Homeಮುಖಪುಟನ್ಯಾಯಾಂಗ ನಿಂದನೆ: 6 ವಾರದಲ್ಲಿ ಪ್ರತಿಕ್ರಿಯೆ ನೀಡಲು ಕುನಾಲ್ ಕಮ್ರಾಗೆ ಸುಪ್ರೀಂ ನೋಟಿಸ್

ನ್ಯಾಯಾಂಗ ನಿಂದನೆ: 6 ವಾರದಲ್ಲಿ ಪ್ರತಿಕ್ರಿಯೆ ನೀಡಲು ಕುನಾಲ್ ಕಮ್ರಾಗೆ ಸುಪ್ರೀಂ ನೋಟಿಸ್

ನೋಟಿಸ್‌ನಲ್ಲಿ "ನ್ಯಾಯಾಂಗವನ್ನು ಟೀಕಿಸಿದ್ದಕ್ಕಾಗಿ" ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಕ್ರಮಗಳನ್ನು ಏಕೆ ತೆಗೆದುಕೊಳ್ಳಬಾರದು ಎಂದು ವಿವರಿಸಿ ಎಂದು ಕೇಳಿದೆ.

- Advertisement -
- Advertisement -

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾಗೆ ಸುಪ್ರೀಂಕೋರ್ಟ್ ಕ್ರಿಮಿನಲ್ ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ್ದು, ಉನ್ನತ ನ್ಯಾಯಾಲಯವನ್ನು ಟ್ವೀಟ್ ಮತ್ತು ಚಿತ್ರಗಳಲ್ಲಿ ಟೀಕಿಸಿದ್ದಕ್ಕಾಗಿ 6 ​​ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ವ್ಯಂಗ್ಯಚಿತ್ರಕಾರ ರಚಿತಾ ತನೇಜಾ ಅವರಿಗೂ ಸಹ ನೋಟಿಸ್ ನೀಡಿದೆ.

ಟ್ವೀಟ್ ಮತ್ತು ಚಿತ್ರ ಬಿಡಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತಿಕ್ರಿಯಿಸಲು ಇಬ್ಬರಿಗೂ ಆರು ವಾರಗಳ ಕಾಲಾವಕಾಶ ನೀಡಲಾಗಿದೆ. ಆದರೆ, ಇಬ್ಬರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಇಬ್ಬರು ಕಾನೂನು ವಿದ್ಯಾರ್ಥಿಗಳಾದ ನಿಶಾಂತ್ ಕಾಟ್ನೇಶ್ವರ್ಕರ್ ಮತ್ತು ಸ್ಕಂದ್ ಬಾಜ್ಪೈ ಮತ್ತು ವಕೀಲ ಅಭಿಜುದಾಯ ಮಿಶ್ರಾ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಹೂಡಿದ್ದರು.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್. ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಹೊರಡಿಸಿರುವ ನೋಟಿಸ್‌ನಲ್ಲಿ “ನ್ಯಾಯಾಂಗವನ್ನು ಟೀಕಿಸಿದ್ದಕ್ಕಾಗಿ” ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಕ್ರಮಗಳನ್ನು ಏಕೆ ತೆಗೆದುಕೊಳ್ಳಬಾರದು ಎಂದು ಪ್ರತಿಕ್ರಿಯೆ ನೀಡಿ ಎಂದು ಕೇಳಿದೆ.

ಇದನ್ನೂ ಓದಿ: ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಎಂಟುಕ್ಕೂ ಹೆಚ್ಚು ವಕೀಲರು ಕಮ್ರಾ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್‌ ತೀರ್ಪನ್ನು ವ್ಯಂಗ್ಯಚಿತ್ರಕಾರ ರಚಿತಾ ತನೇಜಾ ಕೂಡ ತಮ್ಮ ಟ್ವೀಟ್‌ಗಳಲ್ಲಿ ಕಾರ್ಟೂನ್ ಮಾಡಿ ಟೀಕಿಸಿದ್ದರು. ಈ ಟ್ವೀಟ್‌ಗಳಲ್ಲಿ ಉನ್ನತ ನ್ಯಾಯಾಲಯವನ್ನು ಉಲ್ಲೇಖಿಸಿದ ಇತರ ಚಿತ್ರಗಳೂ ಇದ್ದವು. ಕಾನೂನು ವಿದ್ಯಾರ್ಥಿಯ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್ ವಿಚಾರಣೆಗೆ ಅನುಮೋದನೆ ನೀಡಿದೆ.

ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕಮ್ರಾ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿ, ಕಮ್ರಾ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಈ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...