Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...