Homeಮುಖಪುಟಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ಶಾಸಕ ಡಿ.ಎಂ ಐಹೊಳೆ ಅವರು ಪ್ರತಿನಿಧಿಸುವ ರಾಯಭಾಗ ವಿಧಾನಸಭಾ ಕ್ಷೇತ್ರದಲ್ಲಿ ಕಮಿಷನ್ ಕಿರುಕುಳ ಮಿತಿ ಮೀರಿದೆ. ಹಾಗಾಗಿ ಮೇಖಳಿ ಗ್ರಾಮ ಪಂಚಾಯ್ತಿ ಸದಸ್ಯೆ ಸುಧಾ ಸಿದ್ದಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಚುನಾವಣೆಗೆ ಬಂಡವಾಳ ಕ್ರೋಡೀಕರಣಕ್ಕಾಗಿ 40% ಕಮಿಷನ್ ದಂಧೆಯನ್ನು ಗ್ರಾ. ಪಂಗೂ ತಲುಪಿಸಿದ ಕೀರ್ತಿ ಬಸವರಾಜ ಬೊಮ್ಮಾಯಿವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದೆ.

‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಾವು ಆರಿಸಿಬಂದು ಎರಡೂವರೆ ವರ್ಷ ಆಗಿದೆ. ಮಂದಿಯ ಕೆಲಸ ಮಾಡಿಸಲು ಆಗುತ್ತಿಲ್ಲ. ಪ್ರತಿ ಕೆಲಸಕ್ಕೂ ಲಂಚ ಕೇಳುತ್ತಾರೆ. ಹಾಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ತಿಳಿಸಿದ್ದಾರೆ.

‘14 ಮತ್ತು 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಶೇ 30ರಷ್ಟು ಕಮೀಷನ್ ಕೊಡಬೇಕೆಂದು ಹೇಳುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕಾಮಗಾರಿ ನಂತರ ಬಿಲ್ ಪಡೆಯಲು ಪಿಡಿಒ ಶೇ 10, ಎಂಜಿನಿಯರಿಂಗ್‌ ಶೇ 10, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿ ಶೇ 10 ಅಂತಾ ಒಟ್ಟು ಶೇ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ದೂರಿದ್ದಾರೆ.

ಇನ್ನು 10 ಸದಸ್ಯರು ರಾಜೀನಾಮೆ ನೀಡುತ್ತೇವೆ

‘ಕಮಿಷನ್ ಕೇಳುತ್ತಿರುವ ಅಭಿವೃದ್ಧಿ ಅಧಿಕಾರಿಯನ್ನು ವಜಾಗೊಳಿಸದಿದ್ದರೆ ಇನ್ನೂ 10 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಮತ್ತೊಬ್ಬ ಗ್ರಾ.ಪಂ ಸದಸ್ಯ ಸುನೀಲ ಖಿಚಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಲು ಬಹಳಷ್ಟು ಜನರ ಕಷ್ಟಪಡುತ್ತಿರುವಾಗ ಇಲ್ಲಿ ಕಮಿಷನ್ ಕಿರುಕುಳಕ್ಕೆ ಬೇಸೆತ್ತು ಗ್ರಾಮ ಪಂಚಾಯ್ತಿ ಸದಸ್ಯರೇ ರಾಜೀನಾಮೆ ನೀಡುತ್ತಿರುವುದು ಆಶ್ಚರ್ಯಕರವಾಗಿದೆ.

ಈ ಹಿಂದೆ ಗುತ್ತಿಗೆದಾರರು ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಆದರೆ ಪ್ರಧಾನಿಗಳು ಈ ಬಗ್ಗೆ ಗಮನ ನೀಡಲಿಲ್ಲ. ಆನಂತರ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಮಾಜಿ ಸಚಿವ ಈಶ್ವರಪ್ಪನವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆನಂತರ ಪಿಎಸ್‌ಐ ಹಗರಣ ಹೊರಬಂದಿತ್ತು. ಈಗ ಗ್ರಾಮ ಪಂಚಾಯ್ತಿ ಸದಸ್ಯರು ಸಹ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೆನೂ ಚುನಾವಣೆ ಎದುರಾಗಲಿದ್ದು ಇವೆಲ್ಲವೂ ಚುನಾವಣೆಯಲ್ಲಿ ಪ್ರಭಾವ ಬೀರುವ ವಿಷಯಗಳಾಗಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶ್ರೀನಿವಾಸಪುರ: ರಮೇಶ್ ಕುಮಾರ್‌ರವರಿಗೆ ಒಲಿಯುವುದೇ ಹ್ಯಾಟ್ರಿಕ್ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...