Homeಮುಖಪುಟವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

- Advertisement -
- Advertisement -

ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1ರಿಂದ ಅನ್ವಯವಾಗುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 91.5 ರಷ್ಟು ಕಡಿಮೆ ಮಾಡಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್-2022 ಮಂಡಿಸುವ ಕೆಲವೇ ನಿಮಿಷಗಳ ಮೊದಲು ಈ ಸುದ್ದಿ ಹೊರ ಬಿದ್ದಿತ್ತು. ವಾಣಿಜ್ಯ ಉದ್ದೇಶಗಳಿಗೆ ಬಳಸುವ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ರೂ. 91.5 ರಷ್ಟು ಕಡಿಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇಂದಿನಿಂದ ದೆಹಲಿಯಲ್ಲಿ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ದರ ರೂ. 1,907 ಸಬ್ಸಿಡಿ ರಹಿತ (14.2 ಕೆಜಿ) ಇಂಡಿಯನ್‌ ಸಿಲಿಂಡರ್‌ಗೆ ರೂ. 899.50 ಮತ್ತು ಕೋಲ್ಕತ್ತಾದಲ್ಲಿ ರೂ. 926 ದರವಿರಲಿದೆ. ಆದರೆ 5 ಕೆಜಿ, 10 ಕೆಜಿ ಕಾಂಪೋಸಿಟ್ ತೂಕದ ಇತರ ದೇಸಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಭಾರತದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ತಿಂಗಳು ಅಡುಗೆ ಅನಿಲದ ದರ ಪರಿಷ್ಕರಣೆ ಮಾಡಲಾಗುತ್ತದೆ. 2021ರ ಡಿಸೆಂಬರ್ 1ರಂದು 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ರೂ. 100 ನಷ್ಟು ಹೆಚ್ಚಿಸಲಾಯಿತು. ಆಗ ದೆಹಲಿಯಲ್ಲಿ ಸಿಲಿಂಡರ್‌ ಒಂದರ ಬೆಲೆ ರೂ. 2,101 ತಲುಪಿತ್ತು. 2012-13 ರ ನಂತರ 2ನೇ ಬಾರಿಗೆ ಏರಿಕೆ ಕಂಡ ಅತಿ ಹೆಚ್ಚಿನ ದರ ಇದಾಗಿದ್ದು, ರೂ. 2,200 ನಷ್ಟು ಏರಿಕೆಯಾಗಿತ್ತು. 2022ರ ಜನವರಿ 1ರ ವೇಳೆಗೆ ಪ್ರತಿ ಸಿಲಿಂಡರ್‌ನಲ್ಲಿ ರೂ. 102.50 ರಷ್ಟು ಕಡಿತಗೊಂಡಿತ್ತು. ಇದೀಗ ಬಜೆಟ್‌ ಮಂಡನೆಗೆ ಮುನ್ನ ಕಡಿತ ಮಾಡಲಾಗಿದೆ.

ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಬೆಲೆ ಇಳಿಕೆ ಮಾಡಿದೆ ಎನ್ನಲಾಗುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ಸಿಲಿಂಡರ್‌ ಬೆಲೆ ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅಕ್ಟೋಬರ್‌ ತಿಂಗಳಿನಿಂದಲೂ ಸಬ್ಸಿಡಿ ರಹಿತ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನವೆಂಬರ್‌ನಿಂದ ಪೆಟ್ರೋಲ್ ಮತ್ತು ಡೀಸೆಲ್ ದರವೂ ಸ್ಥಿರವಾಗಿದೆ.

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಫೆಬ್ರವರಿ 10ರಿಂದ ಮಾರ್ಚ್ 7ರವರೆಗೆ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿರಿ: ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Dear finance minister nice to hear LPG cylinders rate INR 91.50 reduced. But After election of Uttar Pradesh how many times increases so don’t make us pool we are very sorry to say please look into Middle class people day by day what ever saved they spending and becoming poor than before so don’t pool middle class of Indian citizens. Please take care about poor people health care why can’t make medical free with one health card like Aadhar card.

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...