Homeಮುಖಪುಟಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಳ್ಳದ ಹಿನ್ನೆಲೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಪ್ರಮುಖ ಸರ್ಕಾರಿ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿ, ಆದೇ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥ (ಹೆಚ್‌ಒಡಿ) ಸಮೀರ್ ಕುಮಾರ್ ಸಾಹು ವಿರುದ್ಧ ಪದೇ ಪದೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಆದರೆ, ಕಾಲೇಜಿನ ಪ್ರಾಂಶುಪಾಲ ಮತ್ತು ಇತರ ಅಧಿಕಾರಿಗಳು ಈ ದೂರನ್ನು ನಿರ್ಲಕ್ಷಿಸಿದ್ದರು. ಹೆಚ್‌ಒಡಿ ವಿರುದ್ದ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಕಾಲೇಜಿನ ನಡೆ ಖಂಡಿಸಿ ಸಂತ್ರಸ್ತೆಯ ಜೊತೆ ಕೆಲ ವಿದ್ಯಾರ್ಥಿಗಳು ಶನಿವಾರ ಕ್ಯಾಂಪಸ್‌ನಲ್ಲಿ ಧರಣಿ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿ ಪ್ರಾಂಶುಪಾಲರ ಕೊಠಡಿ ಬಳಿ ಹಠಾತ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಿಸಿಟಿವಿ ದೃಶ್ಯಗಳ ಪ್ರಕಾರ, ವಿದ್ಯಾರ್ಥಿಗಳ ಗುಂಪೊಂದು ಆಕೆಯನ್ನು ರಕ್ಷಿಸಲು ಪ್ರಯತ್ನಿಸಿತ್ತು.

ಶೇಕಡ 90ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ನರಳುತ್ತಿದ್ದ ವಿದ್ಯಾರ್ಥಿನಿಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡವು ಆಕೆಗೆ ಸುಟ್ಟಗಾಯಗಳ ಘಟಕದಲ್ಲಿ ಚಿಕಿತ್ಸೆ ನೀಡುತ್ತಿತ್ತು.

ವಿದ್ಯಾರ್ಥಿನಿಯ ಜೀವ ಉಳಿಸಲು ವೈದ್ಯರು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು. ಮೂತ್ರ ಪಿಂಡ ಬದಲಿಸಿ ಆಕೆಯನ್ನು ಬದುಕಿಸಲು ಪ್ರಯತ್ನಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.46ರ ಸುಮಾರಿಗೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾರೆ ಎಂದು ಭುವನೇಶ್ವರದ ಏಮ್ಸ್ ತಡರಾತ್ರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಸಾವಿಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂತಾಪ ಸೂಚಿಸಿದ್ದು, ತಪ್ಪಿತಸ್ಥರೆಲ್ಲರೂ ಕಠಿಣ ಶಿಕ್ಷೆಯನ್ನು ಎದುರಿಸಲಿದ್ದಾರೆ ಎಂದು ಆಕೆಯ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

“ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಯಿತು. ಸರ್ಕಾರ ಎಲ್ಲಾ ಜವಾಬ್ದಾರಿಗಳನ್ನು ಪೂರೈಸಿದರೂ, ತಜ್ಞ ವೈದ್ಯಕೀಯ ತಂಡದ ಅವಿರತ ಪ್ರಯತ್ನಗಳ ಹೊರತಾಗಿಯೂ, ವಿದ್ಯಾರ್ಥಿನಿಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ.”

“ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ತಡೆಯುವ ಶಕ್ತಿಯನ್ನು ನೀಡಲಿ ಎಂದು ಭಗವಾನ್ ಜಗನ್ನಾಥನನ್ನು ಬೇಡಿಕೊಳ್ಳುತ್ತೇನೆ. ಈ ಪ್ರಕರಣದ ತಪ್ಪಿತಸ್ಥರೆಲ್ಲರೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯನ್ನು ಎದುರಿಸಲಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನಾನು ಭರವಸೆ ನೀಡುತ್ತೇನೆ. ಇದಕ್ಕಾಗಿ, ನಾನು ಅಧಿಕಾರಿಗಳಿಗೆ ವೈಯಕ್ತಿಕವಾಗಿ ಸೂಚನೆಗಳನ್ನು ನೀಡಿದ್ದೇನೆ. ಸರ್ಕಾರವು ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ” ಎಂದು ಸಿಎಂ ಮಾಝಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೆಚ್‌ಒಡಿಯ ಲೈಂಗಿಕ ಕಿರುಕುಳದ ಬಗ್ಗೆ ಆಂತರಿಕ ದೂರು ಸಮಿತಿ (ಐಸಿಸಿ)ಗೆ ವಿದ್ಯಾರ್ಥಿನಿ ನೀಡಿದ್ದ ದೂರು ಆಧರಿಸಿ ಕ್ರಮ ಕೈಗೊಳ್ಳಬೇಕಾದ ಕಾಲೇಜು ಆಡಳಿತ ಮಂಡಳಿ, ದೂರನ್ನು ಹಿಂಪಡೆಯಲು ಆಕೆಗೆ ಒತ್ತಡ ಹೇರಿತ್ತು ಎಂದು ವಿದ್ಯಾರ್ಥಿನಿಯ ತಂದೆ ಆರೋಪಿಸಿದ್ದರು.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಕಾಲೇಜಿನ ಪ್ರಾಂಶುಪಾಲ ದಿಲೀಪ್ ಘೋಷ್ ಮತ್ತು ಲೈಂಗಿಕ ಕಿರುಕುಳದ ಆರೋಪಿ ಸಮೀರ್ ಕುಮಾರ್ ಸಾಹುವನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...