Homeಮುಖಪುಟಜೈ ಶ್ರೀ ರಾಮ್ ಘೋಷಣೆ ಕೂಗದಂತೆ ವಿದ್ಯಾರ್ಥಿಗೆ ತಡೆ; ಪ್ರಾಧ್ಯಾಪಕಿಯರು ಅಮಾನತು

ಜೈ ಶ್ರೀ ರಾಮ್ ಘೋಷಣೆ ಕೂಗದಂತೆ ವಿದ್ಯಾರ್ಥಿಗೆ ತಡೆ; ಪ್ರಾಧ್ಯಾಪಕಿಯರು ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಇಂಜಿನಿಯರಿಂಗ್ ಕಾಲೇಜೊಂದರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಸ್ವಾಗತಿಸಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತುಗೊಳಿಸಲಾಗಿದೆ.

ಅ.20ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೀಡಿಯೊ ವೈರಲ್ ಆಗಿದೆ. ವಿದ್ಯಾರ್ಥಿಯೊಬ್ಬ ವೇದಿಕೆಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಾನೆ. ಅಲ್ಲೇ ಇದ್ದ ಇಬ್ಬರು ಪ್ರಾಧ್ಯಾಪಕಿಯರು ಅದಕ್ಕೆ ತಡೆಯೊಡ್ಡಿದ್ದಾರೆ.

ಮಮತಾ ಗೌತಮ್ ಎಂಬ ಶಿಕ್ಷಕಿ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ. ಜೈ ಶ್ರೀರಾಮ್ ಘೋಷಣೆಗಳು ಏಕೆ? ಇಲ್ಲಿ ಅದಕ್ಕೆ ಅವಕಾಶವಿಲ್ಲ. ನೀವು ಇಲ್ಲಿ ಘೋಷಣೆಗಳನ್ನು ಕೂಗಲು ಬಂದಿಲ್ಲ. ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ. ವೇದಿಕೆಯಿಂದ ಇಳಿದು ಹೋಗು ಎಂದು ಶಿಕ್ಷಕಿ ಹೇಳಿದ್ದಾರೆ.

ವೀಡಿಯೊ ವೈರಲ್ ಆದ ಕೂಡಲೇ, ಅನೇಕ ಬಲಪಂಥೀಯರು ಶಿಕ್ಷಕಿಗೆ ಟ್ರೋಲ್‌ ಮಾಡಿದ್ದಾರೆ. ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ನಂತರವೂ ವಿದ್ಯಾರ್ಥಿ ತನ್ನ ಸಹೋದ್ಯೋಗಿಯೊಂದಿಗೆ ವಾದಿಸುತ್ತಿದ್ದ ಎಂದು ಇನ್ನೋರ್ವ ಶಿಕ್ಷಕಿ ಹೇಳಿದ್ದಾರೆ.

ಪ್ರಾಧ್ಯಾಪಕಿಯರ ವಿರುದ್ಧ ಕೆಲವು ಸಂಘಟನೆಗಳು ಕಾಲೇಜಿನ ಬಳಿ ಪ್ರತಿಭಟನೆ ನಡೆಸಿದ್ದವು. ಕಾಲೇಜಿನ ಆಡಳಿತ ಮಂಡಳಿಯು ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ಶಿಫಾರಸಿನಂತೆ ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ.

ವಿಶ್ವವಿದ್ಯಾಲಯದ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಸಂಪೂರ್ಣ ತನಿಖೆಯ ನಂತರ, ಇಬ್ಬರು ಪ್ರಾಧ್ಯಾಪಕರಾದ ಪ್ರೊಫೆಸರ್ ಮಮತಾ ಗೌತಮ್ ಮತ್ತು ಡಾ. ಶ್ವೇತಾ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: ದೇವಾಲಯಗಳಲ್ಲಿ RSS ಚಟುವಟಿಕೆ ನಿಷೇಧ: ಹೊಸ ಸುತ್ತೋಲೆ ಹೊರಡಿಸಿದ ದೇವಸ್ವಂ ಮಂಡಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...