Homeಕರ್ನಾಟಕಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟಿಸ್‌ ರದ್ದುಗೊಳಿಸಲು ಆಯೋಗ ಶಿಫಾರಸು; ಡಾಕ್ಟರ್‌ಗಳು ಏನಂತಾರೆ?

ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟಿಸ್‌ ರದ್ದುಗೊಳಿಸಲು ಆಯೋಗ ಶಿಫಾರಸು; ಡಾಕ್ಟರ್‌ಗಳು ಏನಂತಾರೆ?

ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದ ‘ಕರ್ನಾಟಕ ಆಡಳಿತ ಸುಧಾರಣಾ ಆಯೋಗ’ವು ಈ ಕುರಿತು ಶಿಫಾರಸು ಮಾಡಿದೆ

- Advertisement -
- Advertisement -

ಸರ್ಕಾರಿ ವೈದ್ಯರು ಖಾಸಗಿಯಾಗಿಯೂ ವೈದ್ಯಕೀಯ ವೃತ್ತಿ (ಪ್ರಾಕ್ಟಿಸ್‌‌) ನಡೆಸುವುದನ್ನು ರದ್ದುಗೊಳಿಸುವ ಸಂಬಂಧ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದ ‘ಕರ್ನಾಟಕ ಆಡಳಿತ ಸುಧಾರಣಾ ಆಯೋಗ’ವು ಈ ಕುರಿತು ಶಿಫಾರಸ್ಸನ್ನೂ ಮಾಡಿದೆ.

ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ವೈದ್ಯರು ಅಧಿಕೃತ ಕರ್ತವ್ಯದ ಅವಧಿಯ ನಂತರ ಖಾಸಗಿಯಾಗಿ ವೈದ್ಯಕೀಯ ಅಭ್ಯಾಸದಲ್ಲಿ ತೊಡಗುವುದನ್ನು ಪರಿಗಣನೆಗೆ ತೆಗೆದುಕೊಂಡಿರುವ ಆಯೋಗ, ಎಲ್ಲ ಇಲಾಖೆಗಳಲ್ಲಿನ ಸರ್ಕಾರಿ ವೈದ್ಯರ ಖಾಸಗಿ ವೃತ್ತಿಯನ್ನು ನಿಷೇಧಿಸಲು ಶಿಫಾರಸು ಮಾಡಿದೆ.

ಫೆಬ್ರವರಿ 3ರಂದು ಸರ್ಕಾರಕ್ಕೆ ತನ್ನ ಶಿಫಾರಸುಗಳನ್ನು ಆಯೋಗ ಸಲ್ಲಿಸಿದ್ದು, “ಖಾಸಗಿ ಅಭ್ಯಾಸದ ಮೇಲಿನ ನಿಷೇಧದಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಜೆ ವೇಳೆ ಹೊರ ರೋಗಿಗಳ ವಿಭಾಗಗಳನ್ನು (OPDs) ಪ್ರಾರಂಭಿಸಲು ಸಾಧ್ಯವಾಗುತ್ತದೆ” ಎಂಬ ಅಂಶದತ್ತ ಗಮನ ಸೆಳೆಯಲಾಗಿದೆ.

“ವೈದ್ಯರು ಖಾಸಗಿ ಅಭ್ಯಾಸದಲ್ಲಿ ತೊಡಗುವುದನ್ನು ನಿರ್ಬಂಧಿಸಿದರೆ ಅವರನ್ನು ಖಾಲಿ ಹುದ್ದೆಗಳಲ್ಲಿ ಹೆಚ್ಚುವರಿ ಅವಧಿಯಲ್ಲಿ ಮುಂದುವರಿಸಬಹುದು. ಖಾಸಗಿ ಪ್ರಾಕ್ಟಿಸ್‌‌ ನಿಷೇಧಿಸಿದರೆ ಕರ್ತವ್ಯದ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹಾಜರಾತಿ ಖಚಿತಪಡಿಸಿಕೊಳ್ಳುವುದು ಸುಲಭವಾಗುತ್ತದೆ” ಎಂದು ಆಯೋಗದ ವರದಿ ತಿಳಿಸಿದೆ.

ಮೆಡಿಕಲ್ ವೈದ್ಯರು ಖಾಸಗಿ ಅಭ್ಯಾಸ ಮಾಡಬಹುದು ಅಥವಾ ಅಭ್ಯಾಸೇತರ ಭತ್ಯೆ (NPA) ಪಡೆಯಬಹುದು ಎಂಬ ಆಯ್ಕೆಯನ್ನೂ ಸರ್ಕಾರ ನೀಡುವುದನ್ನು ಆಯೋಗ ಗಮನಿಸಿದೆ. ಆದರೆ ನಗರ ಪ್ರದೇಶಗಳಲ್ಲಿ ಕಾರ್ಪೊರೇಟ್ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸರ್ಕಾರಿ ವೈದ್ಯರು ಖಾಸಗಿ ಪ್ರಾಕ್ಟಿಸ್‌ ಮಾಡಲು ಸಾಕಷ್ಟು ಅವಕಾಶಗಳಿವೆ.

ಖಾಸಗಿ ಅಭ್ಯಾಸದ ವಿರುದ್ಧವಾಗಿ ವಾದ ಮಂಡಿಸಿರುವ ಆಯೋಗವು ಕರ್ನಾಟಕದಲ್ಲಿ ಸಾಕಷ್ಟು ಸಂಖ್ಯೆಯ ವೈದ್ಯರಿದ್ದಾರೆ ಎನ್ನುತ್ತಿದೆ.

“ಇಲ್ಲಿಯವರೆಗೆ, ಸುಮಾರು 20 ರಾಜ್ಯಗಳು ಖಾಸಗಿ ಅಭ್ಯಾಸವನ್ನು ನಿಷೇಧಿಸಿವೆ. ಭಾರತ ಸರ್ಕಾರದ ವೈದ್ಯಕೀಯ ಸಂಸ್ಥೆಗಳಲ್ಲಿ ಮತ್ತು ಕೇಂದ್ರ ಆರೋಗ್ಯ ಸೇವಾ ನಿಯಮಗಳಲ್ಲಿಯೂ ನಿಷೇಧ ಮಾಡಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ಖಾತ್ರಿಪಡಿಸುವ ಹಿತದೃಷ್ಟಿಯಿಂದ ಎಲ್ಲಾ ಇಲಾಖೆಗಳ ಎಲ್ಲಾ ಸರ್ಕಾರಿ ವೈದ್ಯರ ಖಾಸಗಿ ಅಭ್ಯಾಸವನ್ನು ನಿಷೇಧಿಸಬೇಕು” ಎಂದು ಶಿಫಾರಸು ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಬಹುದು” ಎಂದು ಆಯೋಗ ಸೂಚಿಸಿದೆ.

ಅದೇ ರೀತಿಯಲ್ಲಿ ಸರ್ಕಾರಿ ಶಿಕ್ಷಕರು ಮತ್ತು ಉಪನ್ಯಾಸಕರು ಖಾಸಗಿ ಟ್ಯೂಷನ್ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ ಎಂಬುದನ್ನು ಆಯೋಗವು ಗಮನಿಸಿದೆ.

ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜೊಂದರ ಹಿರಿಯ ವೈದ್ಯರೊಬ್ಬರು ಮಾತನಾಡಿ, “ಖಾಸಗಿ ಅಭ್ಯಾಸವನ್ನು ನಿಷೇಧಿಸುವ ವಿಷಯವು ಪದೇ ಪದೇ ಚರ್ಚೆಯಾಗುತ್ತಿದೆ, ಆದರೆ ಅದು ಎಂದಿಗೂ ಜಾರಿಗೆ ಬಂದಿಲ್ಲ” ಎಂದಿದ್ದಾರೆ.

ಮಧುಮೇಹ ತಜ್ಞರಾದ ಡಾ.ಎಚ್.ವಿ.ವಾಸು ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಸರ್ಕಾರಿ ವೈದ್ಯರು ಖಾಸಗಿ ಪ್ರಾಕ್ಟಿಸ್‌ನಲ್ಲಿ ತೊಡಗುವುದನ್ನು ನಿರ್ಬಂಧಿಸುವುದು ಸೂಕ್ತ. ಅದು ಜಾರಿಯಾಗಲೇಬೇಕು. ಯಾಕೆಂದರೆ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಕೆಟ್ಟದ್ದಾಗಿದೆ. ಆದರೆ ವೈದ್ಯರನ್ನು ಸರ್ಕಾರಿ ಸೇವೆಯಲ್ಲಿ ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ ಎಂಬುದು ದೊಡ್ಡ ಸಮಸ್ಯೆ” ಎಂದು ವಿವರಿಸಿದರು.

ಮುಂದುವರಿದು, “ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಂದರ್ಶನ ನಡೆಸಿದಾಗ ಅಗತ್ಯವಿರುವಷ್ಟು ಹುದ್ದೆಗಳಿಗೆ ಅಭ್ಯರ್ಥಿಗಳೇ ಬರುವುದಿಲ್ಲ. ಯಾಕೆಂದರೆ ಖಾಸಗಿ ಪ್ರಾಕ್ಟಿಸ್ ತುಂಬಾ ಲಾಭದಾಯಕವಾಗಿದೆ. ಇದರ ಜೊತೆಗೆ ವೈದ್ಯಕೀಯ ಶಿಕ್ಷಣ ಕೂಡ ಸಾಕಷ್ಟು ದುಬಾರಿಯಾಗಿದೆ. ಇಡೀ ವೈದ್ಯಕೀಯ ವ್ಯವಸ್ಥೆಯೇ ಲಾಭಕೋರವಾಗಿದೆ. ಇದು ಬಗೆಹರಿಯದಿದ್ದರೆ ಬರೀ ನಿಯಮಗಳನ್ನು ರೂಪಿಸಿ ಪ್ರಯೋಜನವಿಲ್ಲ. ನೇಮಕಾತಿ ಮಾಡಿಕೊಂಡರೂ ವೈದ್ಯರು ಬಿಟ್ಟುಹೋಗುತ್ತಾರೆ” ಎಂದು ಅಭಿಪ್ರಾಯಪಟ್ಟರು.

“ಮೊದಲೆಲ್ಲ ವೈದ್ಯರಿಗೆ ಸಂಬಳ ತುಂಬಾ ಕಡಿಮೆ ಇತ್ತು. ಈಗ ಹೆಚ್ಚಳ ಮಾಡಿದ್ದರೂ ಸರ್ಕಾರಿ ಸೇವೆಗೆ ವೈದ್ಯರು ಬರುತ್ತಿಲ್ಲ. ಆಯೋಗದ ಶಿಫಾರಸ್ಸಿನಿಂದ ಖಾಸಗಿ ಪ್ರಾಕ್ಟಿಸ್ ತಡೆಯಬಹುದಾದ ಸಂಗತಿಯಲ್ಲ. ಇದರ ಹಿಂದೆ ವಿಶಾಲವಾದ ಪ್ರಶ್ನೆಗಳಿವೆ. ಅದನ್ನೂ ಗಣನೆಗೆ ತೆಗೆದುಕೊಳ್ಳಬೇಕು. ಖಾಸಗಿ ಪ್ರಾಕ್ಟಿಸ್‌ ರದ್ದು ಮಾಡಬೇಕೆಂಬುದರಲ್ಲಿ ಸಂಪೂರ್ಣ ಸಹಮತವಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. I deeply appreciate the aforementioned recommendations and if implemented, State Government would have initiated an yemon service to the needy public in hospitals in Teaching and non- Teaching in government sector. This measure will go a long way in curbing extraordinary commercialization of Medical services and fleecing the poor and downtrodden public will be saved from clutches of Medical Mafia. HOPE KARNATAKA STATE GOVERNMENT WILL NOT YIELD TO LOBBYING BY SHARKS IN GOVERNMENT MEDICAL SERVICES. NOW, BALL IS IN GOVERNMENT’S COURT WHICH WILL TEST THE POLITICAL WILL, IF ANY.

  2. It’s definitely good idea, only theoritical.. when you charge crores of money for the MBBS, MD, DM/MCh, how can you expect a medical graduate to settle for meagre Rs.50 thousand to 1 lakh salary.. when His/Her peers in the engineering & other streams with below par merit, competency (read most) will be getting 3 to 5 lakhs immediately after completion, youngsters start comparing..
    First step by govt should be halting the mushrooming of low quality private medical institutes, mostly run by politicians& businessmen..
    Same holds true for Education sector. Pre-Primary n Lower Primary will be looted with 1.5 -5 lakhs from private schools, which again are run by greedy, unethical politicians n businessmen( read most)

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...