Homeಮುಖಪುಟಆಯೋಗವು ಯಾರಿಗೂ ಎಚ್ಚರಿಕೆ ನೀಡಿಲ್ಲ, ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ: ಕಾಂಗ್ರೆಸ್

ಆಯೋಗವು ಯಾರಿಗೂ ಎಚ್ಚರಿಕೆ ನೀಡಿಲ್ಲ, ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ: ಕಾಂಗ್ರೆಸ್

- Advertisement -
- Advertisement -

ಮತಗಟ್ಟೆಯಲ್ಲಿ ಚಲಾವಣೆಯಾದ ಮತಗಳ ಸಂಖ್ಯೆಯನ್ನು ದಾಖಲಿಸುವ ಫಾರ್ಮ್ 17ಸಿ ಅನ್ನು ಬಹಿರಂಗಪಡಿಸುವ ಪಕ್ಷದ ಬೇಡಿಕೆಯ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು (ಇಸಿಐ) ಕಾಂಗ್ರೆಸ್  ಪ್ರಶ್ನಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, “ನಮ್ಮ ದೂರಿನ ಹೊರತಾಗಿಯೂ, ಚುನಾವಣಾ ಆಯೋಗದ ಯಾವುದೇ ದಾಖಲೆಯಲ್ಲಿ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಿಲ್ಲ. ಆಯೋಗವು ಯಾರಿಗೂ ಎಚ್ಚರಿಕೆ ನೀಡಿಲ್ಲ, ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ಯಾವುದೇ ಆರೋಪಗಳನ್ನು ಮಾಡಿಲ್ಲ. ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸದಂತೆ ತಮ್ಮ ಸ್ಟಾರ್ ಪ್ರಚಾರಕರಿಗೆ ಹೇಳುವಂತೆ ಎರಡೂ ಪಕ್ಷಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ” ಎಂದು ಅವರು ಹೇಳಿದರು.

“ಚುನಾವಣಾ ಆಯೋಗವು ಡೇಟಾವನ್ನು ಟ್ಯಾಂಪರ್ ಮಾಡಲಾಗುವುದು ಎಂದು ಹೇಳುತ್ತದೆ, ಯಾರಾದರೂ ಫೋಟೋವನ್ನು ಮಾರ್ಫ್ ಮಾಡಬಹುದು. ಈ ಸಂದರ್ಭದಲ್ಲಿ ಯಾವುದೇ ಡೇಟಾವನ್ನು ಅಪ್ಲೋಡ್ ಮಾಡಲಾಗುವುದಿಲ್ಲ ಎಂದಿದೆ. ಚುನಾವಣಾ ಆಯೋಗದ ಈ ಉತ್ತರ ಕೇವಲ ತಪ್ಪಿಸಿಕೊಳ್ಳುವ ಪ್ರಕ್ರಿಯೆಯಾಗಿದೆ. ಆದರೆ, ಚುನಾವಣಾ ಆಯೋಗಕ್ಕೆ ಹಣ ಪಾವತಿಸಿ ಯಾರಾದರೂ ಈ ಡೇಟಾವನ್ನು ಪಡೆಯಬಹುದು. ಅದಕ್ಕಾಗಿಯೇ ಇದು ದುರದೃಷ್ಟಕರ ಮತ್ತು ಚುನಾವಣಾ ಆಯೋಗವು ಏಕಪಕ್ಷೀಯ ಒಲವನ್ನು ಹೊಂದಿದೆ ಎಂಬುದನ್ನು ತೋರಿಸುತ್ತದೆ” ಎಂದು ಸಿಂಘ್ವಿ ಹೇಳಿದರು.

ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಮತದಾನದ ಕುರಿತು ಅಂತಿಮ ದೃಢೀಕೃತ ಡೇಟಾವನ್ನು ಪ್ರಕಟಿಸಲು ಯಾವುದೇ ಕಾನೂನು ಅರ್ಹತೆ ಅಸ್ತಿತ್ವದಲ್ಲಿಲ್ಲ ಎಂದು ಇಸಿಐ ಮೇ 22 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಫಾರ್ಮ್ 17ಸಿ (ಪ್ರತಿ ಮತಗಟ್ಟೆಯಲ್ಲಿ ಚಲಾವಣೆಯಾದ ಮತಗಳು) ಯಿಂದ ಪಡೆದ ಮತದಾರರ ಮತದಾನದ ಮಾಹಿತಿಯನ್ನು ಬಿಡುಗಡೆ ಮಾಡುವುದರಿಂದ ಮತದಾರರ ಗೊಂದಲಕ್ಕೆ ಕಾರಣವಾಗಬಹುದು. ಏಕೆಂದರೆ, ಇದು ಅಂಚೆ ಮತಪತ್ರಗಳ ಎಣಿಕೆಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದೆ ಎಂದರು.

ಫಾರ್ಮ್ 17 ಸಿ ಭಾಗ-I ರ ಪ್ರತಿಯನ್ನು ಮತಗಟ್ಟೆಗೆ ನಿಯೋಜಿಸಲಾದ ಅರ್ಹ ಮತದಾರರ ಸಂಖ್ಯೆ, ಮತದಾರರ ನೋಂದಣಿಯಲ್ಲಿ ಮತದಾರರ ಸಂಖ್ಯೆ, ನಿರ್ಧರಿಸಿದ ಮತದಾರರ ಸಂಖ್ಯೆಯನ್ನು ವಿವರವಾಗಿ ಮತಗಟ್ಟೆ ಅಧಿಕಾರಿಗಳು ರಾಜಕೀಯ ಪಕ್ಷಗಳ ಪೋಲಿಂಗ್ ಏಜೆಂಟ್‌ಗಳಿಗೆ ನೀಡುತ್ತಾರೆ. ತಮ್ಮ ಹಕ್ಕು ಚಲಾಯಿಸದಿರುವುದು ಮತ್ತು ಮತ ಚಲಾಯಿಸಲು ಅನುಮತಿಸದ ಮತದಾರರ ಸಂಖ್ಯೆ. ಇವಿಎಂಗಳ ಪ್ರಕಾರ ದಾಖಲಾದ ಮತಗಳ ಸಂಖ್ಯೆಯನ್ನು ಪ್ರಿಸೈಡಿಂಗ್ ಅಧಿಕಾರಿಯು ನಿರ್ದಿಷ್ಟಪಡಿಸುವ ಅಗತ್ಯವಿದೆ. ಚುನಾವಣಾ ನಿಯಮಗಳ, 1961 ರ ಸೆಕ್ಷನ್ 49ಎಸ್‌ ಅಡಿಯಲ್ಲಿ ಅಧಿಕಾರಿಗೆ ರಶೀದಿಯನ್ನು ನೀಡಲು ಪೋಲಿಂಗ್ ಏಜೆಂಟ್‌ಗಳು ಕಡ್ಡಾಯಗೊಳಿಸಲಾಗಿದೆ.

ಇದೇ ಕುರಿತು ಪ್ರಶ್ನೆಗಳನ್ನು ಎತ್ತಿರುವ ಸಿಂಘ್ವಿ, “ಸುಪ್ರೀಂ ಕೋರ್ಟ್‌ನಲ್ಲಿ ನಮೂನೆ 17ಸಿ ಡೇಟಾವನ್ನು ಬಹಿರಂಗಪಡಿಸುವ ಬೇಡಿಕೆ ತುಂಬಾ ಸರಳವಾಗಿದೆ. ಯಾವ ಮತಗಟ್ಟೆಯಲ್ಲಿ ಯಾವ ಕ್ರಮಸಂಖ್ಯೆ ಇರುವ ಯಂತ್ರ ಅಳವಡಿಸಲಾಗಿದೆ? ಪ್ರತಿ ಯಂತ್ರದಲ್ಲಿ ಎಷ್ಟು ಮತಗಳು ಚಲಾವಣೆಯಾದವು? ಚುನಾವಣಾ ಆಯೋಗವು ಈ ಎಲ್ಲ ವಿಷಯಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಬೇಕು” ಎಂದರು.

ಇದನ್ನೂ ಓದಿ; ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...