Homeಮುಖಪುಟಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

- Advertisement -
- Advertisement -

ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಯ ಕಾರ್ಯಕರ್ತರು ತಮಗೆ ನಿರಂತರವಾಗಿ ಕಿರುಕುಳವನ್ನು ನೀಡುತ್ತಿದ್ದಾರೆ ಎಂದು ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ನಳಿನ್ ಯಾದವ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

2021ರ ಜನವರಿ 1ರಂದು, ಇಂದೋರ್‌ನ ಕೆಫೆಯೊಂದರಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಾಮಿಡಿಯನ್‌  ಮುನವ್ವರ್‌ ಫಾರೂಕಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ದೂರಿನ ಮೇರೆಗೆ ಸ್ಟ್ಯಾಂಡ್-ಅಪ್ ಹಾಸ್ಯನಟರಾದ ನಳಿನ್ ಯಾದವ್ ಮತ್ತು ಮುನವ್ವರ್‌ ಫಾರುಕಿ ಸೇರಿ ಇತರ ಇಬ್ಬರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಪಡೆದು ಮುನವ್ವರ್‌ ಫರುಕಿ ಫೆಬ್ರವರಿ 2021ರಲ್ಲಿ ಇಂದೋರ್ ಕೇಂದ್ರ ಕಾರಾಗೃಹದಿಂದ ಹೊರ ಬಂದಿದ್ದರು. ಕೆಲವು ದಿನಗಳ ನಂತರ, ಫೆಬ್ರವರಿ 26ರಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಮಧ್ಯಂತರ ಜಾಮೀನಿನ ಮೇಲೆ ನಳಿನ್ ಯಾದವ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಪ್ರಕರಣ ದಾಖಲು ಮತ್ತು ಜಾಮೀನಿನ ಬಳಿಕ ನಮಗೆ ಕಷ್ಟದ ದಿನಗಳು ಆರಂಭವಾಗಿದೆ ಎಂದು ಮಧ್ಯಪ್ರದೇಶ ಮೂಲದ ನಳಿನ್‌ ಯಾದವ್‌ ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ತನಗೆ ಮತ್ತು ತನ್ನ ಕಿರಿಯ ಸಹೋದರನಿಗೆ ಆಡಳಿತ ಪಕ್ಷದ ಅಂಗಸಂಸ್ಥೆಗಳು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಮೇ 26 ರಂದು ಜನನಿಬಿಡ ರಸ್ತೆಯಲ್ಲಿ ಗುಂಪೊಂದು ತನ್ನ ಮತ್ತು ಸಹೋದರನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಳಿನ್ ಯಾದವ್, ಜೈಲಿನಿಂದ ಬಿಡುಗಡೆ ಬಳಿಕ ನಮ್ಮ ಮೇಲೆ ದೌರ್ಜನ್ಯ ಪ್ರಾರಂಭವಾಗಿದೆ. ಇದು ಈಗಲೂ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಮನೆಯನ್ನು ಬಲಾಯಿಸುವಂತೆ ಪೊಲೀಸರು ನನಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ನಳಿನ್‌ ಮಾತನಾಡುತ್ತಾ, ನನ್ನನ್ನು ಬಂಧಿಸಿದಾಗಿನಿಂದ, ನಾನು ಮತ್ತು ನನ್ನ ಸಹೋದರ ಸ್ಥಳೀಯ ಗೂಂಡಾಗಳು ಮತ್ತು ಬಿಜೆಪಿಯ ಅಂಗಸಂಸ್ಥೆಗಳಿಂದ ನಿರಂತರ ಕಿರುಕುಳ ಮತ್ತು ಹಿಂಸಾಚಾರವನ್ನು ಎದುರಿಸುತ್ತಿದ್ದೇವೆ. ನನ್ನನ್ನು ರಾಷ್ಟ್ರವಿರೋಧಿ ಎಂಬ ಹೊಸ ಗುರುತಿನಿಂದ ಬಿಂಬಿಸಲಾಗುತ್ತಿದೆ. ಜೈಲಿನಿಂದ ಬಿಡುಗಡೆ ಬಳಿಕ ಎರಡು ವರ್ಷಗಳಲ್ಲಿ 3 ದಿನಗಳಿಗಿಂತ ಹೆಚ್ಚು ಕಾಲ ನಾನು ಮನೆಗೆ ಬಂದಿಲ್ಲ. ಏಕೆಂದರೆ ಇಲ್ಲಿನ ಕೆಲವು ಗೂಂಡಾಗಳು ನಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ನಾನು ಜೈಲಿನಿಂದ ಬಿಡುಗಡೆಯಾದ ಸ್ವಲ್ಪ ದಿನಗಳಲ್ಲೇ ಗುಂಪೊಂದು ನನ್ನ ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಪೊಲೀಸ್‌ ದೂರು ಕೊಟ್ಟಿದ್ದು, ಲಘು ಸೆಕ್ಸನ್‌ಗಳಡಿಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ನನಗೆ ಮನೆ ಬಿಟ್ಟು ದೂರ ತೆರಳುವಂತೆ ಪೊಲೀಸರು ನಿರಂತರವಾಗಿ ಹೇಳುತ್ತಲೇ ಬಂದಿದ್ದಾರೆ. ಇಂದೋರ್‌ನಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಕೈಗಾರಿಕಾ ಪ್ರದೇಶದಲ್ಲಿ ಪಾಲಿಥಿನ್ ಚೀಲಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ. ನನ್ನ ಪ್ರಕರಣದ ಬಗ್ಗೆ ತಿಳಿದ ನಂತರ ಇಂದೋರ್‌ನ ಕಂಪನಿಯಿಂದ ನನ್ನನ್ನು ವಜಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಪ್ರಚಾರ ಗಿಟ್ಟಿಸಲು ಹಾಸ್ಯನಟ ನಳಿನ್ ಯಾದವ್ ರೂಪಿಸಿದ ತಂತ್ರ ಎಂದು ಹೇಳಿದೆ.

ಇದನ್ನು ಓದಿ: ವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...