Homeಮುಖಪುಟತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ

ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ

ರಾಜಾ ಅವರ ಹೇಳಿಕೆ ಪಳನಿಸ್ವಾಮಿ ಅವರ ವೈಯಕ್ತಿಕ ಜೀವನದ ಬಗ್ಗೆ ಅಲ್ಲ. ಅದು ರಾಜಕೀಯವಾಗಿ ಹೇಳಿದ್ದು ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ತಾಯಿ ವಿರುದ್ಧ ಲೋಕಸಭಾ ಸಂಸದ ಎ ರಾಜಾ ನೀಡಿರುವ ಅವಹೇಳನಕಾರಿ ಹೇಳಿಕೆ ತಮಿಳುನಾಡಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಎ.ರಾಜಾ ಹೇಳಿಕೆಯಿಂದ ನೊಂದಿರುವ ಸಿಎಂ ಪಳನಿಸ್ವಾಮಿ ಕಣ್ಣೀರು ಸುರಿಸಿರುವ ಘಟನೆ ನಡೆದಿದೆ.

ಸದ್ಯ ಕೇಂದ್ರ ಅಪರಾಧ ಶಾಖೆ ಪೊಲೀಸರು ಎ.ರಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಎಐಎಡಿಎಂಕೆ ವಕೀಲ ವಿಭಾಗದ ಜಂಟಿ ಕಾರ್ಯದರ್ಶಿ ತಿರುಮಾರನ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಚೆನ್ನೈನ ತಿರುವತ್ರಿಯೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾವನಾತ್ಮಕವಾಗಿ ಮಾತನಾಡಿರುವ ಪಳನಿಸ್ವಾಮಿ, ಡಿಎಂಕೆ ಅಧಿಕಾರಕ್ಕೆ ಬಂದರೇ ಮಹಿಳೆಯರ ಸುರಕ್ಷತೆಯ ಬಗ್ಗೆ ಯೋಚಿಸಿ ಎಂದಿದ್ದಾರೆ. ಭಾನುವಾರ ಎಐಎಡಿಎಂಕೆ ಮತ್ತು ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ರಾಜಾ ಅವರನ್ನು ಚುನಾವಣೆಯ ಪ್ರಚಾರದಿಂದ ತಡೆಯುವಂತೆ ಎಐಎಡಿಎಂಕೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿತ್ತು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ತಾಯಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದೆ. ಯಾರೇ ಮಹಿಳೆಯರನ್ನು ಅವಹೇಳನ ಮಾಡಿದರೂ ಅವರನ್ನು ದೇವರು ಶಿಕ್ಷಿಸುತ್ತಾನೆ. ನಾನು ಮುಖ್ಯಮಂತ್ರಿಯಾಗಿದ್ದರೂ, ಅವರು ನನ್ನ ತಾಯಿಯ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಾರೆ ಎಂದರೆ, ಅವರು ಅಧಿಕಾರಕ್ಕೆ ಬಂದರೆ ಡಿಎಂಕೆ ಆಡಳಿತದಲ್ಲಿ ಸಾಮಾನ್ಯ ಮಹಿಳೆಯರ ಸುರಕ್ಷತೆಯ ಬಗ್ಗೆ ಯೋಚಿಸಿ, ಅವರಿಗೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ” ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉದಯನಿಧಿ ಸ್ಟಾಲಿನ್ ಸ್ಪರ್ಧಿಸುತ್ತಿರುವ ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, ‘ಸ್ಟಾಲಿನ್ ಅವರು ಉತ್ತಮ ಸಂಬಂಧದಿಂದ, ನಾರ್ಮಲ್ ಡೆಲಿವರಿ ಮೂಲಕ ಜನಿಸಿದ್ದಾರೆ. ಆದರೆ, ಪಳನಿಸ್ವಾಮಿ ಜನಿಸಿದ್ದು ಅಕ್ರಮ ಸಂಬಂಧದಿಂದ ಮತ್ತು ಅದು ಅಕಾಲಿಕ ಜನನ’ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ರಾಜಾ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಮತ್ತು ಅವರು ಈ ಹೇಳಿಕೆಗಳನ್ನು ರಾಜಕೀಯ ಸನ್ನಿವೇಶದ ಬಳಕೆ ಮಾಡುತ್ತಿದ್ದಾರೆ. ರಾಜಾ ಅವರ ಹೇಳಿಕೆ ಪಳನಿಸ್ವಾಮಿ ಅವರ ವೈಯಕ್ತಿಕ ಜೀವನದ ಬಗ್ಗೆ ಅಲ್ಲ. ಅದು ರಾಜಕೀಯವಾಗಿ ಹೇಳಿದ್ದು ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಹೇಳಿದ್ದಾರೆ. ಜೊತೆಗೆ ತಮ್ಮ ಪಕ್ಷದ ಸದಸ್ಯರಿಗೆ ಪ್ರಚಾರದಲ್ಲಿ ಮತ್ತು ಭಾಷಣಗಳಲ್ಲಿ ಗೌರವಯುತವಾಗಿ ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...