Homeಮುಖಪುಟಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ಶಾಸಕ ಡಿ.ಎಂ ಐಹೊಳೆ ಅವರು ಪ್ರತಿನಿಧಿಸುವ ರಾಯಭಾಗ ವಿಧಾನಸಭಾ ಕ್ಷೇತ್ರದಲ್ಲಿ ಕಮಿಷನ್ ಕಿರುಕುಳ ಮಿತಿ ಮೀರಿದೆ. ಹಾಗಾಗಿ ಮೇಖಳಿ ಗ್ರಾಮ ಪಂಚಾಯ್ತಿ ಸದಸ್ಯೆ ಸುಧಾ ಸಿದ್ದಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಚುನಾವಣೆಗೆ ಬಂಡವಾಳ ಕ್ರೋಡೀಕರಣಕ್ಕಾಗಿ 40% ಕಮಿಷನ್ ದಂಧೆಯನ್ನು ಗ್ರಾ. ಪಂಗೂ ತಲುಪಿಸಿದ ಕೀರ್ತಿ ಬಸವರಾಜ ಬೊಮ್ಮಾಯಿವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದೆ.

‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಾವು ಆರಿಸಿಬಂದು ಎರಡೂವರೆ ವರ್ಷ ಆಗಿದೆ. ಮಂದಿಯ ಕೆಲಸ ಮಾಡಿಸಲು ಆಗುತ್ತಿಲ್ಲ. ಪ್ರತಿ ಕೆಲಸಕ್ಕೂ ಲಂಚ ಕೇಳುತ್ತಾರೆ. ಹಾಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ತಿಳಿಸಿದ್ದಾರೆ.

‘14 ಮತ್ತು 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಶೇ 30ರಷ್ಟು ಕಮೀಷನ್ ಕೊಡಬೇಕೆಂದು ಹೇಳುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕಾಮಗಾರಿ ನಂತರ ಬಿಲ್ ಪಡೆಯಲು ಪಿಡಿಒ ಶೇ 10, ಎಂಜಿನಿಯರಿಂಗ್‌ ಶೇ 10, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿ ಶೇ 10 ಅಂತಾ ಒಟ್ಟು ಶೇ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ದೂರಿದ್ದಾರೆ.

ಇನ್ನು 10 ಸದಸ್ಯರು ರಾಜೀನಾಮೆ ನೀಡುತ್ತೇವೆ

‘ಕಮಿಷನ್ ಕೇಳುತ್ತಿರುವ ಅಭಿವೃದ್ಧಿ ಅಧಿಕಾರಿಯನ್ನು ವಜಾಗೊಳಿಸದಿದ್ದರೆ ಇನ್ನೂ 10 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಮತ್ತೊಬ್ಬ ಗ್ರಾ.ಪಂ ಸದಸ್ಯ ಸುನೀಲ ಖಿಚಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಲು ಬಹಳಷ್ಟು ಜನರ ಕಷ್ಟಪಡುತ್ತಿರುವಾಗ ಇಲ್ಲಿ ಕಮಿಷನ್ ಕಿರುಕುಳಕ್ಕೆ ಬೇಸೆತ್ತು ಗ್ರಾಮ ಪಂಚಾಯ್ತಿ ಸದಸ್ಯರೇ ರಾಜೀನಾಮೆ ನೀಡುತ್ತಿರುವುದು ಆಶ್ಚರ್ಯಕರವಾಗಿದೆ.

ಈ ಹಿಂದೆ ಗುತ್ತಿಗೆದಾರರು ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಆದರೆ ಪ್ರಧಾನಿಗಳು ಈ ಬಗ್ಗೆ ಗಮನ ನೀಡಲಿಲ್ಲ. ಆನಂತರ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಮಾಜಿ ಸಚಿವ ಈಶ್ವರಪ್ಪನವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆನಂತರ ಪಿಎಸ್‌ಐ ಹಗರಣ ಹೊರಬಂದಿತ್ತು. ಈಗ ಗ್ರಾಮ ಪಂಚಾಯ್ತಿ ಸದಸ್ಯರು ಸಹ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೆನೂ ಚುನಾವಣೆ ಎದುರಾಗಲಿದ್ದು ಇವೆಲ್ಲವೂ ಚುನಾವಣೆಯಲ್ಲಿ ಪ್ರಭಾವ ಬೀರುವ ವಿಷಯಗಳಾಗಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶ್ರೀನಿವಾಸಪುರ: ರಮೇಶ್ ಕುಮಾರ್‌ರವರಿಗೆ ಒಲಿಯುವುದೇ ಹ್ಯಾಟ್ರಿಕ್ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...