Homeಸಿನಿಮಾಕ್ರೀಡೆ'ಇಡೀ ಭಾರತ ನಿನ್ನ ಹಿಂದೆ ಇದೆ': ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

- Advertisement -
- Advertisement -

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್‌ ಕ್ರಿಸ್ ಗ್ರೀವ್ಸ್‌ ರನ್ನು ಹುರಿದುಂಬಿಸುವ ಮೂಲಕ ಭಾರತ ತಂಡವನ್ನು ಬೆಂಬಲಿಸುವ ಹೇಳಿಕೆ ಸ್ಟಂಪ್-ಮೈಕ್‌ನಲ್ಲಿ ಸೆರೆಯಾಗಿದ್ದು ಆ ವಿಡಿಯೋ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ -2ರ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಿತು. ಭಾರತ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿರುವುದರಿಂದ ಸೆಮಿಫೈನಲ್ ತಲುಪುವುದು ಕಷ್ಟವಾಗಿದೆ. ಹಾಗಾಗಿ ಸ್ಕಾಟ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಗೆದ್ದಲ್ಲಿ ಅದು ಭಾರತಕ್ಕೆ ಅನುಕೂಲವಾಗುತ್ತಿತ್ತು. ಹಾಗಾಗಿ ಸ್ಕಾಟ್ಲೆಂಡ್ ಆಟಗಾರ ಭಾರತದ ಪರ ತನ್ನ ಅಭಿಮಾನ ತೋರಿಸಿ ನೀಡಿರುವ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಪಂದ್ಯದ 7 ನೇ ಓವರ್‌ನಲ್ಲಿ ಸ್ಕಾಟ್ಲೆಂಡ್ ವಿಕೆಟ್-ಕೀಪರ್ ಮ್ಯಾಥೂ ಕ್ರಾಸ್ ಕ್ರಿಸ್ ಬೌಲರ್ ಗ್ರೀವ್ಸ್‌ಗೆ “ಕಮ್ ಆನ್ ಗ್ರೀವೋ, ಇಡೀ ಭಾರತವು ನಿಮ್ಮ ಹಿಂದೆ ಇದೆ” ಎಂದು ಹೇಳಿದ್ದಾರೆ. ಆ ಪಂದ್ಯದಲ್ಲಿ ಸ್ಕಾಟ್ಲೆಂಡ್ ದಿಟ್ಟ ಹೋರಾಟ ನೀಡಿದರೂ ಸಹ 16 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದರೆ ಅದಕ್ಕೆ ಉತ್ತರವಾಗಿ ಸ್ಕಾಟ್ಲೆಂಡ್ 5 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ನಂತರ ನಡೆದ ಮತ್ತೊಂದು ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ಎದುರು ಜಯಿಸಿ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದರೆ ಆಫ್ಘಾನಿಸ್ತಾನವು 7 ವಿಕೆಟ್‌ ಕಳೆದುಕೊಂಡು ಕೇವಲ 144 ರನ್ ಗಳಿಸಿತು. ಭಾರತ 66 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಇದೇ ಸ್ಕಾಟ್ಲೆಂಡ್ ವಿರುದ್ಧ ಶುಕ್ರವಾರ ಭಾರತ ತನ್ನ ಎರಡನೇ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ ಮಾರಕ ದಾಳಿ ನಡೆಸಿದರೆ ಜಸ್ಪ್ರಿತ್ ಬೂಮ್ರ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ ಹೊಂದಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಸೋತರೆ, ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ತಲುಪುವ ಅವಕಾಶವಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...