Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

- Advertisement -
- Advertisement -

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. ಈ ಕುರಿತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಘೋಷಣೆಯನ್ನು ಮಾಡಿದ್ದಾರೆ.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡವನ್ನು “ಜನಾಂಗೀಯ ಹತ್ಯೆ” ಎಂದು ಬಣ್ಣಿಸಿದೆ. ಕೊಲಂಬಿಯಾ ಇಸ್ರೇಲ್‌ನ ಆಪ್ತ ದೇಶಗಳಲ್ಲೊಂದಾಗಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್‌ ನಿರಂತರ ದಾಳಿ ಹಿನ್ನೆಲೆ ಈ ಹಿಂದೆ ಇಸ್ರೇಲ್‌ನಿಂದ ಶಸ್ತ್ರಾಸ್ತ್ರಗಳ ಖರೀದಿಯನ್ನು ಕೊಲಂಬಿಯಾ ಸ್ಥಗಿತಗೊಳಿಸಿತ್ತು ಮತ್ತು ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು ಜರ್ಮನಿಯ ನಾಝಿ ಕ್ರಮಗಳಿಗೆ ಹೋಲಿಸಿತ್ತು.

ಕೊಲಂಬಿಯಾದ ರಾಜಧಾನಿಯಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕರ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ನಾಳೆಯಿಂದ ಕೊಲಂಬಿಯಾ, ನರಹಂತಕ ಅಧ್ಯಕ್ಷರನ್ನು ಹೊಂದಿದ್ದಕ್ಕಾಗಿ ಇಸ್ರೇಲ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಳ್ಳಲಿದೆ. ಪ್ಯಾಲೆಸ್ತೀನ್‌ ಸತ್ತರೆ, ಮಾನವೀಯತೆಯು ಸಾಯುತ್ತದೆ, ಮತ್ತು ನಾವು ಅದನ್ನು ಸಾಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಎಕ್ಸ್‌ನಲ್ಲಿ ಪೆಟ್ರೋ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶಿಶುಗಳನ್ನು ಸುಟ್ಟುಹಾಕಿದ, ಮಕ್ಕಳನ್ನು ಕೊಂದ, ಮಹಿಳೆಯರನ್ನು ಅತ್ಯಾಚಾರ ಮಾಡಿದ ಮತ್ತು ಅಮಾಯಕ ನಾಗರಿಕರನ್ನು ಅಪಹರಿಸಿದ ಅತ್ಯಂತ ಹೇಯ ರಾಕ್ಷಸರ ಪರವಾಗಿ ನಿಲ್ಲಲು ಗುಸ್ಟಾವೊ ಪೆಟ್ರೋ ನಿರ್ಧರಿಸಿದ್ದಾರೆ ಎಂದು ಇತಿಹಾಸವು ನೆನಪಿಸಿಕೊಳ್ಳುತ್ತದೆ ಎಂದು ಇಸ್ರೇಲ್‌ ನಡೆಸಿದ್ದ ಮಹಾ ಹತ್ಯಾಕಾಂಡವನ್ನು ಸಮರ್ಥಿಸಿ ಇಸ್ರೇಲ್ ಕಾಟ್ಜ್ ಹಮಾಸ್‌ ಕಡೆ ಬೊಟ್ಟು ಮಾಡಿದ್ದಾರೆ.

ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ, ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ ಬೆನ್ನಲ್ಲಿ ಇಸ್ರೇಲ್‌ನಿಂದ ಕೊಲಂಬಿಯಾ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿತ್ತು. ಇದಲ್ಲದೆ ಇಸ್ರೇಲ್‌ನ ಮಿಲಿಟರಿ ನಡೆಸುತ್ತಿರುವ ಅಪರಾಧವನ್ನು ಟೀಕಿಸಿತ್ತು.

‘ಕೊಲಂಬಿಯಾ’ ಲ್ಯಾಟಿನ್ ಅಮೇರಿಕಾದಲ್ಲಿ ಇಸ್ರೇಲ್‌ನ ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. ಆದರೆ 2022 ರಲ್ಲಿ ಕೊಲಂಬಿಯಾದ ಮೊದಲ ಎಡಪಂಥೀಯ ಅಧ್ಯಕ್ಷರಾಗಿ ಪೆಟ್ರೋ ಆಯ್ಕೆಯಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಬಂಡಾಯ ಗುಂಪುಗಳ ವಿರುದ್ಧ ಹೋರಾಡಲು ಕೊಲಂಬಿಯಾ ಇಸ್ರೇಲ್‌-ನಿರ್ಮಿತ ಯುದ್ಧವಿಮಾನಗಳು ಮತ್ತು ಮೆಷಿನ್ ಗನ್‌ಗಳನ್ನು ಬಳಸುತ್ತದೆ ಮತ್ತು ಎರಡೂ ದೇಶಗಳು 2020ರಲ್ಲಿ ಈ ಬಗ್ಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಇಸ್ರೇಲ್ ಮತ್ತು ಕೊಲಂಬಿಯಾದ ನಡುವಿನ ಸಂಬಂಧಗಳು ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಯಾವುದೇ ಯೆಹೂದ್ಯ ವಿರೋಧಿ ಮತ್ತು ದ್ವೇಷ ತುಂಬಿದ ಅಧ್ಯಕ್ಷರು ಅದನ್ನು ಬದಲಾಯಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಇಸ್ರೇಲ್ ರಾಜ್ಯವು ತನ್ನ ನಾಗರಿಕರನ್ನು ಚಿಂತೆ ಮತ್ತು ಭಯವಿಲ್ಲದೆ ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ಕಾಟ್ಜ್ ಹೇಳಿದ್ದಾರೆ.

 ಇದನ್ನು ಓದಿ: ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...