Homeಸಿನಿಮಾಕ್ರೀಡೆ'ಇಡೀ ಭಾರತ ನಿನ್ನ ಹಿಂದೆ ಇದೆ': ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

- Advertisement -
- Advertisement -

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್‌ ಕ್ರಿಸ್ ಗ್ರೀವ್ಸ್‌ ರನ್ನು ಹುರಿದುಂಬಿಸುವ ಮೂಲಕ ಭಾರತ ತಂಡವನ್ನು ಬೆಂಬಲಿಸುವ ಹೇಳಿಕೆ ಸ್ಟಂಪ್-ಮೈಕ್‌ನಲ್ಲಿ ಸೆರೆಯಾಗಿದ್ದು ಆ ವಿಡಿಯೋ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ -2ರ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಿತು. ಭಾರತ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿರುವುದರಿಂದ ಸೆಮಿಫೈನಲ್ ತಲುಪುವುದು ಕಷ್ಟವಾಗಿದೆ. ಹಾಗಾಗಿ ಸ್ಕಾಟ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಗೆದ್ದಲ್ಲಿ ಅದು ಭಾರತಕ್ಕೆ ಅನುಕೂಲವಾಗುತ್ತಿತ್ತು. ಹಾಗಾಗಿ ಸ್ಕಾಟ್ಲೆಂಡ್ ಆಟಗಾರ ಭಾರತದ ಪರ ತನ್ನ ಅಭಿಮಾನ ತೋರಿಸಿ ನೀಡಿರುವ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಪಂದ್ಯದ 7 ನೇ ಓವರ್‌ನಲ್ಲಿ ಸ್ಕಾಟ್ಲೆಂಡ್ ವಿಕೆಟ್-ಕೀಪರ್ ಮ್ಯಾಥೂ ಕ್ರಾಸ್ ಕ್ರಿಸ್ ಬೌಲರ್ ಗ್ರೀವ್ಸ್‌ಗೆ “ಕಮ್ ಆನ್ ಗ್ರೀವೋ, ಇಡೀ ಭಾರತವು ನಿಮ್ಮ ಹಿಂದೆ ಇದೆ” ಎಂದು ಹೇಳಿದ್ದಾರೆ. ಆ ಪಂದ್ಯದಲ್ಲಿ ಸ್ಕಾಟ್ಲೆಂಡ್ ದಿಟ್ಟ ಹೋರಾಟ ನೀಡಿದರೂ ಸಹ 16 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದರೆ ಅದಕ್ಕೆ ಉತ್ತರವಾಗಿ ಸ್ಕಾಟ್ಲೆಂಡ್ 5 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ನಂತರ ನಡೆದ ಮತ್ತೊಂದು ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ಎದುರು ಜಯಿಸಿ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದರೆ ಆಫ್ಘಾನಿಸ್ತಾನವು 7 ವಿಕೆಟ್‌ ಕಳೆದುಕೊಂಡು ಕೇವಲ 144 ರನ್ ಗಳಿಸಿತು. ಭಾರತ 66 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಇದೇ ಸ್ಕಾಟ್ಲೆಂಡ್ ವಿರುದ್ಧ ಶುಕ್ರವಾರ ಭಾರತ ತನ್ನ ಎರಡನೇ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ ಮಾರಕ ದಾಳಿ ನಡೆಸಿದರೆ ಜಸ್ಪ್ರಿತ್ ಬೂಮ್ರ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ ಹೊಂದಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಸೋತರೆ, ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ತಲುಪುವ ಅವಕಾಶವಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...