Homeಅಂತರಾಷ್ಟ್ರೀಯಸ್ವಾಮಿಯ ಕೈಯ್ಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ ಕೊಲಂಬೊ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು!

ಸ್ವಾಮಿಯ ಕೈಯ್ಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ ಕೊಲಂಬೊ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು!

ಶ್ರೀಲಂಕಾ ಪ್ರಧಾನಿಯ ಪ್ರಮುಖ ಬೆಂಗಲಿಗನನ್ನು ಕುಲಪತಿಯನ್ನಾಗಿ ಮಾಡಿದ್ದಕ್ಕೆ ವಿದ್ಯಾರ್ಥಿಗಳ ವಿಭಿನ್ನ ಪ್ರತಿಭಟನೆ

- Advertisement -
- Advertisement -

ಕೊಲಂಬೊ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ದೇಶದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಬಲಿಗ ಸ್ವಾಮಿಯೊಬ್ಬರನ್ನು ನೇಮಿಸಿದ್ದನ್ನು ವಿರೋಧಿಸಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದಿದೆ.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಗಲಿಗ ಧರ್ಮ ಗುರು, ಮುರುತ್ತೆತ್ತುವೆ ಆನಂದ ಥೇರೊ ಅವರನ್ನು ಅಲ್ಲಿನ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಕೊಲಂಬೊ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದ್ದರು. ಆದರೆ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಯು ಎಂದಿಗೂ ರಾಜಕೀಯ ನೇಮಕಾತಿಯಾಗಬಾರದು ಹಾಗೂ ರಾಜಕೀಯ ಕಾರ್ಯಸೂಚಿಯನ್ನು ಪೂರೈಸುವಂತಿರಬಾರದು ಎಂದು ಪ್ರತಿಪಾದಿಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ:5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

ಇಷ್ಟೇ ಅಲ್ಲದೆ, ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆಫ್ ಮ್ಯಾನೇಜ್ಮೆಂಟ್ ಮತ್ತು ಫೈನಾನ್ಸ್ ಟೀಚರ್ಸ್ ಅಸೋಸಿಯೇಷನ್ ​​(ಎಫ್‌ಎಂಎಫ್‌ಟಿಎ) ಕೂಡಾ ಪದವಿ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡಿತ್ತು.

ವಿಡಿಯೊ ನೋಡಿ

ಆದರೆ ದೇಶದ ಆಡಳಿತ ವರ್ಗ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಮನ್ನಿಸಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಗುಂಪೊಂದು ವಿಶ್ವವಿದ್ಯಾಲಯದ ಪದವಿ ಸಮಾರಂಭದಲ್ಲಿ ಪ್ರಮಾಣಪತ್ರವನ್ನು ಸ್ವೀಕರಿಸುವ ಸಮಯದಲ್ಲಿ ಸ್ವಾಮಿಯ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ:ಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

ಹಲವಾರು ವಿದ್ಯಾರ್ಥಿಗಳು ವೇದಿಕೆ ಮೇಲೆ ಬಂದು ಧರ್ಮ ಗುರುವಿನ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಅವರನ್ನು ಮುಜುಗರಕ್ಕೆ ಒಡ್ಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದೆ. ಪ್ರತಿಭಟನೆಯನ್ನು ಹೀಗೆ ಕೂಡಾ ಮಾಡಬಹುದು ಎಂದು ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಅಭಿನಂಧನೆಗಳ ಸುರಿಮಳೆ ಸುರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವೇದಿಕೆಗೆ ಆಗಮಿಸಿ ಕುಲಪತಿಯ ಕೈಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಮುರುತ್ತೆತ್ತುವೆ ಆನಂದ ಥೇರೊ ಅವರನ್ನು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ಕಳೆದ ತಿಂಗಳು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದ್ದರು. ಅವರು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಬಲ ಬೆಂಬಲಿಗರು ಎಂದು ಅಲ್ಲಿನ ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ:ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿಚಾರದ ಘನತೆ ಎಂದರೆ ಇದು. ಯುವತಿ ಯುವಕರ ಸ್ವಾಭಿಮಾನದ ನಡೆಯು ಅನುಕರಣೀಯವಾಗಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...