Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...