Homeಮುಖಪುಟ'ಸನಾತನ' ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

‘ಸನಾತನ’ ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಅವರಿಗೆ ಸಣ್ಣ ರಿಲೀಫ್ ನೀಡಿದೆ. ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ ಹೈಕೋರ್ಟ್, ಆದರೆ ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು.

ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ರಾಜಾ ಅವರು ಉದಯ್ ಹೇಳಿದ್ದನ್ನು ಅನುಮೋದಿಸಿದ್ದರು.

ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಅವರ ಹೇಳಿಕೆಯ ಮೇಲಿನ ಗಲಾಟೆ ನಂತರ ದೇಶದ ಹಲವಾರು ರಾಜ್ಯಗಳಲ್ಲಿ ಪೊಲೀಸ್ ದೂರು ದಾಖಲಾಯಿತು. ಹಲವು ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಬೇಕೆಂದು ಡಿಎಂಕೆ ನಾಯಕ ಈಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸುಪ್ರೀಂ ಕೋರ್ಟ್ ಕಟುವಾಗಿ ಪ್ರತಿಕ್ರಿಯಿಸಿದ್ದು, ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು ಅವರನ್ನು ತರಾಟೆಗೆ ತೆಗೆದುಕೊಂಡಿತು, ಸಚಿವರಾಗಿ ಅವರು ತಮ್ಮ ಮಾತಿನ ಪರಿಣಾಮಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು.

‘ನೀವು ಸಂವಿಧಾನದ ಆರ್ಟಿಕಲ್ 19(1)(ಎ) ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ನೀವು ಆರ್ಟಿಕಲ್ 25ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಏನು ಗೊತ್ತಾ? ನೀವು ಜನಸಾಮಾನ್ಯರಲ್ಲ, ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವು ತಿಳಿದುಕೊಳ್ಳಬೇಕು’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...