Homeಕರ್ನಾಟಕಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಪಡೆದು ಕಾಮಗಾರಿ ಕೆಲಸ ನೀಡುತ್ತಾರೆ ಎಂದು ಈ ಹಿಂದೆ ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಇದೀಗ ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಲಂಚ ಪಡೆದಿರುವ ಬಗ್ಗೆ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಅವರು ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಿಪ್ಪಾರೆಡ್ಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, “ನಮ್ಮ ಜಿಲ್ಲೆಯಲ್ಲಿ ಯಾವತ್ತೂ ಲಂಚ, ಕಮೀಷನ್ ಪ್ರಸ್ತಾಪ ಇರಲಿಲ್ಲ. ಆದರೆ ಇದೀಗ ಕಾಮಗಾರಿಗೆ ಅಥವಾ ಸರ್ಕಾರದ ಯಾವುದೇ ಕೆಲಕ್ಕೆ 10% 4%, 2% ಲಂಚ ಪಡೆಯಲಾಗುತ್ತಿದೆ ಎಂದು ಕೆಲವು ದಾಖಲೆಗಲನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ನಗರದ ಪಿಡಬ್ಲ್ಯೂಡಿ ಕಟ್ಟಡ ಕಟ್ಟಿದ ಬಿಲ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಿಮಿಷದ ಆಡಿಯೋ ಬಿಡುಗಡೆ ಮಾಡಿದ್ದು, ಈ ಆಡಿಯೋದಲ್ಲಿ “ಆರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿ, ನಿನ್ನ ಹತ್ತಿರ ಮಾತಾಡಲ್ಲ, ಹಲವರ ಹತ್ರ ಅಡ್ಜಸ್ಟ್ ಆಗಿದ್ದೇನೆ. ನೀನು ಸಣ್ಣ ಅಥವಾ ದೊಡ್ಡ ಕಾಂಟ್ಯಾಕ್ಟರ್ ಇರಬಹುದು. ನಿಂಗೆ ಕೆಲಸ ನಿಲ್ಲಿಸು ಎಂದಿಲ್ಲ, ಇಂಜನಿಯರ್ ಗೆ ಹೇಳಿದ್ದೇನೆ” ಎನ್ನುವ ಮಾತುಗಳು ಇದರಲ್ಲಿದ್ದು, ಇದು ಪರೋಕ್ಷವಾಗಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಆಡಿಯೊ ಬಿಡುಗಡೆ ಬಳಿಕ ಮಾತನಾಡಿದ ಅವರು, “3 ವರ್ಷದಲ್ಲಿ ತಿಪ್ಪಾರೆಡ್ಡಿ ನನ್ನ ಬಳಿ 90 ಲಕ್ಷ ರೂ. ಹಣ ನಗದು ರೂಪದಲ್ಲಿ ಲಂಚ ಪಡೆದಿದ್ದಾರೆ. 1 ಕೋಟಿಗೆ 10 ಲಕ್ಷ ರೂ. ಲಂಚ ಪಡೆದಿದ್ದಾರೆ. 2019 ರಿಂದ ಇಲ್ಲಿಯವರೆಗೂ ಜಿಡಬ್ಲ್ಯೂಡಿ ಕಟ್ಟಡ ಕಾಮಗಾರಿ ಗೆ 12 ಲಕ್ಷ ರೂ., ಹಾಸ್ಪಿಟಲ್ ರಿಪೇರಿಗೆ 12.5 ಲಕ್ಷ ರೂ. ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಒಟ್ಟು 22 ಲಕ್ಷ ರೂ. ಹಣ ಲಂಚವಾಗಿ ಪಡೆದಿದ್ದಾರೆ. ಲೇಔಟ್‌ನ ಅಪ್ರೂವಲ್‌ಗೆ 18 ಲಕ್ಷ ರೂ., ಮೆಡಿಕಲ್ ಗ್ಯಾಸ್ ಸಂಬಂಧ 4 ಲಕ್ಷ ರೂ. ಲೇಔಟ್ ವಿಚಾರವಾಗಿ 4 ಲಕ್ಷ ರೂ., ಡಿ. 22ರಂದು ಆಸ್ಪತ್ರೆ ಕಾಮಗಾರಿ ಸಂಬಂಧ 20 ಲಕ್ಷ ರೂ. ಕ್ಲಬ್ ಗೆ ಕರೆಸಿಕೊಂಡು 13 ಲಕ್ಷ ಪಡೆದಿದ್ದಾರೆ. ಹೊಸ ಕಾಮಗಾರಿ ಕೆಲಸ ನೀಡಿ ಎಂದು ಅವರ ಮನೆಗೆ ಹೋದಾಗ 30 ಲಕ್ಷ ಹಣ ಅಡ್ವಾನ್ಸ್ ಆಗಿ ಕೇಳಿದ್ದರು ಎಂದು ಆರೋಪ ಮಾಡಿದರು.

“ಈ ಬಾರಿ ಕಾಂಟ್ಯಾಕ್ಟರ್ ಬಳಿ ಹಣ ಪಡೆದು ಚುನಾವಣೆ ಮಾಡುತ್ತೇನೆ ಎಂದು ತಿಪ್ಪಾರೆಡ್ಡಿ ಹೇಳಿದ್ದಾರೆ. ಇದೀಗ ಒಂದು ಆಡಿಯೋ ಬಿಡುಗಡೆ ಮಾಡಿದ್ದೇನೆ ಇನ್ನೂ 14-15 ಆಡಿಯೋ ಇವೆ. ಈ ಸಂಬಂಧ ನಾನು ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಕೇವಲ ಇವರೊಬ್ಬರೇ ಅಲ್ಲದೇ ಇನ್ನೂ 13 ಶಾಸಕರು ಹಾಗೂ ನಾಲ್ವರು ಸಚಿವರ ದಾಖಲೆಗಳು ನನ್ನ ಬಳಿ ಇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಮಂಜುನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...