Homeಮುಖಪುಟಚೀನಾಕ್ಕೆ ಸಮಬಲವಾಗಿ ಸೈನ್ಯ ನಿಯೋಜನೆ: ಚೀನಾ ಆಕ್ರಮಣಶೀಲತೆಯ ಬಗ್ಗೆ ಇಂದು ಕಮಾಂಡರ್ಸ್ ಸಮಾವೇಶದಲ್ಲಿ ಚರ್ಚೆ

ಚೀನಾಕ್ಕೆ ಸಮಬಲವಾಗಿ ಸೈನ್ಯ ನಿಯೋಜನೆ: ಚೀನಾ ಆಕ್ರಮಣಶೀಲತೆಯ ಬಗ್ಗೆ ಇಂದು ಕಮಾಂಡರ್ಸ್ ಸಮಾವೇಶದಲ್ಲಿ ಚರ್ಚೆ

ವಾಸ್ತವಿಕ ನಿಯಂತ್ರಣ ರೇಖೆಯ ಲಡಾಖ್ ವಲಯದ ಪರಿಸ್ಥಿತಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪರಿಶೀಲಿಸಿದ್ದರು.

- Advertisement -
- Advertisement -

ಇಂದು (ಬುಧವಾರ) ಪ್ರಾರಂಭವಾಗುವ ಕಮಾಂಡರ್ಸ್ ಸಮಾವೇಶದಲ್ಲಿ ಚೀನಾದ ಆಕ್ರಮಣಶೀಲತೆಯ ಕುರಿತು ಚರ್ಚಿಸಲು ಸೇನಾ ಮುಖ್ಯಸ್ಥರು ಮುಂದಾಗಿದ್ದಾರೆ. ಕಮಾಂಡರ್ಸ್ ಸಮಾವೇಶದ ಅಧ್ಯಕ್ಷತೆಯನ್ನು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ವಹಿಸುತ್ತಿದ್ದಾರೆ.

ಸಭೆಯು ಮೂರು ದಿನ ನಡೆಯಲಿದ್ದು, ಸೇನೆಯ ಉನ್ನತ ಅಧಿಕಾರಿಗಳು ಇತರ ಅಂಶಗಳೊಂದಿಗೆ ಭದ್ರತಾ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಲಡಾಖ್‌ನಲ್ಲಿ ಚೀನಾವೂ ಗಡಿಯೊಳಗೆ ನುಸುಳುತ್ತಿರುವ ಕುರಿತು ಭಾರತದ ನಿಲುವುಗಳನ್ನು ಚರ್ಚಿಸುವ ಸಾಧ್ಯತೆಯಿದೆ.

ಚೀನಾದ ಸೈನ್ಯದ ಬಲಕ್ಕೆ ಸರಿಹೊಂದುವಂತೆ ಭಾರತೀಯ ಸೇನೆ ಕೂಡಾ ತನ್ನ ಸೈನ್ಯದ ಉಪಸ್ಥಿತಿಯನ್ನು ಹೆಚ್ಚಿಸುತ್ತಿರುವ ಸಮಯದಲ್ಲೇ ಸಭೆ ನಡೆಯುತ್ತಿದೆ. ಸೇನೆಯೂ ಲಡಾಖ್ ಸೆಕ್ಟರ್‌ನ ವಿವಿಧ ಸ್ಥಳಗಳಲ್ಲಿ ತನ್ನ 5,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಲೈನ್‌ ಆಫ್‌ ಕಂಟ್ರೋಲ್‌ನಲ್ಲಿ ನಿಯೋಜಿಸಿದೆ.

ಭಾರತೀಯ ಭೂಪ್ರದೇಶದ ಯಾವುದೇ ಬದಲಾವಣೆಗೆ ಅವಕಾಶ ನೀಡಬಾರದು ಹಾಗೂ ಚೀನಾದ ಸವಾಲನ್ನು “ಶಕ್ತಿ ಮತ್ತು ಸಂಯಮ” ದಿಂದ ಎದುರಿಸುವ ಉದ್ದೇಶದಿಂದ ಸೈನ್ಯದ ಚಲನೆಯನ್ನು ಮಾಡಲಾಗಿದೆ” ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿವೆ.

ಲೈನ್‌ ಆಫ್‌ ಕಂಟ್ರೋಲ್ ರೇಖೆಯ ಉದ್ದಕ್ಕೂ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಿದರು. ಇಲ್ಲಿ ಲಡಾಖ್‌ನ ಪರಿಸ್ಥಿತಿಯನ್ನು ನಿಭಾಯಿಸಲು ಸೈನ್ಯದ ಒಳಗಿನ ವಿಷಯಗಳು ಹಾಗೂ ಸಲಹೆಗಳ ಕುರಿತು ಜನರಲ್ ಬಿಪಿನ್ ರಾವತ್ ಪ್ರಧಾನಿ ಮೋದಿಗೆ ವಿವರಿಸಿದರು.

ಭಾರತೀಯ ಮತ್ತು ಚೀನಾದ ಸೈನಿಕರು ಲೈನ್‌ ಆಫ್‌ ಕಂಟ್ರೋಲ್ ರೇಖೆಯ ನಾಲ್ಕು ಸ್ಥಳಗಳಲ್ಲಿ ಮುಖಾಮುಖಿಯಾಗಿದ್ದರು. ಮೂರು ವಾರಗಳ ಹಿಂದೆ ಪಾಂಗೊಂಗ್ ಸರೋವರದ ಬಳಿ ಹಿಂಸಾತ್ಮಕ ಘರ್ಷಣೆ ಪ್ರಾರಂಭವಾಗಿತ್ತು.

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಮೂವರು ಸೇವಾ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಲಡಾಖ್ ವಲಯದ ಪರಿಸ್ಥಿತಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪರಿಶೀಲಿಸಿದ್ದರು.


ಓದಿ: ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...