Homeಅಂತರಾಷ್ಟ್ರೀಯ100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

- Advertisement -
- Advertisement -

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ಯೂರ್ಟೊ ಲೆಗುಯಿಜಾಮೊದ ಕೌಕಾಯಾ ವಿಮಾನ ನಿಲ್ದಾಣದಿಂದ ಪ್ಯೂರ್ಟೊ ಅಸಿಸ್‌ಗೆ ಹೊರಟಿದ್ದ ವಿಮಾನ, ರನ್‌ವೇಯ ಕೊನೆಯ ಭಾಗದ ಬಳಿ ನೆಲಕ್ಕಪ್ಪಳಿಸಿದೆ. ಅವಘಡ ನಡೆದ ಸ್ಥಳ ಪೆರು ಮತ್ತು ಈಕ್ವೆಡಾರ್ ಗಡಿಯ ಸಮೀಪವಿರುವ ಅಮೆಝಾನ್ ಅರಣ್ಯ ಪ್ರದೇಶದಲ್ಲಿದೆ.

ವರದಿಗಳ ಪ್ರಕಾರ, ಕೊಲಂಬಿಯಾದ ಸ್ಥಳೀಯ ಕಾಲಮಾನ ಸೋಮವಾರ (ಮಾ.23) ಬೆಳಿಗ್ಗೆ ಸುಮಾರು 9:50ಕ್ಕೆ ವಿಮಾನ ಪತನಗೊಂಡಿದೆ. ಭಾರತ ಮತ್ತು ಕೊಲಂಬಿಯಾ ನಡುವೆ ಸುಮಾರು 10 ಗಂಟೆ 30 ನಿಮಿಷಗಳ ಸಮಯದ ವ್ಯತ್ಯಾಸವಿದೆ. ಭಾರತವು ಕೊಲಂಬಿಯಾಕ್ಕಿಂತ ಮುಂದಿದೆ. ಹಾಗಾಗಿ, ಕೊಲಂಬಿಯಾದಲ್ಲಿ ಸೋಮವಾರ ಬೆಳಿಗ್ಗೆ 9:50 ಆಗಿದ್ದಾಗ, ಭಾರತದಲ್ಲಿ ರಾತ್ರಿ 8:20 ಆಗಿರುತ್ತದೆ.

ಅಪಘಾತಕ್ಕೀಡಾದ ವಿಮಾನವು ವಾಯುಪಡೆಗೆ ಸೇರಿದ C-130 ಹರ್ಕ್ಯುಲಸ್ ಮಾದರಿಯದ್ದಾಗಿದ್ದು, ಅದರಲ್ಲಿ 125ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಿಮಾನದಲ್ಲಿ 114 ಸೇನಾ ಸಿಬ್ಬಂದಿ ಹಾಗೂ 11 ಇತರ ಸಿಬ್ಬಂದಿ ಇದ್ದರು ಎಂದು ವಾಯುಪಡೆಯ ಕಮಾಂಡರ್ ಕಾರ್ಲೋಸ್ ಫೆರ್ನಾಂಡೊ ಸಿಲ್ವಾ ರುಯೇಡಾ ತಿಳಿಸಿದ್ದಾಗಿ ಬಿಬಿಸಿ ವರದಿ ಹೇಳಿದೆ.

ರಕ್ಷಣಾ ತಂಡಗಳು ದುರಂತ ಸ್ಥಳದಲ್ಲಿ ಮೃತದೇಹಗಳಿಗಾಗಿ ಹುಡುಕುತ್ತಿವೆ. ಗಾಯಗೊಂಡವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಬಿಬಿಸಿ ಮಂಗಳವಾರ (ಭಾರತೀಯ ಕಾಲಮಾನ ಮಾ.24) ಬೆಳಿಗ್ಗೆ ವರದಿ ಮಾಡಿದೆ.

ವಾಯುಪಡೆಯ ವಿಮಾನವಾದ್ದರಿಂದ ಅದರಲ್ಲಿ ಮದ್ದುಗುಂಡುಗಳು ಇತ್ತು. ವಿಮಾನಪತನಗೊಂಡ ವೇಳೆ ಆ ಮದ್ದುಗುಂಡುಗಳು ಸ್ಪೋಟಗೊಂಡು ಹೆಚ್ಚಿನ ಬೆಂಕಿ ಆವರಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.

ಈ ಘಟನೆಯು ಕೊಲಂಬಿಯಾದ ವಾಯುಪಡೆಯ ಇತಿಹಾಸದಲ್ಲಿ ನಡೆದ ಅತ್ಯಂತ ಭೀಕರ ದುರಂತ ಎಂದು ಹೇಳಲಾಗ್ತಿದೆ. ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ಫೋಟೋಗಳಲ್ಲಿ, ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಮತ್ತು ಸೈನಿಕರನ್ನು ಹೊತ್ತ ಟ್ರಕ್‌ಗಳು ಆ ಪ್ರದೇಶಕ್ಕೆ ಹೋಗುತ್ತಿರುವುದನ್ನು ತೋರಿಸಿವೆ ಎಂದು ಬಿಬಿಸಿ ವರದಿ ಉಲ್ಲೇಖಿಸಿದೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ “ಈ ಭಯಾನಕ ಅಪಘಾತ ಸಂಭವಿಸಬಾರದಿತ್ತು” ಎಂದು ಸಾಮಾಜಿಕ ಜಾಲತಾನ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರ ಮತ್ತು ವಿಮಾನಗಳನ್ನು ಹೊಸದಾಗಿ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಸರ್ಕಾರಿ ಕೆಲಸಗಳ ವಿಳಂಬವೇ ಕಾರಣ ಎಂದು ಅವರು ತಮ್ಮ ಸುದೀರ್ಘ ಬರಹದಲ್ಲಿ ದೂರಿದ್ದಾರೆ.

“ನಾನು ಇನ್ನು ಮುಂದೆ ಯಾವುದೇ ವಿಳಂಬವನ್ನು ಸಹಿಸುವುದಿಲ್ಲ, ನಮ್ಮ ಯುವಜನರ ಜೀವ ಪಣಕ್ಕಿಡಲಾಗಿದೆ” ಎಂದು ಬರೆದುಕೊಂಡಿರುವ ಅವರು, ಅಪಘಾತಕ್ಕೆ ನಿಖರ ಕಾರಣವೇನಿರಬಹುದು ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಕಳೆದ ತಿಂಗಳು, ಬ್ಯಾಂಕ್‌ನೋಟುಗಳನ್ನು (ನಗದು) ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಯ C-130 ಹರ್ಕ್ಯುಲಸ್ ವಿಮಾನವು ದೇಶದ ಪಶ್ಚಿಮ ಭಾಗದಲ್ಲಿ ಪತನಗೊಂಡು, ಕನಿಷ್ಠ 20 ಜನರು ಸಾವನ್ನಪ್ಪಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...