Homeಮುಖಪುಟಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದ ಹಾಸ್ಯನಟ ಮತ್ತು ರಾಜಕಾರಣಿ ಶ್ಯಾಮ್ ರಂಗೀಲಾ ತಾನು ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿದ್ದೇನೆ, ಅಧಿಕಾರಿಗಳು ನಾಮಪತ್ರದ ಅರ್ಜಿಯನ್ನು ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾಮಪತ್ರದ ಅರ್ಜಿ ವಿಚಾರದಲ್ಲಿ ಅಧಿಕಾರಿಗಳು ತೊಂದರೆ ನೀಡುತ್ತಿರುವುದರಿಂದ ನನಗೆ ತೊಂದರೆಯಾಗುತ್ತಿದೆ. ಈ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರಣಾಸಿಯಲ್ಲಿ ನಾಮಪತ್ರದ ಕುರಿತು ಅರ್ಜಿಗಳನ್ನು ಪಡೆಯುವ ಪ್ರಕ್ರಿಯೆಯು ತುಂಬಾ ಜಟಿಲವಾಗಿದೆ, ಫಾರ್ಮ್ ಪಡೆಯುವುದು ತುಂಬಾ ಕಷ್ಟಕರವಾಗಿದೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ನಂತರ, ಚುನಾವಣಾ ಕಚೇರಿಯು ನೀವು ಮೊದಲು 10 ಪ್ರಸ್ತಾವನೆದಾರರ ಸಹಿ ಸೇರಿದಂತೆ ಆಧಾರ್ ಕಾರ್ಡ್‌ಗಳ ನಕಲು ಮತ್ತು ಅವರ ಫೋನ್ ಸಂಖ್ಯೆಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ, ಆಗ ಮಾತ್ರ ನೀವು ಅರ್ಜಿಗಾಗಿ ಖಜಾನೆ ಚಲನ್ ಫಾರ್ಮ್‌ನ್ನು ಪಡೆಯುತ್ತೀರಿ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಶ್ಯಾಮ್ ರಂಗೀಲಾ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಈ ನಿಬಂಧನೆಯು ಚುನಾವಣಾ ಆಯೋಗದ ನಿಯಮಗಳಿಗೆ ಅನುಸಾರವಾಗಿಲ್ಲ. ಈ ಬಗ್ಗೆ ವಾರಣಾಸಿ ಜಿಲ್ಲಾಡಳಿತಕ್ಕೆ ಸರಿಯಾದ ನಿರ್ದೇಶನಗಳನ್ನು ನೀಡಬೇಕು, ಆ ಮೂಲಕ ಈ ದೇಶದ ಪ್ರಜಾತಂತ್ರದ ಕುರಿತು ನಮಗಿರುವ ವಿಶ್ವಾಸವನ್ನು ಬಲಪಡಿಸಬೇಕು ಎಂದು ಗೌರವಾನ್ವಿತ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಂಗೀಲಾ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ, ನಾಮಪತ್ರವನ್ನು ಪಡೆಯುವ ಸಂದರ್ಭದಲ್ಲಿ ಎದುರಿಸಿದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ ಮತ್ತು ಮೇ 13ರ ಸೋಮವಾರ ಮತ್ತೆ ನಾಮಪತ್ರದ ಅರ್ಜಿಯನ್ನು ಪಡೆಯಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ನಾಲ್ಕು ದಿನಗಳಾಗಿವೆ. ರಂಗೀಲಾ ಅವರಿಗೆ ನಾಮಪತ್ರ ಸಲ್ಲಿಸಲು ಮೇ 14ರವರೆಗೆ ಕಾಲಾವಕಾಶವಿದೆ. ಪ್ರಧಾನಿ ಮೋದಿ ಹೊರತುಪಡಿಸಿ ಕಾಂಗ್ರೆಸ್-ಎಸ್‌ಪಿ ಮೈತ್ರಿಕೂಟದ ಇಂಡಿಯಾ ಮೈತ್ರಿಕೂಟದಿಂದ ಅಜಯ್ ರೈ ಮತ್ತು ಬಿಎಸ್‌ಪಿಯ ಅತಹರ್ ಜಮಾಲ್ ಲಾರಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಾರಣಾಸಿಯಲ್ಲಿ ಜೂ.1ರಂದು 7ನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನು ಓದಿ: ಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...