Homeಸಿನಿಮಾಕ್ರೀಡೆ'ಇಡೀ ಭಾರತ ನಿನ್ನ ಹಿಂದೆ ಇದೆ': ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

- Advertisement -
- Advertisement -

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್‌ ಕ್ರಿಸ್ ಗ್ರೀವ್ಸ್‌ ರನ್ನು ಹುರಿದುಂಬಿಸುವ ಮೂಲಕ ಭಾರತ ತಂಡವನ್ನು ಬೆಂಬಲಿಸುವ ಹೇಳಿಕೆ ಸ್ಟಂಪ್-ಮೈಕ್‌ನಲ್ಲಿ ಸೆರೆಯಾಗಿದ್ದು ಆ ವಿಡಿಯೋ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ -2ರ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಿತು. ಭಾರತ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿರುವುದರಿಂದ ಸೆಮಿಫೈನಲ್ ತಲುಪುವುದು ಕಷ್ಟವಾಗಿದೆ. ಹಾಗಾಗಿ ಸ್ಕಾಟ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಗೆದ್ದಲ್ಲಿ ಅದು ಭಾರತಕ್ಕೆ ಅನುಕೂಲವಾಗುತ್ತಿತ್ತು. ಹಾಗಾಗಿ ಸ್ಕಾಟ್ಲೆಂಡ್ ಆಟಗಾರ ಭಾರತದ ಪರ ತನ್ನ ಅಭಿಮಾನ ತೋರಿಸಿ ನೀಡಿರುವ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಪಂದ್ಯದ 7 ನೇ ಓವರ್‌ನಲ್ಲಿ ಸ್ಕಾಟ್ಲೆಂಡ್ ವಿಕೆಟ್-ಕೀಪರ್ ಮ್ಯಾಥೂ ಕ್ರಾಸ್ ಕ್ರಿಸ್ ಬೌಲರ್ ಗ್ರೀವ್ಸ್‌ಗೆ “ಕಮ್ ಆನ್ ಗ್ರೀವೋ, ಇಡೀ ಭಾರತವು ನಿಮ್ಮ ಹಿಂದೆ ಇದೆ” ಎಂದು ಹೇಳಿದ್ದಾರೆ. ಆ ಪಂದ್ಯದಲ್ಲಿ ಸ್ಕಾಟ್ಲೆಂಡ್ ದಿಟ್ಟ ಹೋರಾಟ ನೀಡಿದರೂ ಸಹ 16 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದರೆ ಅದಕ್ಕೆ ಉತ್ತರವಾಗಿ ಸ್ಕಾಟ್ಲೆಂಡ್ 5 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ನಂತರ ನಡೆದ ಮತ್ತೊಂದು ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ಎದುರು ಜಯಿಸಿ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದರೆ ಆಫ್ಘಾನಿಸ್ತಾನವು 7 ವಿಕೆಟ್‌ ಕಳೆದುಕೊಂಡು ಕೇವಲ 144 ರನ್ ಗಳಿಸಿತು. ಭಾರತ 66 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಇದೇ ಸ್ಕಾಟ್ಲೆಂಡ್ ವಿರುದ್ಧ ಶುಕ್ರವಾರ ಭಾರತ ತನ್ನ ಎರಡನೇ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ ಮಾರಕ ದಾಳಿ ನಡೆಸಿದರೆ ಜಸ್ಪ್ರಿತ್ ಬೂಮ್ರ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ ಹೊಂದಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಸೋತರೆ, ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ತಲುಪುವ ಅವಕಾಶವಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...