Homeಕರ್ನಾಟಕ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

- Advertisement -
- Advertisement -

“ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ” ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹೇಳಿದ್ದನ್ನು ವಿರೋಧಿಸುವ ಭರದಲ್ಲಿ ಪತ್ರಕರ್ತ, ‘ಪಬ್ಲಿಕ್‌ ಟಿ.ವಿ.’ ಸಂಪಾದಕ ಎಚ್‌.ಆರ್‌.ರಂಗನಾಥ್‌ ಆಡಿರುವ ಮಾತುಗಳು ವಿವಾದ ಸೃಷ್ಟಿಸಿವೆ. ಸಾಯಿ ಪಲ್ಲವಿಯವರನ್ನು ಟೀಕಿಸುವ ಭರದಲ್ಲಿ ಮತ್ತೊಬ್ಬರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವಂತೆ ಮಾತನಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

“ಈ ಯಮ್ಮ ತುಂಬಾ ಫೇಮಸ್ಸಾ? ಬಾಯಿ ಮುಚ್ಕೊಂಡು ಫಿಲ್ಮ್‌ ಮಾಡೋಕೆ ಹೇಳಿ. ಕಾಮನ್‌ ಸೆನ್ಸ್‌ ಇದೆಯ ಆ ಯಮ್ಮನಿಗೆ” ಹೀಗೆ ರಂಗನಾಥ್‌ ಅವರು ನಾಲಗೆ ಹರಿಬಿಟ್ಟಿದ್ದು ಸಾಯಿಪಲ್ಲವಿಯವರ ಅಭಿಮಾನಿಗಳನ್ನು ಕೆರಳಿಸಿದೆ. ಹಲವು ಜನಪರ ಮನಸ್ಸುಗಳು ರಂಗನಾಥ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

 

“ಈ ರಂಗನಾಥನಿಗೆ ಯಾರಾದ್ರೂ ಹೇಳ್ರಪ್ಪಾ. ಸಾಯಿಪಲ್ಲವಿ ಎಂಬ ನಟಿ ಸಿನಿಮಾ ಕಲಾವಿದೆಯಾಗಿದ್ದುಕೊಂಡು ಸಾರ್ವಜನಿಕ ಬದುಕು ಮತ್ತು ಪ್ರಸಕ್ತ ರಾಜಕಾರಣ ಕುರಿತಂತೆ ಪ್ರಬುದ್ಧತೆ ಹೊಂದಿದ್ದಾಳೆ. ಜೊತೆಗೆ ಆಕೆಯ ಮಾತುಗಳು ಖಚಿತ ನಿಲುವಿನಿಂದ ಕೂಡಿವೆ. ನಿನ್ನ ಹಾಗೆ ಹುಚ್ಚುತನದಿಂದ ಕೂಡಿಲ್ಲ. ಆಕೆ ತನ್ನ ವೃತ್ತಿಯ ಜೊತೆಗೆ ಕಾಪಾಡಿಕೊಂಡು ಬಂದಿರುವ ಘನತೆಯನ್ನು ನೀನು ಪತ್ರಿಕೋದ್ಯಮದ ಜೊತೆ ಕಾಪಾಡಿಕೊಂಡು ಬಂದಿದ್ದಿಯಾ ಎಂದು ಆತ್ಮ ವಿಮರ್ಶೆ ಮಾಡಿಕೊ ತಮ್ಮಾ” ಎಂದು ಹಿರಿಯ ಲೇಖಕರಾದ ಜಗದೀಶ್ ಕೊಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

“ಕ್ರೈಂ ರಿಪೋರ್ಟರ್ ಹೆಚ್. ಆರ್. ರಂಗನಾಥರವರೇ, ನೀವು ಪತ್ರಿಕೋದ್ಯಮಕ್ಕೆ ನ್ಯಾಯ ಒದಗಿಸಿದ್ದೀರಾ? ಸಾಯಿ ಪಲ್ಲವಿ ತನ್ನ ಅಭಿಪ್ರಾಯವನ್ನು ಹೇಳುವ ಹಕ್ಕನ್ನು ಹೊಂದಿಲ್ಲವೇ? ನೋಟಿನಲ್ಲಿ ಚಿಪ್ಪಿದೆ ಅಂತ ಒಂದು ಗಂಟೆ ಕಾರ್ಯಕ್ರಮ ಮಾಡಿದಾಗಲೇ ನೀವು ಪತ್ರಿಕೋದ್ಯಮದಿಂದ ನಿರ್ಗಮಿಸಬೇಕಿತ್ತು. ಆದರೂ ತಾನು ಮಾಡಿದ್ದೇ ಸರಿ ಅಂತ ಡಿಕ್ಟೇಟರ್‌‌ನಂತೆ ನಡೆದುಕೊಳ್ಳುತ್ತಿದ್ದೀರಿ” ಎಂದು ರಾಜು ಮೌರ್ಯ ದಾವಣಗೆರೆ ಅಭಿಪ್ರಾಯಪಟ್ಟಿದ್ದಾರೆ.

“ಆವೊಮ್ಮುಂಗೆ ನೆಟ್ಟಗೆ ಸಿನಿಮಾ ಮಾಡ್ಕಂಡ್ ಇರಕ್ಕೇಳಿ, ಈಡಿಯಾಟಿಕ್ ಸ್ಟೇಟ್ ಮೆಂಟ್ ಅದು. ಈಡಿಯಾಟಿಕ್ ಕಂಪೇರಿಷನ್, ಕಾಶ್ಮೀರಿ ಪಂಡಿತರು ಯಾವನ್ನೋ ಸಾಯ್ಸಕ್ಕೆ ಬಂದೂಕು ತಗೊಂಡು ಹೋಗಿರಲಿಲ್ಲ… ಬ್ಲಾ ಬ್ಲಾ ಬ್ಲಾ.. ಇದು ಪಬ್ಲಿಕ್ ಟಿವಿ ರಂಗನಾಥ್ ಆಡಿದ ಈಡಿಯಾಟಿಕ್ ಮಾತುಗಳು. ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದ ಗುಂಪಿನಿಂದ ಸಾಯಿಸಲ್ಪಟ್ಟ ಬಡ ಮುಸ್ಲಿಮನೂ ಯಾರಿಗೂ ಬಂದೂಕು ತಗೊಂಡು ಹೋಗಿ ಸಾಯಿಸಿರಲಿಲ್ಲ ಎಂಬ ಕಾಮನ್ ಸೆನ್ಸ್ ಇಲ್ಲವೇ ಈ ವ್ಯಕ್ತಿಗೆ? ಪತ್ರಕರ್ತ ಅನಿಸಿಕೊಂಡಿದ್ದಕ್ಕಾದರೂ ಒಂಚೂರು ವಿವೇಕದಿಂದ ಮಾತನಾಡಬಾರದೇ? ಅಸಹ್ಯ. ಇಷ್ಟೆಲ್ಲ ಆತ್ಮವಂಚನೆ ಮಾಡಿಕೊಂಡು ಬದುಕ್ತೀರಲ್ಲ, ತಿಂದಿದ್ದು ಮೈಗೆ ಹಿಡಿಯುತ್ತಾ ನಿಜವಾಗ್ಲೂ?” ಎಂದು ಬರಹಗಾರ ಎಸ್‌.ಸಿ.ದಿನೇಶ್‌ ಕುಮಾರ್‌ ಪ್ರಶ್ನಿಸಿದ್ದಾರೆ.

“ಅಂತರ್ಜಾಲದಲ್ಲಿ ಬಹುಶಃ ಗರಿಷ್ಠ ಸಂಚಾರ ಮಾಡಿದ ವೀಡಿಯೋಗಳಲ್ಲಿ ಈ ಐತಿಹಾಸಿಕ ವೀಡಿಯೋ ಕೂಡಾ ಒಂದು. ಪತ್ರಕರ್ತ/ಸಂಪಾದಕ ಎಂದು ಕರೆಸಿಕೊಳ್ಳುವ ವ್ಯಕ್ತಿಯೊಬ್ಬನ ಬುದ್ಧಿಮತ್ತೆಯ ಮತ್ತು ಜರ್ನಲಿಸಂನ ಮೂಲ ತತ್ವಕ್ಕೆ ಬದ್ಧತೆಯ ಅಭೂತಪೂರ್ವ ನಿದರ್ಶನ” ಎಂಬ ಸಾಲುಗಳೊಂದಿಗೆ ಚಿಂತಕ ಶ್ರೀನಿವಾಸ ಕಾರ್ಕಳ ಅವರು ಹಳೆಯ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

“ಈ ಡಿಕ್ಟೇಟರಿಸಂ ಪತ್ರಕರ್ತರಿಗೆ, ‘ಕಾಮನ್‌ಸೆನ್ಸ್’ ಪಾಠ ಮಾಡೋರು ಯಾರೂ ಇಲ್ವಾ. ಒಬ್ಬ ನಟಿ ಮಾನವೀಯತೆಯ ಬಗ್ಗೆ ಮಾತನಾಡಲೇಬಾರದಾ? ಆ ನಟಿ ಮಾನವೀಯತೆಯ ಬಗ್ಗೆ ಮಾತನಾಡಿದರೆ ಇವರಿಗ್ಯಾಕೆ ಉರಿ? ಇವ್ರೂ ಸುದ್ದಿ ಏನಿದೆಯೋ ಅದನ್ನು ಹೇಳೋದಷ್ಟೇ ಇವರ ಕೆಲಸ ಅಲ್ವಾ, ಯಾರು ಏನು ಮಾತನಾಡಬೇಕು, ಏನು ಕೆಲಸ ಮಾಡಬೇಕು ಅಂತ ಆಜ್ಞೆ ಮಾಡೋ ಹಕ್ಕು ಇವರಿಗೆ ಯಾರು ಕೊಟ್ಟಿದ್ದು? ಈಡಿಯಾಟಿಕಲೀ ಟಾಕಿಂಗ್ ನಾನ್‌ಸೆನ್ಸ್ ಇನ್ ದ ನೇಮ್ ಆಫ್ ಜರ್ನಲಿಸಂ” ಎಂದು ನಿರ್ದೇಶಕ ಮಂಸೋರೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಸುವರ್ಣ ನ್ಯೂಸ್‌ನಿಂದಲೂ ಆದೇಶ

ಪಬ್ಲಿಕ್ ಟಿ.ವಿ.ಯಷ್ಟೇ ಅಲ್ಲದೇ ಸುವರ್ಣ ಟಿ.ವಿ. ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುವ ರೀತಿ ಪೋಸ್ಟ್ ಮಾಡಿದೆ. “ಕೆಲವೊಮ್ಮೆ ಈ ನಟ, ನಟಿಯರು ಮೌನವಾಗಿದ್ದರೆ ಒಳ್ಳೆಯದು. ಆದರೆ ನಾಲಗೆ ಹರಿಯಬಿಟ್ಟು ಟ್ರೋಲ್‌ ಆಗುತ್ತಾರೆ” ಎಂದು ಫೇಸ್‌ಬುಕ್‌ ಪೋಸ್ಟ್‌ ಹಾಕಿರುವ ಸುವರ್ಣ ನ್ಯೂಸ್‌ ಚಾನೆಲ್‌ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

“ಯಾರು ಬಾಯಿ ಬಿಡಬೇಕು, ಯಾರು ಬಾಯಿ ಮುಚ್ಚಿಕೊಳ್ಳಬೇಕು” ಎಂದು ಸುವರ್ಣ ನ್ಯೂಸ್ ಆದೇಶ ಹೊರಡಿಸುತ್ತದೆ” ಎಂದು ವಿನಯ್‌ ಕಸ್ವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ದೇಶದ ಪ್ರತಿಯೊಬ್ಬರಿಗೂ ತನ್ನ ಭಾವನೆಗಳನ್ನ ವ್ಯಕ್ತಪಡಿಸೋಕೆ ದೇಶದ ಸಂವಿಧಾನ ಅಭಿವ್ಯಕ್ತ ಸ್ವಾತಂತ್ರ ದ ಹಕ್ಕು ಪ್ರದಾನಿಸಿದೆ, ಅವರ ಸ್ವಾತಂತ್ರ್ಯಕ್ಕೆ ಅಡ್ಡಪಡಿಸಲು ಇವನಾರು?

  2. ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿ ಬೇಕೋ ಅಲ್ಲಿ ಮಾತ್ರ ಉಪಯೋಗಿಸಲಾಗುತ್ತಿದೆ…!!!

  3. What is the problem for you she expressed her view and given in democracy. What you tell in the news we6listen and no body argue for you what a logic sir

  4. Like how Sai pallavi has given her views, Mr.Ranganath has given his views on that if you look at that angle.Comibg to comparison what she made is unacceptable if you r a real hindu.

  5. Sai pallavi has talked about great India. She was right. This ranganath is a bastard. He and his takes money from politics party. Telling wrong statement. He is useless person. He talks likes supreme court judge. He doesn’t know anything. He talks only support ing BJP. He can his name BJP tv

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....