Homeಕರ್ನಾಟಕಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಪಡೆದು ಕಾಮಗಾರಿ ಕೆಲಸ ನೀಡುತ್ತಾರೆ ಎಂದು ಈ ಹಿಂದೆ ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಇದೀಗ ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಲಂಚ ಪಡೆದಿರುವ ಬಗ್ಗೆ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಅವರು ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಿಪ್ಪಾರೆಡ್ಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, “ನಮ್ಮ ಜಿಲ್ಲೆಯಲ್ಲಿ ಯಾವತ್ತೂ ಲಂಚ, ಕಮೀಷನ್ ಪ್ರಸ್ತಾಪ ಇರಲಿಲ್ಲ. ಆದರೆ ಇದೀಗ ಕಾಮಗಾರಿಗೆ ಅಥವಾ ಸರ್ಕಾರದ ಯಾವುದೇ ಕೆಲಕ್ಕೆ 10% 4%, 2% ಲಂಚ ಪಡೆಯಲಾಗುತ್ತಿದೆ ಎಂದು ಕೆಲವು ದಾಖಲೆಗಲನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ನಗರದ ಪಿಡಬ್ಲ್ಯೂಡಿ ಕಟ್ಟಡ ಕಟ್ಟಿದ ಬಿಲ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಿಮಿಷದ ಆಡಿಯೋ ಬಿಡುಗಡೆ ಮಾಡಿದ್ದು, ಈ ಆಡಿಯೋದಲ್ಲಿ “ಆರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿ, ನಿನ್ನ ಹತ್ತಿರ ಮಾತಾಡಲ್ಲ, ಹಲವರ ಹತ್ರ ಅಡ್ಜಸ್ಟ್ ಆಗಿದ್ದೇನೆ. ನೀನು ಸಣ್ಣ ಅಥವಾ ದೊಡ್ಡ ಕಾಂಟ್ಯಾಕ್ಟರ್ ಇರಬಹುದು. ನಿಂಗೆ ಕೆಲಸ ನಿಲ್ಲಿಸು ಎಂದಿಲ್ಲ, ಇಂಜನಿಯರ್ ಗೆ ಹೇಳಿದ್ದೇನೆ” ಎನ್ನುವ ಮಾತುಗಳು ಇದರಲ್ಲಿದ್ದು, ಇದು ಪರೋಕ್ಷವಾಗಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಆಡಿಯೊ ಬಿಡುಗಡೆ ಬಳಿಕ ಮಾತನಾಡಿದ ಅವರು, “3 ವರ್ಷದಲ್ಲಿ ತಿಪ್ಪಾರೆಡ್ಡಿ ನನ್ನ ಬಳಿ 90 ಲಕ್ಷ ರೂ. ಹಣ ನಗದು ರೂಪದಲ್ಲಿ ಲಂಚ ಪಡೆದಿದ್ದಾರೆ. 1 ಕೋಟಿಗೆ 10 ಲಕ್ಷ ರೂ. ಲಂಚ ಪಡೆದಿದ್ದಾರೆ. 2019 ರಿಂದ ಇಲ್ಲಿಯವರೆಗೂ ಜಿಡಬ್ಲ್ಯೂಡಿ ಕಟ್ಟಡ ಕಾಮಗಾರಿ ಗೆ 12 ಲಕ್ಷ ರೂ., ಹಾಸ್ಪಿಟಲ್ ರಿಪೇರಿಗೆ 12.5 ಲಕ್ಷ ರೂ. ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಒಟ್ಟು 22 ಲಕ್ಷ ರೂ. ಹಣ ಲಂಚವಾಗಿ ಪಡೆದಿದ್ದಾರೆ. ಲೇಔಟ್‌ನ ಅಪ್ರೂವಲ್‌ಗೆ 18 ಲಕ್ಷ ರೂ., ಮೆಡಿಕಲ್ ಗ್ಯಾಸ್ ಸಂಬಂಧ 4 ಲಕ್ಷ ರೂ. ಲೇಔಟ್ ವಿಚಾರವಾಗಿ 4 ಲಕ್ಷ ರೂ., ಡಿ. 22ರಂದು ಆಸ್ಪತ್ರೆ ಕಾಮಗಾರಿ ಸಂಬಂಧ 20 ಲಕ್ಷ ರೂ. ಕ್ಲಬ್ ಗೆ ಕರೆಸಿಕೊಂಡು 13 ಲಕ್ಷ ಪಡೆದಿದ್ದಾರೆ. ಹೊಸ ಕಾಮಗಾರಿ ಕೆಲಸ ನೀಡಿ ಎಂದು ಅವರ ಮನೆಗೆ ಹೋದಾಗ 30 ಲಕ್ಷ ಹಣ ಅಡ್ವಾನ್ಸ್ ಆಗಿ ಕೇಳಿದ್ದರು ಎಂದು ಆರೋಪ ಮಾಡಿದರು.

“ಈ ಬಾರಿ ಕಾಂಟ್ಯಾಕ್ಟರ್ ಬಳಿ ಹಣ ಪಡೆದು ಚುನಾವಣೆ ಮಾಡುತ್ತೇನೆ ಎಂದು ತಿಪ್ಪಾರೆಡ್ಡಿ ಹೇಳಿದ್ದಾರೆ. ಇದೀಗ ಒಂದು ಆಡಿಯೋ ಬಿಡುಗಡೆ ಮಾಡಿದ್ದೇನೆ ಇನ್ನೂ 14-15 ಆಡಿಯೋ ಇವೆ. ಈ ಸಂಬಂಧ ನಾನು ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಕೇವಲ ಇವರೊಬ್ಬರೇ ಅಲ್ಲದೇ ಇನ್ನೂ 13 ಶಾಸಕರು ಹಾಗೂ ನಾಲ್ವರು ಸಚಿವರ ದಾಖಲೆಗಳು ನನ್ನ ಬಳಿ ಇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಮಂಜುನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...