾ ದೇಶದಾದ್ಯಂತ ಗಣ್ಯರು ಧ್ವನಿ ಎತ್ತಿದ್ದು, ಇಂತಹ ಜನರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರಾದ ಶ್ರೀಜಾ ಅವರು ಹಿಜಾಬ್ ಧರಿಸಿ, ತರಗತಿ ಒಳಗಡೆ ಪ್ರವೇಶಿಸಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ ಎಂದಿದ್ದಾರೆ ಎಂದು ಸ್ಥಳೀಯ ವೆಬ್‌ಸೈಟ್‌‌ ವರದಿ ಮಾಡಿದೆ. ಪ್ರಾಂಶುಪಾಲರು ತರಗತಿಗೆ ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ನೇರವಾಗಿ ಮನೆಗೆ ತೆರಳಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಒಳಪಟ್ಟಿದೆಯಾದ್ದರಿಂದ ನಾನುಗೌರಿ.ಕಾಂ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಕಿಶೋರ್‌ ಕುಮಾರ್‌‌ ಸಿ.ಕೆ. ಅವರನ್ನು ಸಂರ್ಪಕಿಸಿ, ವಿಟ್ಲ ಕಾಲೇಜಿನ ಬಗ್ಗೆ ಕೇಳಿದಾಗ, “ಕೋರ್ಟ್‌‌ನ ಮಧ್ಯಂತರ ಆದೇಶ ಎಲ್ಲಾ ಕಾಲೇಜಿಗೆ ಅನ್ವಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. ನಂತರ ನಾನುಗೌರಿ.ಕಾಂ ಸಮವಸ್ತ್ರದ ಬಗ್ಗೆ ಸಚಿವ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಮತ್ತು ಕೋರ್ಟ್‌ನ ಮಧ್ಯಂತರ ಆದೇಶದ ಅಂಶವನ್ನು ಅವರ ಗಮನಕ್ಕೆ ತಂದಿತು. ನಂತರ ಮಾತನಾಡಿದ ಅವರು, “ಈ ಬಗ್ಗೆ ನಾನು ಕಾಲೇಜಿನ ಪ್ರಾಂಶುಪಾಲರಿಗೆ ಮಾತನಾಡಿ, ಈ ಬಗ್ಗೆ ಅವರಲ್ಲಿ ವಿಚಾರಿಸುತ್ತೇನೆ ಮತ್ತು ಮಾಹಿತಿ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಜಾ ಅವರನ್ನು ಮಾತನಾಡಿಸಿ ಸಚಿವರ ಹೇಳಿಕೆ ಮತ್ತು ನ್ಯಾಯಾಲಯದ ಮಧ್ಯಂತರ ಆದೇಶದ ಅಂಶಗಳನ್ನು ಗಮನಕ್ಕೆ ತಂದಿದ್ದೇವೆ. ನಂತರ ಯಾವ ಆಧಾರದಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರನ್ನು ಪ್ರಶ್ನಿಸಿದಾಗ, “ಈ ಬಗ್ಗೆ ನಾನು ನನ್ನ ಮೇಲಾಧಿಕಾರಿಗೆ ಹೇಳುತ್ತೇನೆ” ಎಂದಷ್ಟೇ ಹೇಳಿ, ಮುಂದುವರೆದು ಮಾತನಾಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮುಂಡಗೋಡ ಪದವಿ ಕಾಲೇಜಿನಲ್ಲಿ ಕೂಡ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಿಲ್ಲ ಅವರನ್ನು ಗೇಟಿನ ಹೊರಗಡೆ ನಿಲ್ಲಿಸಲಾಯಿತು

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...