Homeಮುಖಪುಟಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿ!

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿ!

- Advertisement -
- Advertisement -

ಭಾರತೀಯ ಸೇನೆಯ ಆಯ್ಕೆ ಮಂಡಳಿಯು ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಇದೇ ಮೊದಲು ಆಯ್ಕೆ ಮಾಡಿದೆ. 26 ವರ್ಷಗಳ ‘ಗಣನೀಯ ಸೇವೆ’ ಪೂರ್ಣಗೊಳಿಸಿದ ನಂತರ ಅವರಿಗೆ ಬಡ್ತಿ ನೀಡುವ ಬಗ್ಗೆ ಸೇನೆ ಸ್ಪಷ್ಟಪಡಿಸಿದೆ.

ನಿರ್ಧಾರವನ್ನು ಪ್ರಕಟಿಸಿದ ಭಾರತೀಯ ಸೇನೆಯು ಸೋಮವಾರ, “ಕಾರ್ಪ್ ಆಫ್ ಸಿಗ್ನಲ್, ಕಾರ್ಪ್ ಆಫ್ ಎಲೆಕ್ಟ್ರಾನಿಕ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ (ಇಎಂಇ) ಹಾಗೂ ಕಾರ್ಪ್ ಆಫ್ ಇಂಜಿನಿಯರ್‌ಗಳೊಂದಿಗೆ ಸೇವೆ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳು ಕರ್ನಲ್ ಹುದ್ದೆಗೆ ಅನುಮೋದನೆ ಪಡೆಯುತ್ತಿರುವುದು ಇದೇ ಮೊದಲು” ಎಂದು ಹೇಳಿದೆ.

ಇದನ್ನೂ ಓದಿ: ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

ಕಾರ್ಪ್ ಆಫ್‌ ಸಿಗ್ನಲ್‌ನ ಲೆಫ್ಟಿನೆಂಟ್ ಕರ್ನಲ್ ಸಂಗೀತಾ ಸರ್ದನ, ಲೆಫ್ಟಿನೆಂಟ್ ಕರ್ನಲ್ ಸೋನಿಯಾ ಆನಂದ್, ಕಾರ್ಪ್ ಆಫ್‌ ಇಎಂಇ ಲೆಫ್ಟಿನೆಂಟ್ ಕರ್ನಲ್ ನವನೀತ್ ದುಗ್ಗಲ್, ಕಾರ್ಪ್‌ ಆಫ್‌ ಇಂಜಿನೀರ್‌ಸ್‌ ಲೆಫ್ಟಿನೆಂಟ್ ಕರ್ನಲ್ ರೀನು ಖನ್ನಾ ಮತ್ತು ಲೆಫ್ಟಿನೆಂಟ್ ಕರ್ನಲ್ ರಿಚ ಸಾಗರ್‌‌, ಒಟ್ಟು ಐವರು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಆಯ್ಕೆಯಾದ ಮಹಿಳಾ ಅಧಿಕಾರಿಗಳು ಎಂದು ಸೇನೆಯು ಹೇಳಿದೆ.

16 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕರ್ನಲ್ ಹುದ್ದೆಗೆ ಮೊದಲ ಆಯ್ಕೆ ನಡೆಯುತ್ತದೆ, ಇದರಲ್ಲಿ ಉಳಿದವರಿಗೆ 26 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕರ್ನಲ್ ಶ್ರೇಣಿಯನ್ನು ನೀಡಲಾಗುತ್ತದೆ.

ಸೈನ್ಯಕ್ಕೆ ಖಾಯಂ ಆಯೋಗವನ್ನು ನೀಡಿದ್ದರಿಂದ ಮಹಿಳೆಯರು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಅರ್ಹರಾಗಿದ್ದಾರೆ.

ಖಾಯಂ ಆಯೋಗ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ನಂತರ ವಿಶೇಷ ಮಂಡಳಿಯಿಂದ 615 ರಲ್ಲಿ 424 ಮಹಿಳೆಯರನ್ನು ಖಾಯಂ ಆಯೋಗಕ್ಕೆ ಪರಿಗಣಿಸಲಾಗಿದೆ.

ಹಿಂದೆ, ಕರ್ನಲ್ ಹುದ್ದೆಗೆ ಬಡ್ತಿ ಪಡೆಯುವುದು ಕೇವಲ ಸೇನಾ ವೈದ್ಯಕೀಯ ದಳ (AMC), ನ್ಯಾಯಾಧೀಶ ಅಡ್ವೋಕೇಟ್ ಜನರಲ್ (JAG) ಮತ್ತು ಸೇನಾ ಶಿಕ್ಷಣ ದಳ (AEC) ದ ಮಹಿಳಾ ಅಧಿಕಾರಿಗಳಿಗೆ ಮಾತ್ರ ಸಾಧ್ಯವಾಗುತ್ತಿತ್ತು.

ಇದನ್ನೂ ಓದಿ: ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...