Homeಕರ್ನಾಟಕಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

ಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

- Advertisement -
- Advertisement -

ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದ್ದು, ಇದಕ್ಕೆ ದೊಡ್ಡ ಚರ್ಚೆ ಯಾಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದು, ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

“ರಾಜ್ಯ ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ ವಿಷಯಗಳ ಬಗ್ಗೆ ಅಚ್ಚರಿ ಏನೂ ಇಲ್ಲ. ಇದು ಒಂದು ರೀತಿಯ ದಿನನಿತ್ಯದ ಕೆಲಸ ಆಗಿಹೋಗಿದೆ” ಎಂದು ಅವರು ಹೇಳೀದ್ದಾರೆ.

“ಹಿಂದೆ ಸಣ್ಣಪುಟ್ಟ ಮಟ್ಟದಲ್ಲಿ ಇಂಥದ್ದೆಲ್ಲ ನಡೆದುಕೊಂಡು ಹೋಗುತ್ತಿತ್ತು. ಈಗ ಸ್ವಲ್ಪ ದೊಡ್ಡ ಪ್ರಮಾಣಕ್ಕೆ ಏರಿಕೆ ಆಗಿದೆ. ಏಕೆಂದರೆ, ಬಜೆಟ್ ಗಾತ್ರ ಹೆಚ್ಚಾದಂತೆ ಕಮಿಷನ್ ಗಾತ್ರ ಕೂಡ ಹೆಚ್ಚಾಗುತ್ತಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

“ಗುತ್ತಿಗೆ ಕೆಲಸ ಮಾಡುವವರು ಇಂಥ ಕೆಲಸಗಳಿಗೆ ಪ್ರೋತ್ಸಾಹ ಕೊಡದನ್ನು ನಿಲ್ಲಸಬೇಕು. ಹಣ, ಕಮಿಷನ್ ಕೊಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಬೇಕು. ಗುತ್ತಿಗೆದಾರರು ಮೊದಲು ಬಿಗಿಯಾಗಿ ಇದ್ದರೆ ಈ ಸಮಸ್ಯೆಗಳು ಏಕೆ ಬರುತ್ತವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

“ನಾಳೆಯಿಂದ ಸದನದಲ್ಲಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎರಡು ದಿನ ಏನು ಚರ್ಚೆ ಮಾಡುತ್ತಾರೋ ನೋಡೋಣ. ಚುನಾವಣೆಯಲ್ಲಿ ಬದಲಾವಣೆ ತರುವ ಬಗ್ಗೆ ಏನು ಚರ್ಚೆ ಮಾಡುತ್ತಾರೆ. ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ದೊಡ್ಡ ಚರ್ಚೆ ಏಕೆ? ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ” ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

“ಈ ಬಗ್ಗೆ ಚರ್ಚೆ ಮಾಡಲು ನನಗೆ ಆಸಕ್ತಿ ಇಲ್ಲ. ಜನರು ಈ ಬಗ್ಗೆ ಮೊದಲ ತಿಳಿದುಕೊಳ್ಳಬೇಕು. ಈಗಲಾದರೂ ಗುತ್ತಿಗೆದಾರರು ಎಲ್ಲರೂ ಸೇರಿ ಕಮಿಷನ್ ಕೊಡಬಾರದು ಎನ್ನುವ ನಿರ್ಧಾರ ಮಾಡಿ. ಲಂಚ ಕೇಳಿದರೆ ಕೆಲಸವನ್ನೆ ಮಾಡಬೇಡಿ, ನಿಲ್ಲಸಿ. ಅದರಿಂದ ಏನೂ ಆಗಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಯಾರು ಇದ್ದೀರಿ, ಅವರು ಈ ಕೆಲಸ ಮಾಡಬೇಕು” ಎಂದು ಅವರು ಕಿವಿಮಾತು ಹೇಳಿದ್ದಾರೆ.

“40% ಪರ್ಸಂಟೇಜ್ ಅಂತ ಎಲ್ಲರೂ ಹೇಳುತ್ತಾರೆ. ಆದರೆ, ನೀವು ಮೊದಲು ನಾವು ಯಾವುದೇ ಕೆಲಸ ಮಾಡಲ್ಲ, ಕಮಿಷನ್ ಕೊಡಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಿ. ಆಗ ಎಲ್ಲವೂ ಸರಿ ಹೋಗುತ್ತದೆ. ನೀವೇ ಪ್ರೋತ್ಸಾಹ ನೀಡಿದರೆ ಇದು ಹೀಗೆ ಇರುತ್ತದೆ. ಅದು ಬಿಟ್ಟು ಬರೀ ಚರ್ಚೆ ಮಾಡಿದರೆ ಪ್ರಯೋಜನ ಇಲ್ಲ” ಎಂದು ಅವರು ಗುತ್ತಿಗೆದಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...