Homeಸಿನಿಮಾಕ್ರೀಡೆ'ಇಡೀ ಭಾರತ ನಿನ್ನ ಹಿಂದೆ ಇದೆ': ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ- ವೈರಲ್

- Advertisement -
- Advertisement -

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್‌ ಕ್ರಿಸ್ ಗ್ರೀವ್ಸ್‌ ರನ್ನು ಹುರಿದುಂಬಿಸುವ ಮೂಲಕ ಭಾರತ ತಂಡವನ್ನು ಬೆಂಬಲಿಸುವ ಹೇಳಿಕೆ ಸ್ಟಂಪ್-ಮೈಕ್‌ನಲ್ಲಿ ಸೆರೆಯಾಗಿದ್ದು ಆ ವಿಡಿಯೋ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ -2ರ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಿತು. ಭಾರತ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿರುವುದರಿಂದ ಸೆಮಿಫೈನಲ್ ತಲುಪುವುದು ಕಷ್ಟವಾಗಿದೆ. ಹಾಗಾಗಿ ಸ್ಕಾಟ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಗೆದ್ದಲ್ಲಿ ಅದು ಭಾರತಕ್ಕೆ ಅನುಕೂಲವಾಗುತ್ತಿತ್ತು. ಹಾಗಾಗಿ ಸ್ಕಾಟ್ಲೆಂಡ್ ಆಟಗಾರ ಭಾರತದ ಪರ ತನ್ನ ಅಭಿಮಾನ ತೋರಿಸಿ ನೀಡಿರುವ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಪಂದ್ಯದ 7 ನೇ ಓವರ್‌ನಲ್ಲಿ ಸ್ಕಾಟ್ಲೆಂಡ್ ವಿಕೆಟ್-ಕೀಪರ್ ಮ್ಯಾಥೂ ಕ್ರಾಸ್ ಕ್ರಿಸ್ ಬೌಲರ್ ಗ್ರೀವ್ಸ್‌ಗೆ “ಕಮ್ ಆನ್ ಗ್ರೀವೋ, ಇಡೀ ಭಾರತವು ನಿಮ್ಮ ಹಿಂದೆ ಇದೆ” ಎಂದು ಹೇಳಿದ್ದಾರೆ. ಆ ಪಂದ್ಯದಲ್ಲಿ ಸ್ಕಾಟ್ಲೆಂಡ್ ದಿಟ್ಟ ಹೋರಾಟ ನೀಡಿದರೂ ಸಹ 16 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದರೆ ಅದಕ್ಕೆ ಉತ್ತರವಾಗಿ ಸ್ಕಾಟ್ಲೆಂಡ್ 5 ವಿಕೆಟ್ ಕಳೆದುಕೊಂಡು 156 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ನಂತರ ನಡೆದ ಮತ್ತೊಂದು ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ಎದುರು ಜಯಿಸಿ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದರೆ ಆಫ್ಘಾನಿಸ್ತಾನವು 7 ವಿಕೆಟ್‌ ಕಳೆದುಕೊಂಡು ಕೇವಲ 144 ರನ್ ಗಳಿಸಿತು. ಭಾರತ 66 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಇದೇ ಸ್ಕಾಟ್ಲೆಂಡ್ ವಿರುದ್ಧ ಶುಕ್ರವಾರ ಭಾರತ ತನ್ನ ಎರಡನೇ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ ಮಾರಕ ದಾಳಿ ನಡೆಸಿದರೆ ಜಸ್ಪ್ರಿತ್ ಬೂಮ್ರ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಇದನ್ನೂ ಓದಿ: ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತ

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

ಈ ಗೆಲುವಿನೊಂದಿಗೆ ಭಾರತ 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ ಹೊಂದಿದೆ. ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಸೋತರೆ, ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ತಲುಪುವ ಅವಕಾಶವಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...