Homeಮುಖಪುಟಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

- Advertisement -
- Advertisement -

ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಯ ಕಾರ್ಯಕರ್ತರು ತಮಗೆ ನಿರಂತರವಾಗಿ ಕಿರುಕುಳವನ್ನು ನೀಡುತ್ತಿದ್ದಾರೆ ಎಂದು ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ನಳಿನ್ ಯಾದವ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

2021ರ ಜನವರಿ 1ರಂದು, ಇಂದೋರ್‌ನ ಕೆಫೆಯೊಂದರಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಾಮಿಡಿಯನ್‌  ಮುನವ್ವರ್‌ ಫಾರೂಕಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ದೂರಿನ ಮೇರೆಗೆ ಸ್ಟ್ಯಾಂಡ್-ಅಪ್ ಹಾಸ್ಯನಟರಾದ ನಳಿನ್ ಯಾದವ್ ಮತ್ತು ಮುನವ್ವರ್‌ ಫಾರುಕಿ ಸೇರಿ ಇತರ ಇಬ್ಬರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಪಡೆದು ಮುನವ್ವರ್‌ ಫರುಕಿ ಫೆಬ್ರವರಿ 2021ರಲ್ಲಿ ಇಂದೋರ್ ಕೇಂದ್ರ ಕಾರಾಗೃಹದಿಂದ ಹೊರ ಬಂದಿದ್ದರು. ಕೆಲವು ದಿನಗಳ ನಂತರ, ಫೆಬ್ರವರಿ 26ರಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಮಧ್ಯಂತರ ಜಾಮೀನಿನ ಮೇಲೆ ನಳಿನ್ ಯಾದವ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಪ್ರಕರಣ ದಾಖಲು ಮತ್ತು ಜಾಮೀನಿನ ಬಳಿಕ ನಮಗೆ ಕಷ್ಟದ ದಿನಗಳು ಆರಂಭವಾಗಿದೆ ಎಂದು ಮಧ್ಯಪ್ರದೇಶ ಮೂಲದ ನಳಿನ್‌ ಯಾದವ್‌ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ತನಗೆ ಮತ್ತು ತನ್ನ ಕಿರಿಯ ಸಹೋದರನಿಗೆ ಆಡಳಿತ ಪಕ್ಷದ ಅಂಗಸಂಸ್ಥೆಗಳು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಮೇ 26 ರಂದು ಜನನಿಬಿಡ ರಸ್ತೆಯಲ್ಲಿ ಗುಂಪೊಂದು ತನ್ನ ಮತ್ತು ಸಹೋದರನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಳಿನ್ ಯಾದವ್, ಜೈಲಿನಿಂದ ಬಿಡುಗಡೆ ಬಳಿಕ ನಮ್ಮ ಮೇಲೆ ದೌರ್ಜನ್ಯ ಪ್ರಾರಂಭವಾಗಿದೆ. ಇದು ಈಗಲೂ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಮನೆಯನ್ನು ಬಲಾಯಿಸುವಂತೆ ಪೊಲೀಸರು ನನಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ನಳಿನ್‌ ಮಾತನಾಡುತ್ತಾ, ನನ್ನನ್ನು ಬಂಧಿಸಿದಾಗಿನಿಂದ, ನಾನು ಮತ್ತು ನನ್ನ ಸಹೋದರ ಸ್ಥಳೀಯ ಗೂಂಡಾಗಳು ಮತ್ತು ಬಿಜೆಪಿಯ ಅಂಗಸಂಸ್ಥೆಗಳಿಂದ ನಿರಂತರ ಕಿರುಕುಳ ಮತ್ತು ಹಿಂಸಾಚಾರವನ್ನು ಎದುರಿಸುತ್ತಿದ್ದೇವೆ. ನನ್ನನ್ನು ರಾಷ್ಟ್ರವಿರೋಧಿ ಎಂಬ ಹೊಸ ಗುರುತಿನಿಂದ ಬಿಂಬಿಸಲಾಗುತ್ತಿದೆ. ಜೈಲಿನಿಂದ ಬಿಡುಗಡೆ ಬಳಿಕ ಎರಡು ವರ್ಷಗಳಲ್ಲಿ 3 ದಿನಗಳಿಗಿಂತ ಹೆಚ್ಚು ಕಾಲ ನಾನು ಮನೆಗೆ ಬಂದಿಲ್ಲ. ಏಕೆಂದರೆ ಇಲ್ಲಿನ ಕೆಲವು ಗೂಂಡಾಗಳು ನಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ನಾನು ಜೈಲಿನಿಂದ ಬಿಡುಗಡೆಯಾದ ಸ್ವಲ್ಪ ದಿನಗಳಲ್ಲೇ ಗುಂಪೊಂದು ನನ್ನ ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಪೊಲೀಸ್‌ ದೂರು ಕೊಟ್ಟಿದ್ದು, ಲಘು ಸೆಕ್ಸನ್‌ಗಳಡಿಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ನನಗೆ ಮನೆ ಬಿಟ್ಟು ದೂರ ತೆರಳುವಂತೆ ಪೊಲೀಸರು ನಿರಂತರವಾಗಿ ಹೇಳುತ್ತಲೇ ಬಂದಿದ್ದಾರೆ. ಇಂದೋರ್‌ನಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಕೈಗಾರಿಕಾ ಪ್ರದೇಶದಲ್ಲಿ ಪಾಲಿಥಿನ್ ಚೀಲಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ. ನನ್ನ ಪ್ರಕರಣದ ಬಗ್ಗೆ ತಿಳಿದ ನಂತರ ಇಂದೋರ್‌ನ ಕಂಪನಿಯಿಂದ ನನ್ನನ್ನು ವಜಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಪ್ರಚಾರ ಗಿಟ್ಟಿಸಲು ಹಾಸ್ಯನಟ ನಳಿನ್ ಯಾದವ್ ರೂಪಿಸಿದ ತಂತ್ರ ಎಂದು ಹೇಳಿದೆ.

ಇದನ್ನು ಓದಿ: ವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...