Homeಮುಖಪುಟವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕಾರ

ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕಾರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರಕ್ಕೆ ಅಗತ್ಯವಿದ್ದ ಅಪಿಢವಿಟ್ ಸಲ್ಲಿಸಲು ರಂಗೀಲಾ ವಿಫಲರಾಗಿದ್ದರಿಂದ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಸಮಿತಿಯ ವೆಬ್‌ಸೈಟ್ ಪ್ರಕಾರ, 55 ಅಭ್ಯರ್ಥಿಗಳ ಪೈಕಿ 36 ಅಭ್ಯರ್ಥಿಗಳ ಫಾರ್ಮ್‌ಗಳನ್ನು ತಿರಸ್ಕರಿಸಲಾಗಿದೆ. ಪಿಎಂ ಮೋದಿ ಮತ್ತು ಕಾಂಗ್ರೆಸ್‌ನ ಅಜಯ್ ರೈ ಸೇರಿದಂತೆ 15 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ಸ್ವೀಕರಿಸಲಾಗಿದೆ.

ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಶ್ಯಾಮ್ ರಂಗೀಲಾ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಇದಕ್ಕೆ ಮೊದಲು ನನಗೆ ನಾಮಪತ್ರ ಸಲ್ಲಿಸದಂತೆ ತಡೆಯಲಾಗುತ್ತಿದೆ. ಅಧಿಕಾರಿಗಳು ನಾಮಪತ್ರ ಸಲ್ಲಿಸಲು ಅರ್ಜಿ ಫಾರಂ ಕೊಡುತ್ತಿಲ್ಲ ಎಂದು ಹಾಸ್ಯನಟ ಶ್ಯಾಮ್ ರಂಗೀಲಾ ಆರೋಪಿಸಿದ್ದರು. ಕೊನೆಗೆ ಮೇ.14ರಂದು ಶ್ಯಾಮ್ ರಂಗೀಲಾ ನಾಮಪತ್ರ ಸಲ್ಲಿಸಿದ್ದರು.

ಶ್ಯಾಮ್ ರಂಗೀಲಾ ಮೇ.10ರಿಂದ ನಾಮಪತ್ರ ಸಲ್ಲಿಸಲು ಪ್ರಯತ್ನಿಸುತ್ತಿದ್ದರೂ, ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಿದ ದಿನ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ರಂಗೀಲಾ ಸುದ್ದಿಗಾರರಿಗೆ ತಿಳಿಸಿದ್ದರು.

ಒಂದು ಕಾಲದಲ್ಲಿ ಪ್ರಧಾನಿ ಮೋದಿಯ ಅನುಯಾಯಿಯಾಗಿದ್ದ ರಂಗೀಲಾ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ, ಅದಕ್ಕಾಗಿಯೇ ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದರು. 2014ರಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಅವರ ಅನುಯಾಯಿಯಾಗಿದ್ದೆ. ನಾನು ಪ್ರಧಾನಿಯನ್ನು ಬೆಂಬಲಿಸುವ ಅನೇಕ ವೀಡಿಯೊಗಳನ್ನು ಹಂಚಿಕೊಂಡಿದ್ದೇನೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧವೂ ವೀಡಿಯೊಗಳನ್ನು ಹಂಚಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು.

ಕಾಮಿಡಿ ಶೋನಲ್ಲಿ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅನುಕರಿಸುವ ಮೂಲಕ ರಂಗೀಲಾ ಖ್ಯಾತಿ ಗಳಿಸಿದ್ದರು. ಮೂಲತಃ ರಾಜಸ್ಥಾನದ 29 ವರ್ಷದ ಶ್ಯಾಮ್ ರಂಗೀಲಾ 2022ರಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು.

ವಾರಣಾಸಿಯಲ್ಲಿ 7ನೇ ಮತ್ತು ಅಂತಿಮ ಹಂತದಲ್ಲಿ ಜೂ.1ರಂದು ಮತದಾನ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಇದನ್ನು ಓದಿ: ಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...