Homeಮುಖಪುಟಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಳ್ಳದ ಹಿನ್ನೆಲೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಪ್ರಮುಖ ಸರ್ಕಾರಿ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿ, ಆದೇ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥ (ಹೆಚ್‌ಒಡಿ) ಸಮೀರ್ ಕುಮಾರ್ ಸಾಹು ವಿರುದ್ಧ ಪದೇ ಪದೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಆದರೆ, ಕಾಲೇಜಿನ ಪ್ರಾಂಶುಪಾಲ ಮತ್ತು ಇತರ ಅಧಿಕಾರಿಗಳು ಈ ದೂರನ್ನು ನಿರ್ಲಕ್ಷಿಸಿದ್ದರು. ಹೆಚ್‌ಒಡಿ ವಿರುದ್ದ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಕಾಲೇಜಿನ ನಡೆ ಖಂಡಿಸಿ ಸಂತ್ರಸ್ತೆಯ ಜೊತೆ ಕೆಲ ವಿದ್ಯಾರ್ಥಿಗಳು ಶನಿವಾರ ಕ್ಯಾಂಪಸ್‌ನಲ್ಲಿ ಧರಣಿ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿ ಪ್ರಾಂಶುಪಾಲರ ಕೊಠಡಿ ಬಳಿ ಹಠಾತ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಿಸಿಟಿವಿ ದೃಶ್ಯಗಳ ಪ್ರಕಾರ, ವಿದ್ಯಾರ್ಥಿಗಳ ಗುಂಪೊಂದು ಆಕೆಯನ್ನು ರಕ್ಷಿಸಲು ಪ್ರಯತ್ನಿಸಿತ್ತು.

ಶೇಕಡ 90ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ನರಳುತ್ತಿದ್ದ ವಿದ್ಯಾರ್ಥಿನಿಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡವು ಆಕೆಗೆ ಸುಟ್ಟಗಾಯಗಳ ಘಟಕದಲ್ಲಿ ಚಿಕಿತ್ಸೆ ನೀಡುತ್ತಿತ್ತು.

ವಿದ್ಯಾರ್ಥಿನಿಯ ಜೀವ ಉಳಿಸಲು ವೈದ್ಯರು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು. ಮೂತ್ರ ಪಿಂಡ ಬದಲಿಸಿ ಆಕೆಯನ್ನು ಬದುಕಿಸಲು ಪ್ರಯತ್ನಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.46ರ ಸುಮಾರಿಗೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾರೆ ಎಂದು ಭುವನೇಶ್ವರದ ಏಮ್ಸ್ ತಡರಾತ್ರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಸಾವಿಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂತಾಪ ಸೂಚಿಸಿದ್ದು, ತಪ್ಪಿತಸ್ಥರೆಲ್ಲರೂ ಕಠಿಣ ಶಿಕ್ಷೆಯನ್ನು ಎದುರಿಸಲಿದ್ದಾರೆ ಎಂದು ಆಕೆಯ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

“ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಯಿತು. ಸರ್ಕಾರ ಎಲ್ಲಾ ಜವಾಬ್ದಾರಿಗಳನ್ನು ಪೂರೈಸಿದರೂ, ತಜ್ಞ ವೈದ್ಯಕೀಯ ತಂಡದ ಅವಿರತ ಪ್ರಯತ್ನಗಳ ಹೊರತಾಗಿಯೂ, ವಿದ್ಯಾರ್ಥಿನಿಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ.”

“ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ತಡೆಯುವ ಶಕ್ತಿಯನ್ನು ನೀಡಲಿ ಎಂದು ಭಗವಾನ್ ಜಗನ್ನಾಥನನ್ನು ಬೇಡಿಕೊಳ್ಳುತ್ತೇನೆ. ಈ ಪ್ರಕರಣದ ತಪ್ಪಿತಸ್ಥರೆಲ್ಲರೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯನ್ನು ಎದುರಿಸಲಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನಾನು ಭರವಸೆ ನೀಡುತ್ತೇನೆ. ಇದಕ್ಕಾಗಿ, ನಾನು ಅಧಿಕಾರಿಗಳಿಗೆ ವೈಯಕ್ತಿಕವಾಗಿ ಸೂಚನೆಗಳನ್ನು ನೀಡಿದ್ದೇನೆ. ಸರ್ಕಾರವು ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ” ಎಂದು ಸಿಎಂ ಮಾಝಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೆಚ್‌ಒಡಿಯ ಲೈಂಗಿಕ ಕಿರುಕುಳದ ಬಗ್ಗೆ ಆಂತರಿಕ ದೂರು ಸಮಿತಿ (ಐಸಿಸಿ)ಗೆ ವಿದ್ಯಾರ್ಥಿನಿ ನೀಡಿದ್ದ ದೂರು ಆಧರಿಸಿ ಕ್ರಮ ಕೈಗೊಳ್ಳಬೇಕಾದ ಕಾಲೇಜು ಆಡಳಿತ ಮಂಡಳಿ, ದೂರನ್ನು ಹಿಂಪಡೆಯಲು ಆಕೆಗೆ ಒತ್ತಡ ಹೇರಿತ್ತು ಎಂದು ವಿದ್ಯಾರ್ಥಿನಿಯ ತಂದೆ ಆರೋಪಿಸಿದ್ದರು.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಕಾಲೇಜಿನ ಪ್ರಾಂಶುಪಾಲ ದಿಲೀಪ್ ಘೋಷ್ ಮತ್ತು ಲೈಂಗಿಕ ಕಿರುಕುಳದ ಆರೋಪಿ ಸಮೀರ್ ಕುಮಾರ್ ಸಾಹುವನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...