Homeಕರ್ನಾಟಕಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಪಡೆದು ಕಾಮಗಾರಿ ಕೆಲಸ ನೀಡುತ್ತಾರೆ ಎಂದು ಈ ಹಿಂದೆ ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಇದೀಗ ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಲಂಚ ಪಡೆದಿರುವ ಬಗ್ಗೆ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಅವರು ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಿಪ್ಪಾರೆಡ್ಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, “ನಮ್ಮ ಜಿಲ್ಲೆಯಲ್ಲಿ ಯಾವತ್ತೂ ಲಂಚ, ಕಮೀಷನ್ ಪ್ರಸ್ತಾಪ ಇರಲಿಲ್ಲ. ಆದರೆ ಇದೀಗ ಕಾಮಗಾರಿಗೆ ಅಥವಾ ಸರ್ಕಾರದ ಯಾವುದೇ ಕೆಲಕ್ಕೆ 10% 4%, 2% ಲಂಚ ಪಡೆಯಲಾಗುತ್ತಿದೆ ಎಂದು ಕೆಲವು ದಾಖಲೆಗಲನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ನಗರದ ಪಿಡಬ್ಲ್ಯೂಡಿ ಕಟ್ಟಡ ಕಟ್ಟಿದ ಬಿಲ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಿಮಿಷದ ಆಡಿಯೋ ಬಿಡುಗಡೆ ಮಾಡಿದ್ದು, ಈ ಆಡಿಯೋದಲ್ಲಿ “ಆರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿ, ನಿನ್ನ ಹತ್ತಿರ ಮಾತಾಡಲ್ಲ, ಹಲವರ ಹತ್ರ ಅಡ್ಜಸ್ಟ್ ಆಗಿದ್ದೇನೆ. ನೀನು ಸಣ್ಣ ಅಥವಾ ದೊಡ್ಡ ಕಾಂಟ್ಯಾಕ್ಟರ್ ಇರಬಹುದು. ನಿಂಗೆ ಕೆಲಸ ನಿಲ್ಲಿಸು ಎಂದಿಲ್ಲ, ಇಂಜನಿಯರ್ ಗೆ ಹೇಳಿದ್ದೇನೆ” ಎನ್ನುವ ಮಾತುಗಳು ಇದರಲ್ಲಿದ್ದು, ಇದು ಪರೋಕ್ಷವಾಗಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಆಡಿಯೊ ಬಿಡುಗಡೆ ಬಳಿಕ ಮಾತನಾಡಿದ ಅವರು, “3 ವರ್ಷದಲ್ಲಿ ತಿಪ್ಪಾರೆಡ್ಡಿ ನನ್ನ ಬಳಿ 90 ಲಕ್ಷ ರೂ. ಹಣ ನಗದು ರೂಪದಲ್ಲಿ ಲಂಚ ಪಡೆದಿದ್ದಾರೆ. 1 ಕೋಟಿಗೆ 10 ಲಕ್ಷ ರೂ. ಲಂಚ ಪಡೆದಿದ್ದಾರೆ. 2019 ರಿಂದ ಇಲ್ಲಿಯವರೆಗೂ ಜಿಡಬ್ಲ್ಯೂಡಿ ಕಟ್ಟಡ ಕಾಮಗಾರಿ ಗೆ 12 ಲಕ್ಷ ರೂ., ಹಾಸ್ಪಿಟಲ್ ರಿಪೇರಿಗೆ 12.5 ಲಕ್ಷ ರೂ. ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಒಟ್ಟು 22 ಲಕ್ಷ ರೂ. ಹಣ ಲಂಚವಾಗಿ ಪಡೆದಿದ್ದಾರೆ. ಲೇಔಟ್‌ನ ಅಪ್ರೂವಲ್‌ಗೆ 18 ಲಕ್ಷ ರೂ., ಮೆಡಿಕಲ್ ಗ್ಯಾಸ್ ಸಂಬಂಧ 4 ಲಕ್ಷ ರೂ. ಲೇಔಟ್ ವಿಚಾರವಾಗಿ 4 ಲಕ್ಷ ರೂ., ಡಿ. 22ರಂದು ಆಸ್ಪತ್ರೆ ಕಾಮಗಾರಿ ಸಂಬಂಧ 20 ಲಕ್ಷ ರೂ. ಕ್ಲಬ್ ಗೆ ಕರೆಸಿಕೊಂಡು 13 ಲಕ್ಷ ಪಡೆದಿದ್ದಾರೆ. ಹೊಸ ಕಾಮಗಾರಿ ಕೆಲಸ ನೀಡಿ ಎಂದು ಅವರ ಮನೆಗೆ ಹೋದಾಗ 30 ಲಕ್ಷ ಹಣ ಅಡ್ವಾನ್ಸ್ ಆಗಿ ಕೇಳಿದ್ದರು ಎಂದು ಆರೋಪ ಮಾಡಿದರು.

“ಈ ಬಾರಿ ಕಾಂಟ್ಯಾಕ್ಟರ್ ಬಳಿ ಹಣ ಪಡೆದು ಚುನಾವಣೆ ಮಾಡುತ್ತೇನೆ ಎಂದು ತಿಪ್ಪಾರೆಡ್ಡಿ ಹೇಳಿದ್ದಾರೆ. ಇದೀಗ ಒಂದು ಆಡಿಯೋ ಬಿಡುಗಡೆ ಮಾಡಿದ್ದೇನೆ ಇನ್ನೂ 14-15 ಆಡಿಯೋ ಇವೆ. ಈ ಸಂಬಂಧ ನಾನು ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಕೇವಲ ಇವರೊಬ್ಬರೇ ಅಲ್ಲದೇ ಇನ್ನೂ 13 ಶಾಸಕರು ಹಾಗೂ ನಾಲ್ವರು ಸಚಿವರ ದಾಖಲೆಗಳು ನನ್ನ ಬಳಿ ಇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಮಂಜುನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...