Homeಸಿನಿಮಾಕ್ರೀಡೆ'ಇಡೀ ಭಾರತ ನಿನ್ನ ಹಿಂದೆ ಇದೆ': ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

- Advertisement -
- Advertisement -

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್‌ ಕ್ರಿಸ್ ಗ್ರೀವ್ಸ್‌ ರನ್ನು ಹುರಿದುಂಬಿಸುವ ಮೂಲಕ ಭಾರತ ತಂಡವನ್ನು ಬೆಂಬಲಿಸುವ ಹೇಳಿಕೆ ಸ್ಟಂಪ್-ಮೈಕ್‌ನಲ್ಲಿ ಸೆರೆಯಾಗಿದ್ದು ಆ ವಿಡಿಯೋ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ -2ರ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಿತು. ಭಾರತ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿರುವುದರಿಂದ ಸೆಮಿಫೈನಲ್ ತಲುಪುವುದು ಕಷ್ಟವಾಗಿದೆ. ಹಾಗಾಗಿ ಸ್ಕಾಟ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಗೆದ್ದಲ್ಲಿ ಅದು ಭಾರತಕ್ಕೆ ಅನುಕೂಲವಾಗುತ್ತಿತ್ತು. ಹಾಗಾಗಿ ಸ್ಕಾಟ್ಲೆಂಡ್ ಆಟಗಾರ ಭಾರತದ ಪರ ತನ್ನ ಅಭಿಮಾನ ತೋರಿಸಿ ನೀಡಿರುವ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಪಂದ್ಯದ 7 ನೇ ಓವರ್‌ನಲ್ಲಿ ಸ್ಕಾಟ್ಲೆಂಡ್ ವಿಕೆಟ್-ಕೀಪರ್ ಮ್ಯಾಥೂ ಕ್ರಾಸ್ ಕ್ರಿಸ್ ಬೌಲರ್ ಗ್ರೀವ್ಸ್‌ಗೆ “ಕಮ್ ಆನ್ ಗ್ರೀವೋ, ಇಡೀ ಭಾರತವು ನಿಮ್ಮ ಹಿಂದೆ ಇದೆ” ಎಂದು ಹೇಳಿದ್ದಾರೆ. ಆ ಪಂದ್ಯದಲ್ಲಿ ಸ್ಕಾಟ್ಲೆಂಡ್ ದಿಟ್ಟ ಹೋರಾಟ ನೀಡಿದರೂ ಸಹ 16 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದರೆ ಅದಕ್ಕೆ ಉತ್ತರವಾಗಿ ಸ್ಕಾಟ್ಲೆಂಡ್ 5 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ನಂತರ ನಡೆದ ಮತ್ತೊಂದು ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ಎದುರು ಜಯಿಸಿ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದರೆ ಆಫ್ಘಾನಿಸ್ತಾನವು 7 ವಿಕೆಟ್‌ ಕಳೆದುಕೊಂಡು ಕೇವಲ 144 ರನ್ ಗಳಿಸಿತು. ಭಾರತ 66 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಇದೇ ಸ್ಕಾಟ್ಲೆಂಡ್ ವಿರುದ್ಧ ಶುಕ್ರವಾರ ಭಾರತ ತನ್ನ ಎರಡನೇ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ ಮಾರಕ ದಾಳಿ ನಡೆಸಿದರೆ ಜಸ್ಪ್ರಿತ್ ಬೂಮ್ರ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ ಹೊಂದಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಸೋತರೆ, ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ತಲುಪುವ ಅವಕಾಶವಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...