Homeಕರ್ನಾಟಕಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಪಡೆದು ಕಾಮಗಾರಿ ಕೆಲಸ ನೀಡುತ್ತಾರೆ ಎಂದು ಈ ಹಿಂದೆ ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಇದೀಗ ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಲಂಚ ಪಡೆದಿರುವ ಬಗ್ಗೆ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಅವರು ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಿಪ್ಪಾರೆಡ್ಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, “ನಮ್ಮ ಜಿಲ್ಲೆಯಲ್ಲಿ ಯಾವತ್ತೂ ಲಂಚ, ಕಮೀಷನ್ ಪ್ರಸ್ತಾಪ ಇರಲಿಲ್ಲ. ಆದರೆ ಇದೀಗ ಕಾಮಗಾರಿಗೆ ಅಥವಾ ಸರ್ಕಾರದ ಯಾವುದೇ ಕೆಲಕ್ಕೆ 10% 4%, 2% ಲಂಚ ಪಡೆಯಲಾಗುತ್ತಿದೆ ಎಂದು ಕೆಲವು ದಾಖಲೆಗಲನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ನಗರದ ಪಿಡಬ್ಲ್ಯೂಡಿ ಕಟ್ಟಡ ಕಟ್ಟಿದ ಬಿಲ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಿಮಿಷದ ಆಡಿಯೋ ಬಿಡುಗಡೆ ಮಾಡಿದ್ದು, ಈ ಆಡಿಯೋದಲ್ಲಿ “ಆರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿ, ನಿನ್ನ ಹತ್ತಿರ ಮಾತಾಡಲ್ಲ, ಹಲವರ ಹತ್ರ ಅಡ್ಜಸ್ಟ್ ಆಗಿದ್ದೇನೆ. ನೀನು ಸಣ್ಣ ಅಥವಾ ದೊಡ್ಡ ಕಾಂಟ್ಯಾಕ್ಟರ್ ಇರಬಹುದು. ನಿಂಗೆ ಕೆಲಸ ನಿಲ್ಲಿಸು ಎಂದಿಲ್ಲ, ಇಂಜನಿಯರ್ ಗೆ ಹೇಳಿದ್ದೇನೆ” ಎನ್ನುವ ಮಾತುಗಳು ಇದರಲ್ಲಿದ್ದು, ಇದು ಪರೋಕ್ಷವಾಗಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಆಡಿಯೊ ಬಿಡುಗಡೆ ಬಳಿಕ ಮಾತನಾಡಿದ ಅವರು, “3 ವರ್ಷದಲ್ಲಿ ತಿಪ್ಪಾರೆಡ್ಡಿ ನನ್ನ ಬಳಿ 90 ಲಕ್ಷ ರೂ. ಹಣ ನಗದು ರೂಪದಲ್ಲಿ ಲಂಚ ಪಡೆದಿದ್ದಾರೆ. 1 ಕೋಟಿಗೆ 10 ಲಕ್ಷ ರೂ. ಲಂಚ ಪಡೆದಿದ್ದಾರೆ. 2019 ರಿಂದ ಇಲ್ಲಿಯವರೆಗೂ ಜಿಡಬ್ಲ್ಯೂಡಿ ಕಟ್ಟಡ ಕಾಮಗಾರಿ ಗೆ 12 ಲಕ್ಷ ರೂ., ಹಾಸ್ಪಿಟಲ್ ರಿಪೇರಿಗೆ 12.5 ಲಕ್ಷ ರೂ. ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಒಟ್ಟು 22 ಲಕ್ಷ ರೂ. ಹಣ ಲಂಚವಾಗಿ ಪಡೆದಿದ್ದಾರೆ. ಲೇಔಟ್‌ನ ಅಪ್ರೂವಲ್‌ಗೆ 18 ಲಕ್ಷ ರೂ., ಮೆಡಿಕಲ್ ಗ್ಯಾಸ್ ಸಂಬಂಧ 4 ಲಕ್ಷ ರೂ. ಲೇಔಟ್ ವಿಚಾರವಾಗಿ 4 ಲಕ್ಷ ರೂ., ಡಿ. 22ರಂದು ಆಸ್ಪತ್ರೆ ಕಾಮಗಾರಿ ಸಂಬಂಧ 20 ಲಕ್ಷ ರೂ. ಕ್ಲಬ್ ಗೆ ಕರೆಸಿಕೊಂಡು 13 ಲಕ್ಷ ಪಡೆದಿದ್ದಾರೆ. ಹೊಸ ಕಾಮಗಾರಿ ಕೆಲಸ ನೀಡಿ ಎಂದು ಅವರ ಮನೆಗೆ ಹೋದಾಗ 30 ಲಕ್ಷ ಹಣ ಅಡ್ವಾನ್ಸ್ ಆಗಿ ಕೇಳಿದ್ದರು ಎಂದು ಆರೋಪ ಮಾಡಿದರು.

“ಈ ಬಾರಿ ಕಾಂಟ್ಯಾಕ್ಟರ್ ಬಳಿ ಹಣ ಪಡೆದು ಚುನಾವಣೆ ಮಾಡುತ್ತೇನೆ ಎಂದು ತಿಪ್ಪಾರೆಡ್ಡಿ ಹೇಳಿದ್ದಾರೆ. ಇದೀಗ ಒಂದು ಆಡಿಯೋ ಬಿಡುಗಡೆ ಮಾಡಿದ್ದೇನೆ ಇನ್ನೂ 14-15 ಆಡಿಯೋ ಇವೆ. ಈ ಸಂಬಂಧ ನಾನು ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಕೇವಲ ಇವರೊಬ್ಬರೇ ಅಲ್ಲದೇ ಇನ್ನೂ 13 ಶಾಸಕರು ಹಾಗೂ ನಾಲ್ವರು ಸಚಿವರ ದಾಖಲೆಗಳು ನನ್ನ ಬಳಿ ಇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಮಂಜುನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...