Homeಕರ್ನಾಟಕ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

- Advertisement -
- Advertisement -

“ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ” ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹೇಳಿದ್ದನ್ನು ವಿರೋಧಿಸುವ ಭರದಲ್ಲಿ ಪತ್ರಕರ್ತ, ‘ಪಬ್ಲಿಕ್‌ ಟಿ.ವಿ.’ ಸಂಪಾದಕ ಎಚ್‌.ಆರ್‌.ರಂಗನಾಥ್‌ ಆಡಿರುವ ಮಾತುಗಳು ವಿವಾದ ಸೃಷ್ಟಿಸಿವೆ. ಸಾಯಿ ಪಲ್ಲವಿಯವರನ್ನು ಟೀಕಿಸುವ ಭರದಲ್ಲಿ ಮತ್ತೊಬ್ಬರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವಂತೆ ಮಾತನಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

“ಈ ಯಮ್ಮ ತುಂಬಾ ಫೇಮಸ್ಸಾ? ಬಾಯಿ ಮುಚ್ಕೊಂಡು ಫಿಲ್ಮ್‌ ಮಾಡೋಕೆ ಹೇಳಿ. ಕಾಮನ್‌ ಸೆನ್ಸ್‌ ಇದೆಯ ಆ ಯಮ್ಮನಿಗೆ” ಹೀಗೆ ರಂಗನಾಥ್‌ ಅವರು ನಾಲಗೆ ಹರಿಬಿಟ್ಟಿದ್ದು ಸಾಯಿಪಲ್ಲವಿಯವರ ಅಭಿಮಾನಿಗಳನ್ನು ಕೆರಳಿಸಿದೆ. ಹಲವು ಜನಪರ ಮನಸ್ಸುಗಳು ರಂಗನಾಥ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

 

“ಈ ರಂಗನಾಥನಿಗೆ ಯಾರಾದ್ರೂ ಹೇಳ್ರಪ್ಪಾ. ಸಾಯಿಪಲ್ಲವಿ ಎಂಬ ನಟಿ ಸಿನಿಮಾ ಕಲಾವಿದೆಯಾಗಿದ್ದುಕೊಂಡು ಸಾರ್ವಜನಿಕ ಬದುಕು ಮತ್ತು ಪ್ರಸಕ್ತ ರಾಜಕಾರಣ ಕುರಿತಂತೆ ಪ್ರಬುದ್ಧತೆ ಹೊಂದಿದ್ದಾಳೆ. ಜೊತೆಗೆ ಆಕೆಯ ಮಾತುಗಳು ಖಚಿತ ನಿಲುವಿನಿಂದ ಕೂಡಿವೆ. ನಿನ್ನ ಹಾಗೆ ಹುಚ್ಚುತನದಿಂದ ಕೂಡಿಲ್ಲ. ಆಕೆ ತನ್ನ ವೃತ್ತಿಯ ಜೊತೆಗೆ ಕಾಪಾಡಿಕೊಂಡು ಬಂದಿರುವ ಘನತೆಯನ್ನು ನೀನು ಪತ್ರಿಕೋದ್ಯಮದ ಜೊತೆ ಕಾಪಾಡಿಕೊಂಡು ಬಂದಿದ್ದಿಯಾ ಎಂದು ಆತ್ಮ ವಿಮರ್ಶೆ ಮಾಡಿಕೊ ತಮ್ಮಾ” ಎಂದು ಹಿರಿಯ ಲೇಖಕರಾದ ಜಗದೀಶ್ ಕೊಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

“ಕ್ರೈಂ ರಿಪೋರ್ಟರ್ ಹೆಚ್. ಆರ್. ರಂಗನಾಥರವರೇ, ನೀವು ಪತ್ರಿಕೋದ್ಯಮಕ್ಕೆ ನ್ಯಾಯ ಒದಗಿಸಿದ್ದೀರಾ? ಸಾಯಿ ಪಲ್ಲವಿ ತನ್ನ ಅಭಿಪ್ರಾಯವನ್ನು ಹೇಳುವ ಹಕ್ಕನ್ನು ಹೊಂದಿಲ್ಲವೇ? ನೋಟಿನಲ್ಲಿ ಚಿಪ್ಪಿದೆ ಅಂತ ಒಂದು ಗಂಟೆ ಕಾರ್ಯಕ್ರಮ ಮಾಡಿದಾಗಲೇ ನೀವು ಪತ್ರಿಕೋದ್ಯಮದಿಂದ ನಿರ್ಗಮಿಸಬೇಕಿತ್ತು. ಆದರೂ ತಾನು ಮಾಡಿದ್ದೇ ಸರಿ ಅಂತ ಡಿಕ್ಟೇಟರ್‌‌ನಂತೆ ನಡೆದುಕೊಳ್ಳುತ್ತಿದ್ದೀರಿ” ಎಂದು ರಾಜು ಮೌರ್ಯ ದಾವಣಗೆರೆ ಅಭಿಪ್ರಾಯಪಟ್ಟಿದ್ದಾರೆ.

“ಆವೊಮ್ಮುಂಗೆ ನೆಟ್ಟಗೆ ಸಿನಿಮಾ ಮಾಡ್ಕಂಡ್ ಇರಕ್ಕೇಳಿ, ಈಡಿಯಾಟಿಕ್ ಸ್ಟೇಟ್ ಮೆಂಟ್ ಅದು. ಈಡಿಯಾಟಿಕ್ ಕಂಪೇರಿಷನ್, ಕಾಶ್ಮೀರಿ ಪಂಡಿತರು ಯಾವನ್ನೋ ಸಾಯ್ಸಕ್ಕೆ ಬಂದೂಕು ತಗೊಂಡು ಹೋಗಿರಲಿಲ್ಲ… ಬ್ಲಾ ಬ್ಲಾ ಬ್ಲಾ.. ಇದು ಪಬ್ಲಿಕ್ ಟಿವಿ ರಂಗನಾಥ್ ಆಡಿದ ಈಡಿಯಾಟಿಕ್ ಮಾತುಗಳು. ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದ ಗುಂಪಿನಿಂದ ಸಾಯಿಸಲ್ಪಟ್ಟ ಬಡ ಮುಸ್ಲಿಮನೂ ಯಾರಿಗೂ ಬಂದೂಕು ತಗೊಂಡು ಹೋಗಿ ಸಾಯಿಸಿರಲಿಲ್ಲ ಎಂಬ ಕಾಮನ್ ಸೆನ್ಸ್ ಇಲ್ಲವೇ ಈ ವ್ಯಕ್ತಿಗೆ? ಪತ್ರಕರ್ತ ಅನಿಸಿಕೊಂಡಿದ್ದಕ್ಕಾದರೂ ಒಂಚೂರು ವಿವೇಕದಿಂದ ಮಾತನಾಡಬಾರದೇ? ಅಸಹ್ಯ. ಇಷ್ಟೆಲ್ಲ ಆತ್ಮವಂಚನೆ ಮಾಡಿಕೊಂಡು ಬದುಕ್ತೀರಲ್ಲ, ತಿಂದಿದ್ದು ಮೈಗೆ ಹಿಡಿಯುತ್ತಾ ನಿಜವಾಗ್ಲೂ?” ಎಂದು ಬರಹಗಾರ ಎಸ್‌.ಸಿ.ದಿನೇಶ್‌ ಕುಮಾರ್‌ ಪ್ರಶ್ನಿಸಿದ್ದಾರೆ.

“ಅಂತರ್ಜಾಲದಲ್ಲಿ ಬಹುಶಃ ಗರಿಷ್ಠ ಸಂಚಾರ ಮಾಡಿದ ವೀಡಿಯೋಗಳಲ್ಲಿ ಈ ಐತಿಹಾಸಿಕ ವೀಡಿಯೋ ಕೂಡಾ ಒಂದು. ಪತ್ರಕರ್ತ/ಸಂಪಾದಕ ಎಂದು ಕರೆಸಿಕೊಳ್ಳುವ ವ್ಯಕ್ತಿಯೊಬ್ಬನ ಬುದ್ಧಿಮತ್ತೆಯ ಮತ್ತು ಜರ್ನಲಿಸಂನ ಮೂಲ ತತ್ವಕ್ಕೆ ಬದ್ಧತೆಯ ಅಭೂತಪೂರ್ವ ನಿದರ್ಶನ” ಎಂಬ ಸಾಲುಗಳೊಂದಿಗೆ ಚಿಂತಕ ಶ್ರೀನಿವಾಸ ಕಾರ್ಕಳ ಅವರು ಹಳೆಯ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

“ಈ ಡಿಕ್ಟೇಟರಿಸಂ ಪತ್ರಕರ್ತರಿಗೆ, ‘ಕಾಮನ್‌ಸೆನ್ಸ್’ ಪಾಠ ಮಾಡೋರು ಯಾರೂ ಇಲ್ವಾ. ಒಬ್ಬ ನಟಿ ಮಾನವೀಯತೆಯ ಬಗ್ಗೆ ಮಾತನಾಡಲೇಬಾರದಾ? ಆ ನಟಿ ಮಾನವೀಯತೆಯ ಬಗ್ಗೆ ಮಾತನಾಡಿದರೆ ಇವರಿಗ್ಯಾಕೆ ಉರಿ? ಇವ್ರೂ ಸುದ್ದಿ ಏನಿದೆಯೋ ಅದನ್ನು ಹೇಳೋದಷ್ಟೇ ಇವರ ಕೆಲಸ ಅಲ್ವಾ, ಯಾರು ಏನು ಮಾತನಾಡಬೇಕು, ಏನು ಕೆಲಸ ಮಾಡಬೇಕು ಅಂತ ಆಜ್ಞೆ ಮಾಡೋ ಹಕ್ಕು ಇವರಿಗೆ ಯಾರು ಕೊಟ್ಟಿದ್ದು? ಈಡಿಯಾಟಿಕಲೀ ಟಾಕಿಂಗ್ ನಾನ್‌ಸೆನ್ಸ್ ಇನ್ ದ ನೇಮ್ ಆಫ್ ಜರ್ನಲಿಸಂ” ಎಂದು ನಿರ್ದೇಶಕ ಮಂಸೋರೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಸುವರ್ಣ ನ್ಯೂಸ್‌ನಿಂದಲೂ ಆದೇಶ

ಪಬ್ಲಿಕ್ ಟಿ.ವಿ.ಯಷ್ಟೇ ಅಲ್ಲದೇ ಸುವರ್ಣ ಟಿ.ವಿ. ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುವ ರೀತಿ ಪೋಸ್ಟ್ ಮಾಡಿದೆ. “ಕೆಲವೊಮ್ಮೆ ಈ ನಟ, ನಟಿಯರು ಮೌನವಾಗಿದ್ದರೆ ಒಳ್ಳೆಯದು. ಆದರೆ ನಾಲಗೆ ಹರಿಯಬಿಟ್ಟು ಟ್ರೋಲ್‌ ಆಗುತ್ತಾರೆ” ಎಂದು ಫೇಸ್‌ಬುಕ್‌ ಪೋಸ್ಟ್‌ ಹಾಕಿರುವ ಸುವರ್ಣ ನ್ಯೂಸ್‌ ಚಾನೆಲ್‌ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

“ಯಾರು ಬಾಯಿ ಬಿಡಬೇಕು, ಯಾರು ಬಾಯಿ ಮುಚ್ಚಿಕೊಳ್ಳಬೇಕು” ಎಂದು ಸುವರ್ಣ ನ್ಯೂಸ್ ಆದೇಶ ಹೊರಡಿಸುತ್ತದೆ” ಎಂದು ವಿನಯ್‌ ಕಸ್ವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ದೇಶದ ಪ್ರತಿಯೊಬ್ಬರಿಗೂ ತನ್ನ ಭಾವನೆಗಳನ್ನ ವ್ಯಕ್ತಪಡಿಸೋಕೆ ದೇಶದ ಸಂವಿಧಾನ ಅಭಿವ್ಯಕ್ತ ಸ್ವಾತಂತ್ರ ದ ಹಕ್ಕು ಪ್ರದಾನಿಸಿದೆ, ಅವರ ಸ್ವಾತಂತ್ರ್ಯಕ್ಕೆ ಅಡ್ಡಪಡಿಸಲು ಇವನಾರು?

  2. ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿ ಬೇಕೋ ಅಲ್ಲಿ ಮಾತ್ರ ಉಪಯೋಗಿಸಲಾಗುತ್ತಿದೆ…!!!

  3. What is the problem for you she expressed her view and given in democracy. What you tell in the news we6listen and no body argue for you what a logic sir

  4. Like how Sai pallavi has given her views, Mr.Ranganath has given his views on that if you look at that angle.Comibg to comparison what she made is unacceptable if you r a real hindu.

  5. Sai pallavi has talked about great India. She was right. This ranganath is a bastard. He and his takes money from politics party. Telling wrong statement. He is useless person. He talks likes supreme court judge. He doesn’t know anything. He talks only support ing BJP. He can his name BJP tv

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....