Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...