Homeಚಳವಳಿ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳು ರೈತರಿಗೆ ಹೇಗೆ ಪ್ರಯೋಜನಕಾರಿ ಎಂಬುವುದನ್ನು ವಿವರಿಸಲು ಸಂಸದೆ ಹೇಮಾ ಮಾಲಿನಿ ಅವರನ್ನು ’ಕಂಡಿ ಕಿಸಾನ್ ಸಂಘರ್ಷ್ ಸಮಿತಿ’ಯು ಪಂಜಾಬ್‌ಗೆ ಆಹ್ವಾನಿಸಿದೆ. ಸಂಸದೆಗೆ ಪತ್ರ ಬರೆದಿರುವ ಸಮಿತಿಯು, ಅವರಿಗೆ ಒಂದು ವಾರ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಳ್ಳಲು ಮತ್ತು ವಿಮಾನಯಾನದ ಶುಲ್ಕದ ವೆಚ್ಚವನ್ನು ತಾವೇ ಭರಿಸುವುದಾಗಿ ಪ್ರಸ್ತಾಪಿಸಿದೆ.

ಸಮಿತಿಯ ಅಧ್ಯಕ್ಷರಾದ ಭೂಪಿಂದರ್ ಸಿಂಗ್ ಘುಮಾನ್ ಮತ್ತು ಉಪಾಧ್ಯಕ್ಷ ಜರ್ನೈಲ್ ಸಿಂಗ್ ಗರ್ದಿವಾಲ್ ಅವರು, “ಪಂಜಾಬಿಗಳು ಹೇಮಾ ಮಾಲಿನಿಯನ್ನು ಗೌರವದಿಂದ ನೋಡುತ್ತಿದ್ದಾರೆ. ಯಾಕೆಂದರೆ ಅವರು ರಾಜ್ಯದ ಜನರಿಂದ ಪ್ರೀತಿಸಲ್ಪಟ್ಟಿರುವ ಧರ್ಮೇಂದ್ರ ಅವರ ಪತ್ನಿ” ಎಂದು ಸಂಸದೆಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

“ಈ ಆಂದೋಲನದಲ್ಲಿ ಈಗಾಗಲೇ 100 ಜನರು ಸಾವನ್ನಪ್ಪಿದ್ದಾರೆ. ಆದರೆ ರೈತರಿಗೆ ಕಾನೂನುಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನೀವು ಹೇಳಿದ್ದು ನೋವುಂಟುಮಾಡಿದೆ. ನಮ್ಮ ಸಮಿತಿಯು ನಿಮ್ಮನ್ನು ಪಂಜಾಬ್‌ಗೆ ಆಹ್ವಾನಿಸಲು ನಿರ್ಧರಿಸಿದೆ. ಇದರಿಂದಾಗಿ ಕಾನೂನುಗಳ ಬಗ್ಗೆ ನೀವು ತಿಳಿದುಕೊಂಡಿರುವುದನ್ನು ರೈತರಿಗೆ ವಿವರಿಸಬಹುದು” ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ಸ್ಥಿತಿಗೆ ಅನುಗುಣವಾಗಿ ಪಂಚತಾರಾ ಹೋಟೆಲ್‌ನಲ್ಲಿ ನಿಮ್ಮ ವಾಸ್ತವ್ಯವನ್ನು ವ್ಯವಸ್ಥೆಗೊಳಿಸಬೇಕೆಂದು ನಾವು ನಿರ್ಧರಿಸಿದ್ದೇವೆ. ಇದಕ್ಕೆ ಹಣವನ್ನು ರೈತರು ಮತ್ತು ಕಾರ್ಮಿಕರು ಪಾವತಿಸುತ್ತಾರೆ” ಎಂದು ತಿಳಿಸಲಾಗಿದೆ.

“ಪಂಜಾಬ್‌ನ ಮಕ್ಕಳು ಸಹ ಪಂಜಾಬ್ ಅನ್ನು ನಾಶಮಾಡಲು ರೂಪಿಸಲಾದ ಕೃಷಿ ಕಾನೂನುಗಳ ಉದ್ದೇಶವನ್ನು ಅರ್ಥಮಾಡಿಕೊಂಡಿದ್ದಾರೆ. ಆದರೆ ನೀವು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದೀರಿ. ಆದ್ದರಿಂದ ನೀವು ಪಂಜಾಬ್‌ಗೆ ಬಂದು ಅದನ್ನು ಜನರಿಗೆ ವಿವರಿಸಬೇಕೆಂದು ನಾವು ವಿನಂತಿಸುತ್ತೇವೆ. ಇದರಿಂದಾಗಿ ನಮ್ಮ ಜನರು ದೆಹಲಿಯ ಗಡಿಗಳಲ್ಲಿ ಕೊರೆಯುವ ಚಳಿಯಿಂದಾಗಿ ಪ್ರಾಣ ಕಳೆದುಕೊಳ್ಳುವುದು ತಪ್ಪುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೇಮಾ ಮಾಲಿನಿ ಇತ್ತೀಚೆಗೆ, “ಇಷ್ಟೆಲ್ಲಾ ಮಾತುಕತೆಗಳು ನಡೆದ ನಂತರವೂ ರೈತರು ಸಹಮತಕ್ಕೆ ಬರುತ್ತಿಲ್ಲ. ಅವರಿಗೇನು ಬೇಕೆಂದು ಅಥವಾ ಈ ಕಾನೂನುಗಳಲ್ಲಿ ಏನು ಸಮಸ್ಯೆಯಿದೆ ಎಂಬುದು ಅವರಿಗೆ ತಿಳಿದಿಲ್ಲ. ಇದರರ್ಥ ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...