Homeಮುಖಪುಟಇವಿಎಂ ಕುರಿತ ನಮ್ಮ ನಿರ್ದಿಷ್ಟ ಕಳವಳಗಳನ್ನು ಆಯೋಗ ಪರಿಹರಿಸಲಿಲ್ಲ: ಜೈರಾಂ ರಮೇಶ್

ಇವಿಎಂ ಕುರಿತ ನಮ್ಮ ನಿರ್ದಿಷ್ಟ ಕಳವಳಗಳನ್ನು ಆಯೋಗ ಪರಿಹರಿಸಲಿಲ್ಲ: ಜೈರಾಂ ರಮೇಶ್

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳು (ಇವಿಎಂಗಳು) ಮತ್ತು ಮತದಾರರ ದೃಢೀಕೃತ ಪೇಪರ್ ಆಡಿಟ್ ಟ್ರೇಲ್‌ಗಳ (ವಿವಿಪಿಎಟಿ) ನಿರ್ವಹಣೆಯ ಬಗ್ಗೆ ಪ್ರತಿಪಕ್ಷಗಳಿಗಿರುವ ಆತಂಕದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಭೇಟಿ ಮಾಡುವ ಬಗ್ಗೆ ಕಾಂಗ್ರೆಸ್ ಪಕ್ಷವು ತನ್ನ ವಿನಂತಿಯನ್ನು ಪುನರುಚ್ಚರಿಸಿದೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂವಹನಗಳ ಉಸ್ತುವಾರಿ ವಹಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು, ವಿವಿಧ ರಾಜಕೀಯ ಪಕ್ಷಗಳ ಇವಿಎಂ ಸಂಬಂಧಿತ ಕಳವಳಗಳನ್ನು ವಿವರಿಸುವ ಜ್ಞಾಪಕ ಪತ್ರವನ್ನು ಆಗಸ್ಟ್ 9, 2023ರಂದು ಸಲ್ಲಿಸಿರುವ ಕುರಿತು ನೆನಪಿಸಿದ್ದಾರೆ.

ಸಭೆ ನಡೆಸುವಂತೆ ಹಲವಾರು ಮನವಿಗಳ ಮಾಡಿದ ಹೊರತಾಗಿಯೂ, ವಿರೋಧ ಪಕ್ಷಗಳನ್ನು ಪ್ರತಿನಿಧಿಸುವ ನಿಯೋಗವನ್ನು, ಆಯೋಗದ ಅಧಿಕಾರಿಗಳು ಭೇಟಿಯಾಗಿಲ್ಲ; ಪ್ರತಿಕ್ರಿಯೆಯನ್ನೂ ನೀಡಿಲ್ಲ ಎಂದು ರಮೇಶ್ ಆರೋಪಿಸಿದ್ದಾರೆ.

ನಮ್ಮ ಜ್ಞಾಪಕ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಇಸಿಐ ಸಾಮಾನ್ಯ ಸ್ಪಷ್ಟೀಕರಣವನ್ನು ನೀಡಿದೆ. ಆದರೆ, ರಾಜಕೀಯ ಪಕ್ಷಗಳು ಎತ್ತಿದ ನಿರ್ದಿಷ್ಟ ಕಳವಳಗಳನ್ನು ಪರಿಹರಿಸಲಿಲ್ಲ. ನಮ್ಮ ಪುನರಾವರ್ತಿತ ವಿನಂತಿಗಳ ಹೊರತಾಗಿಯೂ ಯಾವುದೇ ಸಭೆಯನ್ನು ಏರ್ಪಡಿಸಿಲ್ಲ ಎಂದರು.

‘ಅಕ್ಟೋಬರ್ 2, 2023 ರಂದು ನಾವು ವಕೀಲರ ಮೂಲಕ ಫಾಲೋ-ಅಪ್ ವಿನಂತಿಯನ್ನು ಕಳುಹಿಸಿದ್ದೇವೆ. ಆಗಸ್ಟ್ 23, 2023 ರ ಆಯುಕ್ತರು ಸ್ಪಷ್ಟೀಕರಣದಲ್ಲಿ ತಿಳಿಸಲಾಗದ ನಿರ್ದಿಷ್ಟ ಕಾಳಜಿಯ ಕುರಿತು ಪ್ರಶ್ನೆ ಎತ್ತಲಾಗಿದೆ. ನಾವು ಅವರಿಂದ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿಲ್ಲ’ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 20, 2023 ರಂದು ನಾವು ಹಿಂದಿನ ದಿನ ನಡೆದ ಭಾರತೀಯ ಪಕ್ಷಗಳ ನಾಯಕರ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಆಧಾರದ ಮೇಲೆ “ವಿವಿಪಿಎಟಿಎಸ್ ಬಳಕೆಯ ಕುರಿತು ಚರ್ಚಿಸಲು ಮತ್ತು ಸಲಹೆಗಳನ್ನು ಒದಗಿಸಲು” ಇಸಿಐ ಜೊತೆ ಚರ್ಚಿಸಲು ಸಮಯಕ್ಕಾಗಿ ಮತ್ತೊಮ್ಮೆ ವಿನಂತಿ ಮಾಡಿದ್ದೇವೆ. ಈ ನಿರ್ಣಯದ ಪ್ರತಿಯನ್ನು ಹಸ್ತಾಂತರಿಸಲು ಮತ್ತು ಚರ್ಚೆ ನಡೆಸಲು ನಾವು ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇದುವರೆಗೆ ನಾವು ಯಶಸ್ವಿಯಾಗಲಿಲ್ಲ ಎಂದಿದ್ದಾರೆ.

‘ಇಂಡಿಯಾ ಪಕ್ಷಗಳ ನಾಯಕರ 3-4 ಸದಸ್ಯರ ತಂಡವು ನಿಮ್ಮನ್ನು ಮತ್ತು ನಿಮ್ಮ ಸಹೋದ್ಯೋಗಿಗಳನ್ನು ಭೇಟಿ ಮಾಡಲು ಮತ್ತು ವಿವಿ ಪ್ಯಾಟ್‌ ಕುರಿತ ನಮ್ಮ ದೃಷ್ಟಿಕೋನವನ್ನು ನಿಮ್ಮ ಮುಂದಿಡಲು ಕೆಲವು ನಿಮಿಷಗಳ ಅವಕಾಶಕ್ಕಾಗಿ ನಾನು ಮತ್ತೊಮ್ಮೆ ವಿನಂತಿಸುತ್ತೇನೆ. ಖಂಡಿತವಾಗಿ, ಇದು ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ವಿನಂತಿಯಾಗಿದೆ’ ಎಂದು ವಿನಂತಿಸಿರುವುದದಾಗಿ ಗಮನ ಸೆಳೆದಿದ್ದಾರೆ.

ಹಲವು ವಿರೋಧ ಪಕ್ಷಗಳ ನಾಯಕರು ಇವಿಎಂಗಳ ವಿಷಯದ ಬಗ್ಗೆ ಚರ್ಚಿಸಿದ್ದಾರೆ, ಅದರಲ್ಲೂ ವಿಶೇಷವಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಇತ್ತೀಚಿನ ವಿಜಯಗಳ ನಂತರ, ಇಡೀ ವಿಪಕ್ಷ ಒಕ್ಕೂಟವು ಈ ವಿಷಯವನ್ನು ಜನರ ಮುಂದೆ ಒಗ್ಗಟ್ಟಾಗಿ ಎತ್ತಬೇಕೆಂದು ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ; ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...