Homeಮುಖಪುಟಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

- Advertisement -
- Advertisement -

ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಯ ಕಾರ್ಯಕರ್ತರು ತಮಗೆ ನಿರಂತರವಾಗಿ ಕಿರುಕುಳವನ್ನು ನೀಡುತ್ತಿದ್ದಾರೆ ಎಂದು ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ನಳಿನ್ ಯಾದವ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

2021ರ ಜನವರಿ 1ರಂದು, ಇಂದೋರ್‌ನ ಕೆಫೆಯೊಂದರಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಾಮಿಡಿಯನ್‌  ಮುನವ್ವರ್‌ ಫಾರೂಕಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ದೂರಿನ ಮೇರೆಗೆ ಸ್ಟ್ಯಾಂಡ್-ಅಪ್ ಹಾಸ್ಯನಟರಾದ ನಳಿನ್ ಯಾದವ್ ಮತ್ತು ಮುನವ್ವರ್‌ ಫಾರುಕಿ ಸೇರಿ ಇತರ ಇಬ್ಬರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಪಡೆದು ಮುನವ್ವರ್‌ ಫರುಕಿ ಫೆಬ್ರವರಿ 2021ರಲ್ಲಿ ಇಂದೋರ್ ಕೇಂದ್ರ ಕಾರಾಗೃಹದಿಂದ ಹೊರ ಬಂದಿದ್ದರು. ಕೆಲವು ದಿನಗಳ ನಂತರ, ಫೆಬ್ರವರಿ 26ರಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಮಧ್ಯಂತರ ಜಾಮೀನಿನ ಮೇಲೆ ನಳಿನ್ ಯಾದವ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಪ್ರಕರಣ ದಾಖಲು ಮತ್ತು ಜಾಮೀನಿನ ಬಳಿಕ ನಮಗೆ ಕಷ್ಟದ ದಿನಗಳು ಆರಂಭವಾಗಿದೆ ಎಂದು ಮಧ್ಯಪ್ರದೇಶ ಮೂಲದ ನಳಿನ್‌ ಯಾದವ್‌ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ತನಗೆ ಮತ್ತು ತನ್ನ ಕಿರಿಯ ಸಹೋದರನಿಗೆ ಆಡಳಿತ ಪಕ್ಷದ ಅಂಗಸಂಸ್ಥೆಗಳು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಮೇ 26 ರಂದು ಜನನಿಬಿಡ ರಸ್ತೆಯಲ್ಲಿ ಗುಂಪೊಂದು ತನ್ನ ಮತ್ತು ಸಹೋದರನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಳಿನ್ ಯಾದವ್, ಜೈಲಿನಿಂದ ಬಿಡುಗಡೆ ಬಳಿಕ ನಮ್ಮ ಮೇಲೆ ದೌರ್ಜನ್ಯ ಪ್ರಾರಂಭವಾಗಿದೆ. ಇದು ಈಗಲೂ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಮನೆಯನ್ನು ಬಲಾಯಿಸುವಂತೆ ಪೊಲೀಸರು ನನಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ನಳಿನ್‌ ಮಾತನಾಡುತ್ತಾ, ನನ್ನನ್ನು ಬಂಧಿಸಿದಾಗಿನಿಂದ, ನಾನು ಮತ್ತು ನನ್ನ ಸಹೋದರ ಸ್ಥಳೀಯ ಗೂಂಡಾಗಳು ಮತ್ತು ಬಿಜೆಪಿಯ ಅಂಗಸಂಸ್ಥೆಗಳಿಂದ ನಿರಂತರ ಕಿರುಕುಳ ಮತ್ತು ಹಿಂಸಾಚಾರವನ್ನು ಎದುರಿಸುತ್ತಿದ್ದೇವೆ. ನನ್ನನ್ನು ರಾಷ್ಟ್ರವಿರೋಧಿ ಎಂಬ ಹೊಸ ಗುರುತಿನಿಂದ ಬಿಂಬಿಸಲಾಗುತ್ತಿದೆ. ಜೈಲಿನಿಂದ ಬಿಡುಗಡೆ ಬಳಿಕ ಎರಡು ವರ್ಷಗಳಲ್ಲಿ 3 ದಿನಗಳಿಗಿಂತ ಹೆಚ್ಚು ಕಾಲ ನಾನು ಮನೆಗೆ ಬಂದಿಲ್ಲ. ಏಕೆಂದರೆ ಇಲ್ಲಿನ ಕೆಲವು ಗೂಂಡಾಗಳು ನಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ನಾನು ಜೈಲಿನಿಂದ ಬಿಡುಗಡೆಯಾದ ಸ್ವಲ್ಪ ದಿನಗಳಲ್ಲೇ ಗುಂಪೊಂದು ನನ್ನ ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಪೊಲೀಸ್‌ ದೂರು ಕೊಟ್ಟಿದ್ದು, ಲಘು ಸೆಕ್ಸನ್‌ಗಳಡಿಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ನನಗೆ ಮನೆ ಬಿಟ್ಟು ದೂರ ತೆರಳುವಂತೆ ಪೊಲೀಸರು ನಿರಂತರವಾಗಿ ಹೇಳುತ್ತಲೇ ಬಂದಿದ್ದಾರೆ. ಇಂದೋರ್‌ನಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಕೈಗಾರಿಕಾ ಪ್ರದೇಶದಲ್ಲಿ ಪಾಲಿಥಿನ್ ಚೀಲಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ. ನನ್ನ ಪ್ರಕರಣದ ಬಗ್ಗೆ ತಿಳಿದ ನಂತರ ಇಂದೋರ್‌ನ ಕಂಪನಿಯಿಂದ ನನ್ನನ್ನು ವಜಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಪ್ರಚಾರ ಗಿಟ್ಟಿಸಲು ಹಾಸ್ಯನಟ ನಳಿನ್ ಯಾದವ್ ರೂಪಿಸಿದ ತಂತ್ರ ಎಂದು ಹೇಳಿದೆ.

ಇದನ್ನು ಓದಿ: ವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...