Homeರಾಜಕೀಯ‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ ಆರೋಪವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ತಳ್ಳಿಹಾಕಿದ್ದು, ರಾಜ್ಯಕ್ಕೆ ಭೇಟಿ ನೀಡುವ ಯಾರನ್ನೂ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಸರ್ಕಾರದ ವಿರುದ್ಧವೇ ಸರ್ಕಾರದ ಭಾಗವಾಗಿರುವ ಶಿವಸೇನೆ ಶಾಸಕರು ಬಂಡಾಯ ಎದ್ದು ಗುಜರಾತ್‌ನ ಸೂರತ್‌ಗೆ ತೆರಳಿದ್ದರು. ಆದರೆ ಶಿವಸೇನೆಯ ಮಧ್ಯವರ್ತಿಗಳು ಗುಜರಾತಿಗೆ ಆಗಮಿಸುತ್ತಿದ್ದಂತೆ, ಅಲ್ಲಿಂದ ಅಸ್ಸಾಂನ ಗುವಾಹಟಿಗೆ ಬಂಡಾಯ ಶಾಸಕರನ್ನು ಸ್ಥಳಾಂತರಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯ ಶಾಸಕರು ಗುವಾಹಟಿಗೆ ಬಂದು ಇಳಿಯುವ ಮೊದಲೇ, ಮುಖ್ಯಮಂತ್ರಿ ಹಿಮಂತ ಅವರು ಪ್ರಸ್ತುತ ಶಾಸಕರು ಉಳಿದಿರುವ ಹೋಟೆಲ್‌‌ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

“ದೇಶದಾದ್ಯಂತ ಇರುವ ಶಾಸಕರನ್ನು ಅಸ್ಸಾಂಗೆ ಭೇಟಿ ನೀಡುವಂತೆ ನಾನು ಆಹ್ವಾನಿಸುತ್ತೇನೆ. ಜನರು ಹೋಟೆಲ್‌ಗೆ ಬರುವುದನ್ನು ತಡೆಯುವುದು ಹೇಗೆ? ದೇಶದಲ್ಲಿ ಫೆಡರಲ್ ರಚನೆ ಇರುವುದರಿಂದ ಅಸ್ಸಾಂನಲ್ಲಿ ಹೋಟೆಲ್‌ಗೆ ಬರಬೇಡಿ ಎಂದು ನಾನು ಹೇಳಲು ಸಾಧ್ಯವಿದೆಯೆ? ಯಾರಾದರೂ ಬಂದಾಗ ನನಗೆ ಸಂತೋಷವಾಗುತ್ತದೆ. ಅಸ್ಸಾಂಗೆ, ಅವರು ಎಲ್ಲಿಯವರೆಗೆ ಬೇಕಾದರೂ ಇರಬಹುದು” ಎಂದು ಹಿಮಂತ ಶರ್ಮಾ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆ ಅವರಿಗೆ ನೀವು ಏನು ಹೇಳಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರಜೆಗೆ ಸಮಯದಲ್ಲಿ ನೀವೂ ಅಸ್ಸಾಂಗೆ ಬರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಸಚಿವ ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಶಿವಸೇನೆ ಶಾಸಕರು ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಬಂಡಾಯ ಶಾಸಕರು, ಶಿವಸೇನೆಯು ಮಹಾ ವಿಕಾಸ್ ಅಘಾಡಿ ಸರ್ಕಾರದ ಮೈತ್ರಿಯನ್ನು ತೊರೆದು, ಅದರ ಬದಲಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡುವಂತೆ ಕೇಳಿಕೊಂಡಿದ್ದಾರೆ.

ಪ್ರಸ್ತುತ ಎಣಿಕೆಗಳ ಪ್ರಕಾರ, ಶಿಂಧೆ ಅವರ ವಿರುದ್ಧ ಪಕ್ಷಾಂತರ ವಿರೋಧಿ ಕಾನೂನು ಜಾರಿ ಮಾಡಲು ಸಾಧ್ಯವಿಲ್ಲ. ಶಿವಸೇನೆಯ ಐವತ್ತು ಶಾಸಕರಲ್ಲಿ ಅವರಿಗೆ ಅಗತ್ಯವಾದ 37 ಶಾಸಕರ ಬೆಂಬಲ ಇದೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪ್ರವಾಹದಲ್ಲಿ ಸಿಲುಕಿರೋರಿಗೆ ಏನಾದ್ರು ವ್ಯವಸ್ಥೆ ಮಾಡಪ್ಪ ಪುಣ್ಯಾತ್ಮ ಆಮೇಲೆ ವ್ಯಂಗ್ಯ ಮಾಡುವಂತೆ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...