Homeಮುಖಪುಟನ್ಯಾಯಾಂಗ ನಿಂದನೆ: 6 ವಾರದಲ್ಲಿ ಪ್ರತಿಕ್ರಿಯೆ ನೀಡಲು ಕುನಾಲ್ ಕಮ್ರಾಗೆ ಸುಪ್ರೀಂ ನೋಟಿಸ್

ನ್ಯಾಯಾಂಗ ನಿಂದನೆ: 6 ವಾರದಲ್ಲಿ ಪ್ರತಿಕ್ರಿಯೆ ನೀಡಲು ಕುನಾಲ್ ಕಮ್ರಾಗೆ ಸುಪ್ರೀಂ ನೋಟಿಸ್

ನೋಟಿಸ್‌ನಲ್ಲಿ "ನ್ಯಾಯಾಂಗವನ್ನು ಟೀಕಿಸಿದ್ದಕ್ಕಾಗಿ" ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಕ್ರಮಗಳನ್ನು ಏಕೆ ತೆಗೆದುಕೊಳ್ಳಬಾರದು ಎಂದು ವಿವರಿಸಿ ಎಂದು ಕೇಳಿದೆ.

- Advertisement -
- Advertisement -

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾಗೆ ಸುಪ್ರೀಂಕೋರ್ಟ್ ಕ್ರಿಮಿನಲ್ ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ್ದು, ಉನ್ನತ ನ್ಯಾಯಾಲಯವನ್ನು ಟ್ವೀಟ್ ಮತ್ತು ಚಿತ್ರಗಳಲ್ಲಿ ಟೀಕಿಸಿದ್ದಕ್ಕಾಗಿ 6 ​​ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ವ್ಯಂಗ್ಯಚಿತ್ರಕಾರ ರಚಿತಾ ತನೇಜಾ ಅವರಿಗೂ ಸಹ ನೋಟಿಸ್ ನೀಡಿದೆ.

ಟ್ವೀಟ್ ಮತ್ತು ಚಿತ್ರ ಬಿಡಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತಿಕ್ರಿಯಿಸಲು ಇಬ್ಬರಿಗೂ ಆರು ವಾರಗಳ ಕಾಲಾವಕಾಶ ನೀಡಲಾಗಿದೆ. ಆದರೆ, ಇಬ್ಬರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಇಬ್ಬರು ಕಾನೂನು ವಿದ್ಯಾರ್ಥಿಗಳಾದ ನಿಶಾಂತ್ ಕಾಟ್ನೇಶ್ವರ್ಕರ್ ಮತ್ತು ಸ್ಕಂದ್ ಬಾಜ್ಪೈ ಮತ್ತು ವಕೀಲ ಅಭಿಜುದಾಯ ಮಿಶ್ರಾ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಹೂಡಿದ್ದರು.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್. ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಹೊರಡಿಸಿರುವ ನೋಟಿಸ್‌ನಲ್ಲಿ “ನ್ಯಾಯಾಂಗವನ್ನು ಟೀಕಿಸಿದ್ದಕ್ಕಾಗಿ” ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಕ್ರಮಗಳನ್ನು ಏಕೆ ತೆಗೆದುಕೊಳ್ಳಬಾರದು ಎಂದು ಪ್ರತಿಕ್ರಿಯೆ ನೀಡಿ ಎಂದು ಕೇಳಿದೆ.

ಇದನ್ನೂ ಓದಿ: ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಎಂಟುಕ್ಕೂ ಹೆಚ್ಚು ವಕೀಲರು ಕಮ್ರಾ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್‌ ತೀರ್ಪನ್ನು ವ್ಯಂಗ್ಯಚಿತ್ರಕಾರ ರಚಿತಾ ತನೇಜಾ ಕೂಡ ತಮ್ಮ ಟ್ವೀಟ್‌ಗಳಲ್ಲಿ ಕಾರ್ಟೂನ್ ಮಾಡಿ ಟೀಕಿಸಿದ್ದರು. ಈ ಟ್ವೀಟ್‌ಗಳಲ್ಲಿ ಉನ್ನತ ನ್ಯಾಯಾಲಯವನ್ನು ಉಲ್ಲೇಖಿಸಿದ ಇತರ ಚಿತ್ರಗಳೂ ಇದ್ದವು. ಕಾನೂನು ವಿದ್ಯಾರ್ಥಿಯ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್ ವಿಚಾರಣೆಗೆ ಅನುಮೋದನೆ ನೀಡಿದೆ.

ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕಮ್ರಾ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿ, ಕಮ್ರಾ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಈ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...