Homeಮುಖಪುಟಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ಶಾಸಕ ಡಿ.ಎಂ ಐಹೊಳೆ ಅವರು ಪ್ರತಿನಿಧಿಸುವ ರಾಯಭಾಗ ವಿಧಾನಸಭಾ ಕ್ಷೇತ್ರದಲ್ಲಿ ಕಮಿಷನ್ ಕಿರುಕುಳ ಮಿತಿ ಮೀರಿದೆ. ಹಾಗಾಗಿ ಮೇಖಳಿ ಗ್ರಾಮ ಪಂಚಾಯ್ತಿ ಸದಸ್ಯೆ ಸುಧಾ ಸಿದ್ದಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಚುನಾವಣೆಗೆ ಬಂಡವಾಳ ಕ್ರೋಡೀಕರಣಕ್ಕಾಗಿ 40% ಕಮಿಷನ್ ದಂಧೆಯನ್ನು ಗ್ರಾ. ಪಂಗೂ ತಲುಪಿಸಿದ ಕೀರ್ತಿ ಬಸವರಾಜ ಬೊಮ್ಮಾಯಿವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದೆ.

‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಾವು ಆರಿಸಿಬಂದು ಎರಡೂವರೆ ವರ್ಷ ಆಗಿದೆ. ಮಂದಿಯ ಕೆಲಸ ಮಾಡಿಸಲು ಆಗುತ್ತಿಲ್ಲ. ಪ್ರತಿ ಕೆಲಸಕ್ಕೂ ಲಂಚ ಕೇಳುತ್ತಾರೆ. ಹಾಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ತಿಳಿಸಿದ್ದಾರೆ.

‘14 ಮತ್ತು 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಶೇ 30ರಷ್ಟು ಕಮೀಷನ್ ಕೊಡಬೇಕೆಂದು ಹೇಳುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕಾಮಗಾರಿ ನಂತರ ಬಿಲ್ ಪಡೆಯಲು ಪಿಡಿಒ ಶೇ 10, ಎಂಜಿನಿಯರಿಂಗ್‌ ಶೇ 10, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿ ಶೇ 10 ಅಂತಾ ಒಟ್ಟು ಶೇ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ದೂರಿದ್ದಾರೆ.

ಇನ್ನು 10 ಸದಸ್ಯರು ರಾಜೀನಾಮೆ ನೀಡುತ್ತೇವೆ

‘ಕಮಿಷನ್ ಕೇಳುತ್ತಿರುವ ಅಭಿವೃದ್ಧಿ ಅಧಿಕಾರಿಯನ್ನು ವಜಾಗೊಳಿಸದಿದ್ದರೆ ಇನ್ನೂ 10 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಮತ್ತೊಬ್ಬ ಗ್ರಾ.ಪಂ ಸದಸ್ಯ ಸುನೀಲ ಖಿಚಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಲು ಬಹಳಷ್ಟು ಜನರ ಕಷ್ಟಪಡುತ್ತಿರುವಾಗ ಇಲ್ಲಿ ಕಮಿಷನ್ ಕಿರುಕುಳಕ್ಕೆ ಬೇಸೆತ್ತು ಗ್ರಾಮ ಪಂಚಾಯ್ತಿ ಸದಸ್ಯರೇ ರಾಜೀನಾಮೆ ನೀಡುತ್ತಿರುವುದು ಆಶ್ಚರ್ಯಕರವಾಗಿದೆ.

ಈ ಹಿಂದೆ ಗುತ್ತಿಗೆದಾರರು ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಆದರೆ ಪ್ರಧಾನಿಗಳು ಈ ಬಗ್ಗೆ ಗಮನ ನೀಡಲಿಲ್ಲ. ಆನಂತರ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಮಾಜಿ ಸಚಿವ ಈಶ್ವರಪ್ಪನವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆನಂತರ ಪಿಎಸ್‌ಐ ಹಗರಣ ಹೊರಬಂದಿತ್ತು. ಈಗ ಗ್ರಾಮ ಪಂಚಾಯ್ತಿ ಸದಸ್ಯರು ಸಹ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೆನೂ ಚುನಾವಣೆ ಎದುರಾಗಲಿದ್ದು ಇವೆಲ್ಲವೂ ಚುನಾವಣೆಯಲ್ಲಿ ಪ್ರಭಾವ ಬೀರುವ ವಿಷಯಗಳಾಗಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶ್ರೀನಿವಾಸಪುರ: ರಮೇಶ್ ಕುಮಾರ್‌ರವರಿಗೆ ಒಲಿಯುವುದೇ ಹ್ಯಾಟ್ರಿಕ್ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...